- ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ
- ಸೂರತ್ ಜಿಲ್ಲಾ ನ್ಯಾಯಾಲಯದಿಂದ ರಾಹುಲ್ ಗಾಂಧಿ ದೋಷಿ ಎಂಬ ತೀರ್ಪು
ಪ್ರಧಾನಿ ನರೇಂದ್ರ ಮೋದಿ ಉಪನಾಮ ಹೇಳಿಕೆಗೆ ಸಂಬಂಧಿಸಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಸೂರತ್ ಜಿಲ್ಲಾ ನ್ಯಾಯಾಲಯವು ರಾಹುಲ್ ಅವರನ್ನು ದೋಷಿ ಎಂದು ತೀರ್ಪು ನೀಡಿದೆ.
ಆದರೆ ಇದಾದ ಕೆಲವೇ ಕ್ಷಣಗಳಲ್ಲೇ ನ್ಯಾಯಾಲಯವು ಅವರಿಗೆ ಜಾಮೀನು ಮಂಜೂರು ಮಾಡಿದ್ದು, ತನ್ನ ಆದೇಶವನ್ನು 30 ದಿನಗಳ ಅವಧಿಗೆ ತಡೆಹಿಡಿದಿದೆ. ತೀರ್ಪು ಪ್ರಶ್ನಿಸಿ ಹೈಕೋರ್ಟ್ ಅಥವಾ ಉನ್ನತ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಲು ಸಂಸದರಾದ ರಾಹುಲ್ ಅವರಿಗೆ ಅವಕಾಶ ನೀಡಲಾಗಿದೆ.
ಏನಿದು ಪ್ರಕರಣ?
ಏಪ್ರಿಲ್ 19, 2019ರಲ್ಲಿ ಕರ್ನಾಟಕದ ಕೋಲಾರದಲ್ಲಿ ನಡೆದ ಲೋಕಸಭಾ ಚುನಾವಣಾ ಪ್ರಚಾರ ಬಹಿರಂಗ ಸಭೆಯಲ್ಲಿ ರಾಹುಲ್ ಗಾಂಧಿ, ʻಮೋದಿʼ ಉಪನಾಮದ ಬಗ್ಗೆ ಟೀಕಿಸಿದ್ದರು. “ಎಲ್ಲಾ ಕಳ್ಳರು, ಅದು ನೀರವ್ ಮೋದಿ, ಲಲಿತ್ ಮೋದಿ ಅಥವಾ ನರೇಂದ್ರ ಮೋದಿ ಆಗಿರಲಿ, ಇವರೆಲ್ಲರೂ ಮೋದಿ ಎಂಬ ಸರ್ನೇಮ್ ಏಕೆ ಹೊಂದಿದ್ದಾರೆ” ಎಂದು ಭಾಷಣದ ನಡುವೆ ರಾಹುಲ್ ಪ್ರಸ್ತಾಪಿಸಿದ್ದರು.
ಇದರ ವಿರುದ್ಧ ಬಿಜೆಪಿ ಶಾಸಕ ಮತ್ತು ಗುಜರಾತ್ನ ಮಾಜಿ ಸಚಿವ ಪೂರ್ಣೇಶ್ ಮೋದಿ ನೀಡಿದ ದೂರಿನ ಮೇರೆಗೆ ಗಾಂಧಿ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಲಾಗಿತ್ತು.