ಸಚಿವ ಸಂಪುಟದಲ್ಲಿ ಜೆಪಿ ನಡ್ಡಾ; ಮುಂದಿನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಯಾರು?

Date:

Advertisements

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಅವರ ಅಧಿಕಾರಾವಧಿಯು ಜೂನ್ 30ರಂದು ಕೊನೆಗೊಳ್ಳಲಿದೆ. ಜೊತೆಗೆ ನಡ್ಡಾ ಮೋದಿ 3.0 ಸಂಪುಟದ ಭಾಗವಾಗಿರುವುದರಿಂದ, ಬಿಜೆಪಿ ಈಗ ಮುಂದಿನ ಅಧ್ಯಕ್ಷರ ಹುಡುಕಾಟದಲ್ಲಿದೆ.

ನಡ್ಡಾ ಈ ಬಾರಿ ಪಿಯೂಷ್ ಗೋಯಲ್ ಅವರಿಂದ ಅಧಿಕಾರ ಸ್ವೀಕರಿಸಿ ರಾಜ್ಯಸಭೆಯ ಸಭಾನಾಯಕರಾಗಿ ನೇಮಕಗೊಳ್ಳುವ ಸಾಧ್ಯತೆಯಿದೆ. ಈ ವರ್ಷ ಹಲವಾರು ರಾಜ್ಯಗಳ ವಿಧಾನಸಭೆ ಚುನಾವಣೆಗಳು ಇರುವ ಕಾರಣದಿಂದಾಗಿ ಬಿಜೆಪಿ ಅಧ್ಯಕ್ಷ ಸ್ಥಾನವನ್ನು ಆದಷ್ಟು ಬೇಗ ತುಂಬಲು ಚುನಾವಣೆಯನ್ನು ನಡೆಸುವ ನಿರೀಕ್ಷೆಯಿದೆ.

ಇನ್ನು “ನಡ್ಡಾ ಅವರ ಅವಧಿಯು ಈ ತಿಂಗಳು ಕೊನೆಗೊಳ್ಳಲಿದ್ದು, ಪಕ್ಷವನ್ನು ಮುನ್ನಡೆಸಲು ಬಿಜೆಪಿ ಉತ್ತರಾಧಿಕಾರಿಯ ಹುಡುಕಾಟದಲ್ಲಿದೆ” ಎಂದು ಬಿಜೆಪಿಯ ಹಿರಿಯ ನಾಯಕರು ಹೇಳಿರುವುದಾಗಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

Advertisements

ಬಿಜೆಪಿಯಲ್ಲಿ ಈ ಹುದ್ದೆಗೆ ಹಲವು ಹೆಸರುಗಳು ಕೇಳಿಬರುತ್ತಿದೆ. ಆದರೆ ಈ ಸ್ಥಾನವನ್ನು ಪಡೆಯಲು ಮುಂಚೂಣಿಯಲ್ಲಿರುವುದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ. ಪ್ರಸ್ತುತ ಬಿಹಾರದಲ್ಲಿ ಬಿಜೆಪಿ ಉಸ್ತುವಾರಿ ವಹಿಸಿರುವ ವಿನೋದ್ ತಾವ್ಡೆ ಸಂಘಟನೆ ವಿಚಾರದಲ್ಲಿ ಹೆಸರುವಾಸಿಯಾಗಿದ್ದಾರೆ.

ಬಿಜೆಪಿ ಪ್ರಧಾನ ಕಾರ್ಯದರ್ಶಿ, ಪಶ್ಚಿಮ ಬಂಗಾಳ, ಒಡಿಶಾ ಮತ್ತು ತೆಲಂಗಾಣ ಉಸ್ತುವಾರಿ ಸುನಿಲ್ ಬನ್ಸಾಲ್, ಒಬಿಸಿ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ಮತ್ತು ಕೇಂದ್ರ ಸಮಿತಿ ಸದಸ್ಯ ಡಾ ಕೆ ಲಕ್ಷ್ಮಣ್, ರಾಜಸ್ಥಾನದ ಸಂಸದ ಓಂ ಮಾಥುರ್, ಹಮೀರ್‌ಪುರ ಸಂಸದ ಮತ್ತು ಮಾಜಿ ಕೇಂದ್ರ ಸಚಿವ ಅನುರಾಗ್ ಠಾಕೂರ್, ಬಿಜೆಪಿ ಮಹಿಳಾ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷೆ ವನತಿ ಶ್ರೀನಿವಾಸನ್, ಬಿಹಾರ ಸಂಸದ ಸಂಜಯ್ ಜೈಸ್ವಾಲ್ ಹೆಸರು ಕೂಡಾ ಕೇಳಿಬರುತ್ತಿದೆ.

ಇದನ್ನು ಓದಿದ್ದೀರಾ?  ಬೆಂಗಳೂರು | ವಿಚಾರಣೆಗೆ ಹಾಜರಾಗುವಂತೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ವಿಜಯೇಂದ್ರ, ಮಾಳವಿಯಾಗೆ ನೋಟಿಸ್‌

ಬನ್ಸಾಲ್ ಇತ್ತೀಚೆಗೆ ಚುನಾವಣೆಗಳಲ್ಲಿ ಉಸ್ತುವಾರಿ ವಹಿಸಿದ ಮೂರು ರಾಜ್ಯಗಳ ಪೈಕಿ ಎರಡರಲ್ಲಿ ಬಿಜೆಪಿ ಉತ್ತಮವಾಗಿ ಕಾರ್ಯನಿರ್ವಹಿಸಿರುವುದರಿಂದ ಅವರ ಹೆಸರನ್ನು ಕೂಡಾ ಪರಿಗಣಿಸಬಹುದು. ಆರ್‌ಎಸ್‌ಎಸ್‌ನೊಂದಿಗೆ ದೀರ್ಘಾವಧಿಯ ಸಂಬಂಧ ಹೊಂದಿರುವ ಕಾರಣ ಗುಜರಾತ್‌ನ ಉಸ್ತುವಾರಿಯೂ ಆಗಿರುವ ಮಾಥುರ್ ಕೂಡಾ ಈ ಸ್ಥಾನ ಗಳಿಸುವ ಸಾಧ್ಯತೆಯಿದೆ.

ಇನ್ನು ಬಿಜೆಪಿ ಮೊದಲ ಬಾರಿಗೆ ಮಹಿಳೆಯೊಬ್ಬರನ್ನು ಮುಖ್ಯಸ್ಥರನ್ನಾಗಿ ನೇಮಿಸಲು ನಿರ್ಧರಿಸಿದರೆ, ವನತಿ ಶ್ರೀನಿವಾಸನ್ ಪ್ರಮುಖ ಸ್ಪರ್ಧಿಯಾಗಲಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

Download Eedina App Android / iOS

X