ದೇಶದಲ್ಲಿ ಭಾರೀ ವಿವಾದ ಎಬ್ಬಿಸಿರುವ ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದವು ದಿನದಿಂದ ದಿನಕ್ಕೆ ಒಂದೊಂದು ತಿರುವು ಪಡೆದುಕೊಳ್ಳುತ್ತಿದೆ.
ಪ್ರಶ್ನೆಪತ್ರಿಕೆ ಸೋರಿಕೆ ವಿವಾದಕ್ಕೆ ಸಂಬಂಧಿಸಿದಂತೆ ಇಂದು ದೆಹಲಿಯ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿಯವರ ಮೌನವನ್ನು ಪ್ರಶ್ನಿಸಿ, ಹರಿಹಾಯ್ದಿದ್ದಾರೆ.
“ನರೇಂದ್ರ ಮೋದಿಯವರು ರಷ್ಯಾ-ಉಕ್ರೇನ್ ಯುದ್ಧ ಹಾಗೂ ಇಸ್ರೇಲ್-ಪ್ಯಾಲೆಸ್ತೀನ್ ನಡುವೆ ನಡೆಯುತ್ತಿದ್ದ ಯುದ್ಧವನ್ನು ನಿಲ್ಲಿಸಿದ್ದೆ ಎಂದು ಬೊಗಳೆ ಬಿಡುತ್ತಿದ್ದರು. ಆದರೆ, ಅವರಿಗೆ ಭಾರತದಲ್ಲಿ ನಿರಂತರವಾಗಿ ನಡೆಯುತ್ತಿರುವ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ತಡೆಯಲು ಸಾಧ್ಯವಾಗುತ್ತಿಲ್ಲ ಎಂಬುದು ನಿಜಕ್ಕೂ ಅಚ್ಚರಿಯ ಸಂಗತಿ” ಎಂದು ವ್ಯಂಗ್ಯವಾಡುವ ಮೂಲಕ ರಾಹುಲ್ ಗಾಂಧಿ, ಪ್ರಧಾನಿಗೆ ಟಾಂಗ್ ನೀಡಿದ್ದಾರೆ.
RAHUL GANDHI ON FIRE ⚡
Narendra Modi claims to stop Russia & Ukraine war and Israel & Palestine war but can’t stop Paper Leaks
He literally destroyed ‘Propaganda Ke Paw Paw’ in one shot 😂🔥 pic.twitter.com/gFRwHCWmPT
— Ankit Mayank (@mr_mayank) June 20, 2024
ನೀಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳ ರದ್ದತಿಗೆ ಸಂಬಂಧಿಸಿದಂತೆ ಮೋದಿ ಹಾಗೂ ಬಿಜೆಪಿ, ಆರ್ಎಸ್ಎಸ್ ವಿರುದ್ಧ ವಾಗ್ದಾಳಿ ನಡೆಸಿದ ರಾಯ್ ಬರೇಲಿಯ ಸಂಸದ, “ದೇಶದ ಶಿಕ್ಷಣ ವ್ಯವಸ್ಥೆಯನ್ನು ಬಿಜೆಪಿಯ ಮಾತೃಸಂಸ್ಥೆ ವಶಪಡಿಸಿಕೊಂಡಿರುವುದರಿಂದ ಪ್ರಶ್ನೆ ಪತ್ರಿಕೆ ಸೋರಿಕೆಯಾಗುತ್ತಿದೆ” ಎಂದು ಆರೋಪಿಸಿದ್ದಾರೆ.
“ನಮ್ಮ ದೇಶದಲ್ಲಿ ವಿಶ್ವವಿದ್ಯಾನಿಲಯದ ಕುಲಪತಿಗಳನ್ನು ಅರ್ಹತೆಯ ಆಧಾರದ ಮೇಲೆ ಆಯ್ಕೆ ಮಾಡಲಾಗಿಲ್ಲ. ಅದರ ಬದಲಾಗಿ “ನಿರ್ದಿಷ್ಟ ಸಂಸ್ಥೆ”ಯೊಂದಿಗೆ ಅವರ ಸಂಪರ್ಕದ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
When I went on my Bharat Jodo Nyay Yatra, students told me that paper leaks are endemic in India. Those students who study, work hard, and are honest, suffer, and those who want to cheat, benefit. And this was repeated again and again.
Now we are seeing an expansion of the idea… pic.twitter.com/n5RInRiOV5
— Congress (@INCIndia) June 20, 2024
ಆರ್ಎಸ್ಎಸ್ ಅನ್ನು ಪರೋಕ್ಷವಾಗಿ ಉಲ್ಲೇಖಿಸುತ್ತಾ ಮಾತನಾಡಿದ ರಾಹುಲ್ ಗಾಂಧಿ, “ವಿಶ್ವವಿದ್ಯಾನಿಲಯದ ಉಪಕುಲಪತಿಗಳನ್ನು ಅರ್ಹತೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತಿಲ್ಲ. ಬದಲಾಗಿ, ನಿರ್ದಿಷ್ಟ ಸಂಸ್ಥೆಯೊಂದಿಗೆ ಅವರ ಸಂಪರ್ಕದ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತಿದೆ. ಈ ಸಂಘಟನೆ ಮತ್ತು ಬಿಜೆಪಿ ಸೇರಿ ನಮ್ಮ ಶಿಕ್ಷಣ ವ್ಯವಸ್ಥೆಗೆ ನುಗ್ಗಿ ನಾಶ ಮಾಡುತ್ತಿದೆ. ನೋಟು ಅಮಾನ್ಯೀಕರಣದ ಮೂಲಕ ಆರ್ಥಿಕತೆ ನಾಶ ನರೇಂದ್ರ ಮೋದಿ ಈಗ ಶಿಕ್ಷಣ ವ್ಯವಸ್ಥೆಯನ್ನು ಹಾಳು ಮಾಡಿದ್ದಾರೆ” ಎಂದರು.
“ವಿಶ್ವವಿದ್ಯಾನಿಲಯಗಳು ಬಿಜೆಪಿ ನಿಯಂತ್ರಣದಲ್ಲಿ ಇರುವವರೆಗೂ ದೇಶದಲ್ಲಿ ಪತ್ರಿಕೆ ಸೋರಿಕೆ ಮುಂದುವರಿಯುತ್ತದೆ. ಪ್ರಶ್ನೆ ಪತ್ರಿಕೆ ಸೋರಿಕೆಯು ದೇಶವಿರೋಧಿ ಚಟುವಟಿಕೆ. ಏಕೆಂದರೆ ಇದು ದೇಶದ ಭವಿಷ್ಯದ ಯುವಜನರನ್ನು ತೀವ್ರವಾಗಿ ನೋಯಿಸುತ್ತಿದೆ” ಎಂದು ರಾಹುಲ್ ಗಾಂಧಿ ತಿಳಿಸಿದರು.
ಬಿಜೆಪಿ ಆಡಳಿತವಿರುವ ಮಧ್ಯಪ್ರದೇಶದಲ್ಲಿ ವ್ಯಾಪಂ ಹಗರಣವನ್ನು ಉಲ್ಲೇಖಿಸಿದ ರಾಹುಲ್ ಗಾಂಧಿ, “ವ್ಯಾಪಂ ಹಗರಣವನ್ನು ಈಗ ದೇಶಾದ್ಯಂತ ಕೊಂಡೊಯ್ಯಲಾಗುತ್ತಿದೆ. ವ್ಯಾಪಂ ಮಧ್ಯಪ್ರದೇಶದಲ್ಲಿ ನಡೆದಿತ್ತು. ಈಗ ಮೋದಿ ಸರ್ಕಾರವು ಅದನ್ನು ರಾಷ್ಟ್ರದಾದ್ಯಂತ ಹರಡುತ್ತಿದೆ. ನೀಟ್ ಹಗರಣದ ಬಗ್ಗೆ ಪ್ರತಿಪಕ್ಷಗಳು ವಿದ್ಯಾರ್ಥಿಗಳ ಬೆಂಬಲಕ್ಕೆ ನಿಲ್ಲಲಿದೆ. ಸಂಸತ್ನಲ್ಲಿ ನಾವು ಪ್ರಬಲವಾಗಿ ಹೋರಾಟ ನಡೆಸುತ್ತೇವೆ. ಪತ್ರಿಕೆ ಸೋರಿಕೆ ತಡೆಯಲು ಸರಕಾರ ಆಸಕ್ತಿ ತೋರದ ಕಾರಣ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದಾರೆ” ಎಂದು ರಾಹುಲ್ ಗಾಂಧಿ ಹೇಳಿದರು.
ರಾಹುಲ್ ಗಾಂಧಿಯವರ ಸಂಪೂರ್ಣ ಪತ್ರಿಕಾಗೋಷ್ಠಿಯನ್ನು ಈ ಲಿಂಕ್ ಕ್ಲಿಕ್ ಮಾಡಿ, ವೀಕ್ಷಿಸಬಹುದು