ಮೈಷುಗರ್‌ ಸಕ್ಕರೆ ಕಾರ್ಖಾನೆಗೆ ವಿದ್ಯುತ್‌ ಪೂರೈಸಲು ಒತ್ತಾಯ: ಇಂಧನ ಸಚಿವರಿಗೆ ದಿನೇಶ್‌ ಗೂಳಿಗೌಡ ಪತ್ರ

Date:

Advertisements
  • ಬಾಕಿ ಇರುವ 40.86 ಕೋಟಿ ರೂ. ವಿದ್ಯುತ್ ಬಿಲ್‌ ಹಂತ ಹಂತವಾಗಿ ಕಟ್ಟಿಸಿಕೊಳ್ಳಲು ಮನವಿ
  • ವಿದ್ಯುತ್‌ ಪೂರೈಕೆ ಸ್ಥಗಿತಗೊಂಡರೆ ರೈತರಿಗೆ ಸಮಸ್ಯೆ ಆಗುವ ಕುರಿತು ಗಮನ ಸೆಳೆದ ಶಾಸಕ

ಮೈಷುಗರ್‌ ಸಕ್ಕರೆ ಕಾರ್ಖಾನೆಯು ಮಂಡ್ಯ ಭಾಗದ ರೈತರ ಜೀವನಾಡಿಯಾಗಿದೆ. ಇಲ್ಲಾಗುವ ಕಬ್ಬಿನ ಕಟಾವನ್ನು ನಂಬಿಕೊಂಡು ಲಕ್ಷಾಂತರ ರೈತ ಕುಟುಂಬಗಳು ಇವೆ. ಅಲ್ಲದೆ, ಈ ಬಾರಿ ಸುಮಾರು 5 ಲಕ್ಷ ಟನ್‌ ಕಬ್ಬನ್ನು ನುರಿಸುವ ಗುರಿಯನ್ನು ಹಾಕಿಕೊಂಡಿದೆ.

ಈಗ ಎದುರಾಗಿರುವ ಸಮಸ್ಯೆಯೆಂದರೆ ಈ ಹಿಂದಿನಿಂದಲೂ ನಷ್ಟದಲ್ಲಿದ್ದ ಕಂಪನಿಗೆ ವಿದ್ಯುತ್‌ ಬಿಲ್‌ ಕಟ್ಟಲು ಸಾಧ್ಯವಾಗಿಲ್ಲ. 40.86 ಕೋಟಿ ರೂಪಾಯಿಗಳ ವಿದ್ಯುತ್ ಬಿಲ್‌ ಬಾಕಿ ಇದ್ದು, ಇದನ್ನು ಹಂತ ಹಂತವಾಗಿ ಪಾವತಿ ಮಾಡಲು ಹಾಗೂ ಪ್ರಸಕ್ತ ಸಾಲಿನಲ್ಲಿ ಕಬ್ಬು ನುರಿಸಲು ಅಗತ್ಯ ವಿದ್ಯುತ್ ಸರಬರಾಜು ಮಾಡಲು ಚೆಸ್ಕಾಂನವರಿಗೆ ಆದೇಶಿಸಬೇಕು ಎಂದು ಮಂಡ್ಯ ಕ್ಷೇತ್ರದ ಶಾಸಕ ದಿನೇಶ್‌ ಗೂಳಿಗೌಡ ಅವರು ಇಂಧನ ಸಚಿವ ಕೆ ಜೆ ಜಾರ್ಜ್‌ ಅವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದರು.

ಮಂಡ್ಯ ಭಾಗದಲ್ಲಿ ಕಬ್ಬು ಪ್ರಮುಖ ಬೆಳೆಯಲ್ಲೊಂದಾಗಿದೆ. ಈ ಹಂತದಲ್ಲಿ ಕಬ್ಬು ನುರಿಸಲು ತೊಂದರೆಯಾದರೆ ಅದು ರೈತರ ಮೇಲೆ ಬಹಳವೇ ಪರಿಣಾಮವನ್ನು ಬೀರುತ್ತದೆ. ರೈತರ ಹಿತದೃಷ್ಟಿಯಿಂದ ತಾವು ಮಧ್ಯ ಪ್ರವೇಶ ಮಾಡಿ ಕಬ್ಬು ನುರಿಸಲು ವಿದ್ಯುತ್‌ ಸಮಸ್ಯೆ ಆಗದಂತೆ ಆದೇಶಿಸಬೇಕು ಎಂದು ಶಾಸಕ ದಿನೇಶ್‌ ಗೂಳಿಗೌಡ ಅವರು ಕೋರಿದ್ದಾರೆ.

Advertisements

ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಸಚಿವರು, ಅಧಿಕಾರಿಗಳ ಜತೆ ಚರ್ಚೆ ನಡೆಸುವುದಾಗಿ ತಿಳಿಸಿದರು.

ದಿನೇಶ್‌ ಗೂಳಿಗೌಡ

ಪತ್ರದಲ್ಲೇನಿದೆ?

“ಮೈಸೂರು ಸಕ್ಕರೆ ಕಂಪೆನಿ ನಿಯಮಿತ, ಮಂಡ್ಯ ಕಂಪನಿಯು ಸರ್ಕಾರದ ಸ್ವಾಮ್ಯಕ್ಕೆ ಒಳಪಟ್ಟಿದ್ದು, ಜಿಲ್ಲೆಯ ರೈತರ ಜೀವನಾಡಿಯಾಗಿದೆ. ಪ್ರಸಕ್ತ ಸಾಲಿನಲ್ಲಿ ಸುಮಾರು 5 ಲಕ್ಷ ಟನ್ ಕಬ್ಬನ್ನು ಈ ಕಾರ್ಖಾನೆಗೆ ಸರಬರಾಜು ಮಾಡಲು ರೈತರು ಒಪ್ಪಂದ ಮಾಡಿಕೊಂಡಿದ್ದಾರೆ. ಪ್ರಸ್ತುತ ಈ ಕಂಪೆನಿಯವರು ಚೆಸ್ಕಾಂಗೆ ಸುಮಾರು ರೂ.40.86 ಕೋಟಿಗಳ ವಿದ್ಯುತ್ ಬಿಲ್‌ ಬಾಕಿ ಮೊತ್ತವನ್ನು ಪಾವತಿಸಬೇಕಾಗಿದೆ. ಆದರೆ, ಕಂಪನಿಯ ಆರ್ಥಿಕ ಪರಿಸ್ಥಿತಿಯು ಇನ್ನೂ ಸುಧಾರಿಸದಿರುವುದರಿಂದ ವಿದ್ಯುತ್ ಬಾಕಿ ಮೊತ್ತವನ್ನು ಪಾವತಿಸಲು ಸಾಧ್ಯವಾಗಿರುವುದಿಲ್ಲ” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಅನ್ನಭಾಗ್ಯ ಯೋಜನೆ | 10 ಕೆ.ಜಿ ಅಕ್ಕಿಯ ಹಣವನ್ನು ಜನರ ಖಾತೆಗೆ ವರ್ಗಾಯಿಸಿ: ಬಿಜೆಪಿ

“ಆದುದರಿಂದ, ಪ್ರಸಕ್ತ ಹಂಗಾಮಿನಲ್ಲಿ ಕಬ್ಬನ್ನು ನುರಿಯಲು ವಿದ್ಯುತ್ ಅವಶ್ಯಕತೆಯಿರುವುದರಿಂದ ವಿದ್ಯುತ್ ಸರಬರಾಜಿನಲ್ಲಿ ಯಾವುದೇ ತೊಂದರೆಯಾಗದಂತೆ ವಿದ್ಯುತ್ ಸರಬರಾಜು ಮಾಡಲು ಮತ್ತು ಬಾಕಿ ಮೊತ್ತವನ್ನು ಹಂತ-ಹಂತವಾಗಿ ಪಾವತಿಸಲು ಸಕ್ಕರೆ ಕಾರ್ಖಾನೆಗೆ ಅನುಮತಿ ನೀಡಲು ವ್ಯವಸ್ಥಾಪಕ ನಿರ್ದೇಶಕರು, ಚೆಸ್ಕಾಂ ಇವರಿಗೆ ಆದೇಶಿಸಬೇಕು” ಎಂದು ಮಂಡ್ಯ ಜಿಲ್ಲೆಯ ರೈತರ ಪರವಾಗಿ ಶಾಸಕ ದಿನೇಶ್‌ ಗೂಳಿಗೌಡ ಕೋರಿದ್ದಾರೆ.

bfe5ebf00de2b670976597f37a6d2b77?s=150&d=mp&r=g
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

Download Eedina App Android / iOS

X