ಕೋಟಾ: ನೀಟ್‌ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ 16 ವರ್ಷದ ವಿದ್ಯಾರ್ಥಿನಿ ಆತ್ಮಹತ್ಯೆ; ಈ ವರ್ಷದಲ್ಲಿ 25ನೇ ಘಟನೆ

Date:

Advertisements

ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಗೆ (ನೀಟ್) ತಯಾರಿ ನಡೆಸುತ್ತಿದ್ದ 16 ವರ್ಷದ ವಿದ್ಯಾರ್ಥಿನಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜಸ್ಥಾನದ ಕೋಟಾ ನಗರದಲ್ಲಿ ನಡೆದಿದೆ.

ಈ ವರ್ಷ ಕೇವಲ ಎಂಟು ತಿಂಗಳ ಅವಧಿಯಲ್ಲಿ ರಾಜಸ್ಥಾನದ ಕೋಚಿಂಗ್ ಹಬ್ ಆಗಿರುವ ಕೋಟಾದಲ್ಲಿ 25 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ರಾಂಚಿಯ ನಿವಾಸಿಯಾಗಿರುವ ವಿದ್ಯಾರ್ಥಿನಿಯು ಕೋಟಾ ನಗರದ ಬ್ಲೇಜ್ ಹಾಸ್ಟೆಲ್‌ನಲ್ಲಿ ವಾಸಿಸುತ್ತಿದ್ದಳು. ಆಕೆ ನೇಣು ಬಿಗಿದುಕೊಂಡಿದ್ದು, ಮೃತದೇಹವನ್ನು ಶವಾಗಾರದಲ್ಲಿ ಇರಿಸಲಾಗಿದೆ.

Advertisements

ವಾರ್ಷಿಕವಾಗಿ ಸುಮಾರು ಎರಡು ಲಕ್ಷ ವಿದ್ಯಾರ್ಥಿಗಳು ಜೆಇಇ ಮತ್ತು ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (ಎನ್‌ಇಇಟಿ) ಯಂತಹ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅರ್ಹತೆ ಪಡೆಯುವುದಕ್ಕಾಗಿ ಕೋಚಿಂಗ್‌ ಪಡೆಯಲು ಕೋಟಾಕ್ಕೆ ಸೇರುತ್ತಾರೆ.

ಈ ವರ್ಷ ಜಿಲ್ಲೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಒತ್ತಡಕ್ಕೆ ಸಂಬಂಧಿಸಿದಂತೆ 25 ವಿದ್ಯಾರ್ಥಿಗಳ ಆತ್ಮಹತ್ಯೆಯನ್ನು ಮಾಡಿಕೊಂಡಿದ್ದಾರೆ ಎಂದು ಅಧಿಕಾರಿಗಳು ವರದಿ ಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ನಿಫಾ ವೈರಸ್ | ಸೋಂಕಿತ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ; ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ

ರಾಜಸ್ಥಾನ ಪೊಲೀಸರ ಅಂಕಿಅಂಶಗಳ ಪ್ರಕಾರ, 2022 ರಲ್ಲಿ 15, 2019 ರಲ್ಲಿ 18, 2018 ರಲ್ಲಿ 20, 2017 ರಲ್ಲಿ 7, 2016 ರಲ್ಲಿ 17 ಮತ್ತು 2015 ರಲ್ಲಿ 18. ಕೋಟಾದಲ್ಲಿ 2020 ಮತ್ತು 2021 ರಲ್ಲಿ ಕೋಚಿಂಗ್‌ನಲ್ಲಿ ಯಾವುದೇ ವಿದ್ಯಾರ್ಥಿ ಆತ್ಮಹತ್ಯೆ ವರದಿಯಾಗಿಲ್ಲ. ಕೋವಿಡ್-19 ಸಾಂಕ್ರಾಮಿಕ ರೋಗದಿಂದಾಗಿ ಕೋಚಿಂಗ್‌ ಸಂಸ್ಥೆಗಳನ್ನು ಮುಚ್ಚಲಾಗಿತ್ತು.

ಕೋಟಾದಲ್ಲಿ ನಡೆಯುತ್ತಿರುವ ಆತ್ಮಹತ್ಯೆ ಪ್ರಕರಣಗಳ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಈ ಹಿಂದೆಯೇ ಎಲ್ಲ ಹಾಸ್ಟೆಲ್ ಕೊಠಡಿಗಳಲ್ಲಿ ಸ್ಪ್ರಿಂಗ್ ಲೋಡ್ ಫ್ಯಾನ್ ಅಳವಡಿಕೆ ಮತ್ತು ಪೇಯಿಂಗ್ ಗೆಸ್ಟ್ ಸೌಕರ್ಯಗಳನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಿತ್ತು.

ಕೋಟಾ ಜಿಲ್ಲಾಧಿಕಾರಿ ಓಂ ಪ್ರಕಾಶ್ ಬಂಕರ್ ಹೊರಡಿಸಿದ ಈ ಆದೇಶವು “ಹೆಚ್ಚುತ್ತಿರುವ ಕೋಚಿಂಗ್ ವಿದ್ಯಾರ್ಥಿಗಳ ಆತ್ಮಹತ್ಯೆಗಳನ್ನು ತಡೆಯುವ ಗುರಿಯನ್ನು ಹೊಂದುವ ಸಲುವಾಗಿ ಈ ವಸತಿ ಗೃಹಗಳಲ್ಲಿ ಓದುತ್ತಿರುವ ಮತ್ತು ವಾಸಿಸುವ ವಿದ್ಯಾರ್ಥಿಗಳಿಗೆ ಮಾನಸಿಕ ಬೆಂಬಲ, ಭದ್ರತೆಯನ್ನು ಒದಗಿಸಲಾಗುವುದು ಎಂದು ತಿಳಿಸಿದ್ದರು.”

ಏತನ್ಮಧ್ಯೆ, ರಾಜ್ಯದ ಕೋಚಿಂಗ್ ಇನ್‌ಸ್ಟಿಟ್ಯೂಟ್‌ಗಳಲ್ಲಿ, ವಿಶೇಷವಾಗಿ ಕೋಟಾದಲ್ಲಿ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಳ್ಳುವುದನ್ನು ತಪ್ಪಿಸಲು ರಾಜಸ್ಥಾನ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿತ್ತು. ಮಕ್ಕಳ ಮಾನಸಿಕ ಸಮಾಲೋಚನೆಯ ಮೇಲೆ ಕೇಂದ್ರೀಕರಿಸುವ ಅಗತ್ಯವನ್ನು ನ್ಯಾಯಾಲಯವು ಒತ್ತಿ ಹೇಳಿತ್ತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X