ಬೆಳಗಾವಿ ಮಾಹಿತಿ ಆಯೋಗದ ಆಯುಕ್ತರ ಹುದ್ದೆ 2 ವರ್ಷದಿಂದ ಖಾಲಿ: ತಕ್ಷಣ ನೇಮಕಕ್ಕೆ ಆಗ್ರಹ

Date:

Advertisements

ಕರ್ನಾಟಕ ಮಾಹಿತಿ ಆಯೋಗದ ಬೆಳಗಾವಿ ಪೀಠದಲ್ಲಿ ಎರಡು ವರ್ಷಕ್ಕೂ ಹೆಚ್ಚು ಕಾಲದಿಂದ ಖಾಲಿ ಇರುವ ಮಾಹಿತಿ ಆಯುಕ್ತರ ಹುದ್ದೆಗೆ ಆಯುಕ್ತರನ್ನು ತಕ್ಷಣ ಭರ್ತಿ ಮಾಡಬೇಕು ಮತ್ತು ಸ್ಥಗಿತಗೊಂಡಿರುವ ಪೀಠದ ಕಾರ್ಯಾಚರಣೆಗೆ ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರವನ್ನು ನೈಜ ಹೋರಾಟಗಾರರ ವೇದಿಕೆ ಆಗ್ರಹಿಸಿದೆ.

ಈ ಸಂಬಂಧ ಸರ್ಕಾರಕ್ಕೆ ಪತ್ರ ಬರೆದಿರುವ ನೈಜ ಹೋರಾಟಗಾರರ ವೇದಿಕೆಯು, ‘2005ರಲ್ಲಿ ಭಾರತ ಸರ್ಕಾರದ ಆಡಳಿತ ಚುಕ್ಕಾಣಿಯನ್ನು ಹಿಡಿದಿದ್ದ ಯುಪಿಎ ಒಕ್ಕೂಟದ ಕಾಂಗ್ರೆಸ್ ಪಕ್ಷದ ಅಂದಿನ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ರವರು ದೇಶದಲ್ಲಿ ಪಾರದರ್ಶಕವಾದ ಆಡಳಿತ ನಡೆಸಲು ಬದ್ಧರಾಗಿ ಮಾಹಿತಿ ಹಕ್ಕು ಅಧಿನಿಯಮ 2005 ಜಾರಿಗೊಳಿಸಿ ಒಂದು ಇತಿಹಾಸವನ್ನು ಸೃಷ್ಟಿ ಮಾಡಿದ್ದರು. ಈ ನಿಟ್ಟಿನಲ್ಲಿ ದೇಶದಾದ್ಯಂತ ಮಾಹಿತಿ ಆಯೋಗವನ್ನು ರಚಿಸಿ ಮಾಹಿತಿ ಅಧಿನಿಯಮ 2005ರ ಪ್ರಕಾರ ಆಡಳಿತದ ಎಲ್ಲಾ ಮಾಹಿತಿಯು ನಾಗರಿಕರಿಗೆ ದೊರಕುವಂತೆ ಮಾಡಿತು’ ಎಂದು ಉಲ್ಲೇಖಿಸಿದ್ದಾರೆ.

Suvarna vidhan soudha 1

 

ಕರ್ನಾಟಕ ಸರ್ಕಾರವು ಬೆಂಗಳೂರಿನಿಂದ ಅನತಿ ದೂರದಲ್ಲಿರುವ ಬೆಳಗಾವಿ ಜಿಲ್ಲೆ ಹಾಗೂ ಮುಂಬೈ ಕರ್ನಾಟಕ ವ್ಯಾಪ್ತಿಯಲ್ಲಿರುವ ಏಳು ಜಿಲ್ಲೆಗಳ ನಾಗರಿಕರಿಗೆ ಸುಲಭವಾಗಿ ಮಾಹಿತಿ ದೊರಕುವಂತೆ ಅಲ್ಲಿ ಮಾಹಿತಿ ಆಯೋಗದ ಪೀಠವನ್ನು ರಚನೆ ಮಾಡಿ ಆಯುಕ್ತರನ್ನು ನೇಮಕ ಮಾಡಿತ್ತು. ಅಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮಾಹಿತಿ ಆಯುಕ್ತರು ರಾಜೀನಾಮೆ ನೀಡಿದ ಕಾರಣ ಖಾಲಿಯಾದ ಸದರಿ ಹುದ್ದೆಯು ಸುಮಾರು ಎರಡು-ಮೂರು ವರ್ಷಗಳಿಂದ ಭರ್ತಿ ಮಾಡದೆ, ಮಾಹಿತಿ ಆಯುಕ್ತರ ನೇಮಕಾತಿ ಮಾಡದೆ ಸರ್ಕಾರವು ತನ್ನ ಜವಾಬ್ದಾರಿಯಿಂದ ಹಿಂದೆ ಸರಿದಿರುವುದು ದುರದೃಷ್ಟಕರ ಸಂಗತಿ. ಬೆಳಗಾವಿ ಜಿಲ್ಲೆ ಸೇರಿದಂತೆ ಸುಮಾರು ಏಳು ಜಿಲ್ಲೆಗಳ ನಾಗರಿಕರು ಸಲ್ಲಿಸಿದ ಮೇಲ್ಮನವಿ ಸಂಖ್ಯೆ ಹದಿನೈದು ಸಾವಿರ ಗಡಿ ದಾಟಿ ಇತ್ಯರ್ಥಕ್ಕಾಗಿ ಕಾದು ಕುಳಿತಿದೆ ಎಂದು ಸಿಎಂ ಸಿದ್ದರಾಮಯ್ಯನವರಿಗೆ ಬರೆದ ಮನವಿಯಲ್ಲಿ ನೈಜ ಹೋರಾಟಗಾರರ ವೇದಿಕೆ ಮಾಹಿತಿ ನೀಡಿದೆ.

Advertisements

WhatsApp Image 2023 11 08 at 12.58.12 PM

ನೈಜ ಹೋರಾಟಗಾರರ ವೇದಿಕೆ

ಆದುದರಿಂದ, ಮಾಹಿತಿ ಆಯೋಗದ ಬೆಳಗಾವಿ ಪೀಠಕ್ಕೆ ತಕ್ಷಣ ಆಯುಕ್ತರನ್ನು ನೇಮಿಸಿ ಮಾಹಿತಿ ಆಯೋಗದ ಪೀಠವು ಪುನರಾರಂಭಗೊಳಿಸಿ ಇತ್ಯರ್ಥಕ್ಕೆ ಕಾಯುತ್ತಿರುವ 15 ಸಾವಿರಕ್ಕೂ ಹೆಚ್ಚು ಮೇಲ್ಮನವಿಗಳ ಇತ್ಯರ್ಥಕ್ಕೆ ಸರ್ಕಾರವು ಮುಂದಾಗಬೇಕು. ಸೂಕ್ತ ಕಾನೂನು ಕ್ರಮಗಳ ಪ್ರಕ್ರಿಯೆಗೆ ಚಾಲನೆ ನೀಡಿ, ನನೆಗುದಿಗೆ ಬಿದ್ದಿರುವ ಬೆಳಗಾವಿ ಮಾಹಿತಿ ಆಯೋಗದ ಪೀಠಕ್ಕೆ ಆಯುಕ್ತರನ್ನು ನೇಮಿಸಿ, ಮರು ಚಾಲನೆ ನೀಡಬೇಕೆಂದು ನೈಜ ಹೋರಾಟಗಾರರ ವೇದಿಕೆ ಸರ್ಕಾರವನ್ನು ಒತ್ತಾಯಿಸಿದೆ.

ನೈಜ ಹೋರಾಟಗಾರರ ವೇದಿಕೆಯ ಪರವಾಗಿ ಹೆಚ್ ಎಂ. ವೆಂಕಟೇಶ್, ಹಂದ್ರಾಳ್ ನಾಗಭೂಷಣ್, ಲೋಕೇಶ್ ಬಿ ಎಸ್, ಜಗದೀಶ್ ಟಿ, ಕುಣಿಗಲ್ ನರಸಿಂಹಮೂರ್ತಿ ಸರ್ಕಾರವನ್ನು ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X