ಮೈಸೂರು | ಯತೀಂದ್ರಗೆ ಲೋಕಸಭಾ ಟಿಕೆಟ್‌ ನೀಡುವಂತೆ ಒತ್ತಾಯಿಸಿ ಅಂಚೆ ಅಭಿಯಾನ

Date:

2024ರ ಲೋಕಸಭಾ ಚುನಾವಣೆಯಲ್ಲಿ ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್‌ ಟಿಕೆಟ್ ನೀಡಬೇಕೆಂದು ಆಗ್ರಹಿಸಿ ಕಾಂಗ್ರೆಸ್‌ ಮುಖಂಡರು ಮತ್ತು ಕಾರ್ಯಕರ್ತರು ಅಂಚೆ ಅಭಿಯಾನ ನಡೆಸಿದ್ದಾರೆ.

ಮೈಸೂರು ಮಹಾನಗರ ಪಾಲಿಕೆಯ ಕಾಂಗ್ರೆಸ್‌ ಸದಸ್ಯರು ಮತ್ತು ಕಾರ್ಯಕರ್ತರು ಮೈಸೂರಿನಲ್ಲಿ ಅಂಜೆ ಅಭಿಯಾನ ನಡೆಸಿದ್ದು, ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಯತೀಂದ್ರ ಅವರನ್ನು ಕಾಂಗ್ರೆಸ್‌ ಕಣಕ್ಕಿಳಿಸಬೇಕು ಎಂದು ಒತ್ತಾಯಿಸಿದ್ದಾರೆ.

ಅಂಚೆ ಪತ್ರಗಳನ್ನು ಅಂಚೆ ಪಟ್ಟಿಗೆಗೆ ಹಾಕಿ ಮಾತನಾಡಿದ ಕಾಂಗ್ರೆಸ್‌ ಮುಖಂಡ ಲೋಕೇಶ್ ಪಿಯಾ, “ಪ್ರತಾಪ್ ಸಿಂಹ ಸೋಲಿಸಲು ಯತೀಂದ್ರ ಸಿದ್ದರಾಮಯ್ಯ ಸೂಕ್ತ ಅಭ್ಯರ್ಥಿ. ಅವರಿಗೆ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ನೀಡಬೇಕು. ಅದಕ್ಕಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ಗೆ ಅಂಚೆ ಪತ್ರದ ಮೂಲಕ ಮನವಿ ಸಲ್ಲಿಸಿದ್ದೇವೆ” ಎಂದು ಹೇಳಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಯತೀಂದ್ರ ಅವರನ್ನು ಎಲ್ಲ ಸಮುದಾಯದ ಜನರು ಇಷ್ಟಪಡುತ್ತಾರೆ. ಮೈಸೂರು-ಕೊಡಗು ಕ್ಷೇತ್ರದಲ್ಲಿ ಬೇರೆ ಯಾರಿಗೆ ಕಾಂಗ್ರೆಸ್‌ ಟಿಕೆಟ್ ಕೊಟ್ಟರು, ಅವರು ಗೆಲ್ಲುವುದಿಲ್ಲ. ಯತೀಂದ್ರಗೆ ಟಿಕೆಟ್‌ ಕೊಟ್ಟರೆ, ಖಂಡಿತ ಅವರು ಗೆಲುವು ಸಾಧಿಸುತ್ತಾರೆ. ಅವರಿಗೆ ಟಿಕೆಟ್ ನೀಡಬೇಕು” ಎಂದು ಒತ್ತಾಯಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನನ್ನ ಜನರಿಗೆ ದೇವಸ್ಥಾನಗಳಲ್ಲಿ ಪ್ರವೇಶವಿಲ್ಲ; ನಾನು ಅಯೋಧ್ಯೆಗೆ ಹೋದರೆ ಸಹಿಸುವರೇ?: ಮಲ್ಲಿಕಾರ್ಜುನ ಖರ್ಗೆ

ದೇಶಾದ್ಯಂತ ಪರಿಶಿಷ್ಟ ಜಾತಿಗಳ (ಎಸ್‌ಸಿ) ಜನರು ಇನ್ನೂ ತಾರತಮ್ಯವನ್ನು ಎದುರಿಸುತ್ತಿದ್ದಾರೆ. ಪರಿಶಿಷ್ಠರಿಗೆ...

ಬೆಂಗಳೂರು | ಗೋವಾ ಕನ್ನಡಿಗರ ಮೇಲೆ ದೌರ್ಜನ್ಯ; ನ್ಯಾಯಕ್ಕಾಗಿ ರಾಷ್ಟ್ರಪತಿಗೆ ಕರವೇ ಮನವಿ

ಗೋವಾ ಕನ್ನಡಿಗರ ರಕ್ಷಣೆಗೆ ರಾಷ್ಟ್ರಪತಿಯರು ಮಧ್ಯೆ ಪ್ರವೇಶಿಸಿ ನ್ಯಾಯ ನೀಡಬೇಕು ಎಂದು...

ಚಿಕ್ಕಬಳ್ಳಾಪುರ | ಬಿಜೆಪಿಯನ್ನು ಅಧಿಕಾರದಿಂದ ಕಿತ್ತೊಗೆಯಲು ರೈತ ಸಂಘ ತೀರ್ಮಾನಿಸಿದೆ: ವೀರಸಂಗಯ್ಯ

ಬಿಜೆಪಿ ನೇತೃತ್ವದ ಎನ್‌ಡಿಎ ಒಕ್ಕೂಟ ಮತ್ತೊಮ್ಮೆ ಅಧಿಕಾರದ ಚುಕ್ಕಾಣಿ ಹಿಡಿಯುವುದನ್ನು ತಪ್ಪಿಸುವ...

ರಾಜ್ಯದಲ್ಲಿ ರಾಜ್ಯಪಾಲರ ಆಡಳಿತ ಹೇರಲು ಬಿಜೆಪಿಯಿಂದ ಹುನ್ನಾರ: ಡಿಸಿಎಂ ಡಿ.ಕೆ.ಶಿವಕುಮಾರ್

"ರಾಜ್ಯದ ಕಾನೂನು ಸುವ್ಯವಸ್ಥೆ ಸರಿಯಾಗಿದೆ. ಬಿಜೆಪಿಯವರು ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದ್ದಾರೆ....