ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ: ನಳಿನ್‍ಕುಮಾರ್ ಕಟೀಲ್‌

Date:

Advertisements
  • ಎರಡು ಅವಧಿಗೆ ಪಕ್ಷದ ರಾಜ್ಯಾಧ್ಯಕ್ಷರಾಗಿದ್ದ ಕಟೀಲ್
  • ಚುನಾವಣಾ ಸೋಲಿನ ಹೊಣೆ ಹೊತ್ತ ಬಿಜೆಪಿ ಅಧ್ಯಕ್ಷ

ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಕೊಟ್ಟಿಲ್ಲ. ರಾಜೀನಾಮೆ ಮಾಹಿತಿ ಸತ್ಯಕ್ಕೆ ದೂರವಾದುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್ ಕಟೀಲ್ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಬಳ್ಳಾರಿಯಲ್ಲಿ ವಿ. ಸೋಮಣ್ಣ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷೆಯನ್ನು ಪ್ರಕಟಿಸಿದ ಕುರಿತ ಪ್ರಶ್ನೆಗೆ ಉತ್ತರಿಸುವ ವೇಳೆ ಸೋಲಿನ ನೈತಿಕ ಹೊಣೆ ಹೊರುತ್ತೇನೆ. ಸೋಲಿನ ಕಾರಣಗಳ ಕುರಿತಂತೆ ಪಕ್ಷದ ಹಿರಿಯರಿಗೆ ಮಾಹಿತಿ ನೀಡಿದ್ದೇನೆ. 4 ವರ್ಷಗಳಿಂದ ನಾನು ಅಧ್ಯಕ್ಷ ಸ್ಥಾನದಲ್ಲಿದ್ದೇನೆ ಎಂದು ತಿಳಿಸಿದ್ದಾಗಿ ಹೇಳಿದ್ದೆ ಎಂದಿದ್ದಾರೆ.

ಪಕ್ಷದ ರಾಜ್ಯಾಧ್ಯಕ್ಷರ ನೇಮಕ ಕುರಿತಂತೆ ಪಕ್ಷವು ಸೂಕ್ತ ಸಂದರ್ಭದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಅವರು ತಿಳಿಸಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾಗಿ ನಾನು ಹೇಳಿಲ್ಲ. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿ ಸುದ್ದಿ ಬಿತ್ತರಿಸಲಾಗುತ್ತಿದೆ ಎಂದವರು ಹೇಳಿಕೊಂಡಿದ್ದಾರೆ.

Advertisements

ಬಳ್ಳಾರಿಯಲ್ಲಿ ಕಟೀಲ್‌ ಹೇಳಿದ್ದು

ಬಳ್ಳಾರಿಯಲ್ಲಿನ ಸುದ್ದಿಗೋಷ್ಠಿಯಲ್ಲಿ ಮಾತನಾಡುವ ವೇಳೆ ನಳಿನ್‌ ಕುಮಾರ್‌ ಕಟೀಲ್‌ ರಾಜ್ಯಾಧ್ಯಕ್ಷ ಹುದ್ದೆಗೆ ಹಲವರು ಇಟ್ಟಿರುವ ಬೇಡಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದರು. ಈ ವೇಳೆ ತಮ್ಮ ಅಧಿಕಾರ ಅವಧಿಯ ಬಗೆಗೂ ಮಾಹಿತಿ ಹಂಚಿಕೊಂಡ ಅವರು ಅಧ್ಯಕ್ಷ ಪದವಿ ಬದಲಾವಣೆ ಸಹಜವಾಗಿ ನಡೆಯುತ್ತದೆ. ಅದಕ್ಕೆ ಪಕ್ಷ ತಯಾರಾಗುತ್ತಿದೆ ಎಂದಿದ್ದರು.

ನಾನೀಗ ರಾಜ್ಯಾಧ್ಯಕ್ಷನಾಗಿ ಎರಡು ಅವಧಿಯನ್ನು ಪೂರ್ಣಗೊಳಿಸಿದೆ. ಅನಿರೀಕ್ಷಿತ ಫಲಿತಾಂಶದಿಂದ ಪಕ್ಷ ವಿಚಲಿತವಾಗಿದೆ. ಒಂದಷ್ಟು ಕಾರ್ಯಕರ್ತರನ್ನು ಮತ್ತೊಮ್ಮೆ ಗಟ್ಟಿಗೊಳಿಸಬೇಕಿದೆ ಎಂದು ಕಟೀಲ್ ಹೇಳಿದರು.press note

ಈ ಸುದ್ದಿ ಓದಿದ್ದೀರಾ?: ಲೋಕಸಭೆ ಚುನಾವಣೆ : ಜೆಡಿಎಸ್ ಜೊತೆ ಹೊಂದಾಣಿಕೆ ಸುಳಿವು ನೀಡಿದ ಸಿಪಿವೈ

ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸೂಕ್ತ ಹಾಗೂ ಅರ್ಹರನ್ನು ಪಕ್ಷ ನೇಮಕ ಮಾಡುತ್ತದೆ. ನಮ್ಮ ಪಕ್ಷದಲ್ಲೂ ಅನುಭವಿ ನಾಯಕರ ದಂಡೇ ಇದೆ. ಹೊಸ ಜವಾಬ್ದಾರಿ ಹೊರಲು ಹಲವರು ಸಿದ್ದರಿದ್ದಾರೆ ಎಂದರು.

ಹಾಗೆಯೇ ರಾಜ್ಯಾಧ್ಯಕ್ಷ ಹುದ್ದೆಗೆ ಬೇಡಿಕೆ ಇಟ್ಟಿರುವ ಮಾಜಿ ಸಚಿವ ಸೋಮಣ್ಣ ಅವರ ವಿಚಾರಕ್ಕೆ ಪ್ರತಿಕ್ರಿಯಿಸಿದ ನಳಿನ್ ಕುಮಾರ್ ಸೋಮಣ್ಣ ರಾಜ್ಯಾಧ್ಯಕ್ಷ ಸ್ಥಾನ ಕೇಳುವುದರಲ್ಲಿ ತಪ್ಪೇನಿಲ್ಲ ಎಂದು ಹೇಳಿದರು.

ನಳಿನ್‌ ಕುಮಾರ್‌ ಕಟೀಲ್‌

ಪ್ರಸ್ತುತ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾಗಿರುವ ನಳಿನ್‌ ಕುಮಾರ್‌ ಕಟೀಲ್‌ 2004ರಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗುವ ಮೂಲಕ ರಾಜಕೀಯ ರಂಗಕ್ಕೆ ಎಂಟ್ರಿ ಕೊಟ್ಟಿದ್ದರು.

ಕೃಷಿಕ ಹಾಗೂ ವೃತ್ತಿಯಿಂದ ಸಿವಿಲ್ ಕಾಂಟ್ರಾಕ್ಟರ್ ಆಗಿರುವ ಕಟೀಲ್‌ ರಾಜಕೀಯದಲ್ಲಿ ಹೆಸರು ಮಾಡಿದ್ದು, 2009ರಲ್ಲಿ ಅಂದಿನ ಲೋಕಸಭ ಚುನಾವಣೆಯಲ್ಲಿ ಮಾಜಿ ಗೃಹ ಮಂತ್ರಿ, ಕಾಂಗ್ರೆಸ್ಸಿನ ಜನಾರ್ಧನ ಪೂಜಾರಿ ಅವರನ್ನು 1,43,709 ಮತಗಳ ಅಂತರದಿಂದ ಸೋಲಿಸಿ ಸಂಸದರಾಗಿದ್ದರು. ಇದಾದ ಬಳಿಕ ಕಟೀಲ್‌ ಮುಂದಿನ ಸತತ ಎರಡು ಅವಧಿಗಳಲ್ಲೂ ಸಂಸದರಾಗಿ ಆಯ್ಕೆಯಾಗುತ್ತಾ ಬಂದಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

Download Eedina App Android / iOS

X