ಕೇರಳ | ತಪ್ಪು ಮಾಹಿತಿ ನೀಡಿದ ಗೂಗಲ್‌ ಮ್ಯಾಪ್‌: ಕಾರು ನದಿಗೆ ಉರುಳಿ ಇಬ್ಬರು ವೈದ್ಯರ ಸಾವು

Date:

Advertisements

ಗೂಗಲ್‌ ಮ್ಯಾಪ್‌ ನೀಡಿದ ತಪ್ಪಾದ ಮಾಹಿತಿಯಿಂದ ಕಾರು ನದಿಗೆ ಬಿದ್ದು ಇಬ್ಬರು ವೈದ್ಯರು ಮೃತಪಟ್ಟ ಘಟನೆ ಕೇರಳ ರಾಜ್ಯದ ಎರ್ನಾಕುಲಂನ ಗೊತ್ತುರುತ್ ಪ್ರದೇಶದಲ್ಲಿ ಭಾನುವಾರ ರಾತ್ರಿ ನಡೆದಿದೆ. ಕಾರಿನಲ್ಲಿದ್ದ ಮೂವರನ್ನು ಸ್ಥಳೀಯರು ರಕ್ಷಿಸಿದ್ದಾರೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಭಾರೀ ಮಳೆ ಮತ್ತು ಗೂಗಲ್‌ ಮ್ಯಾಪ್‌ ತಪ್ಪು ದಿಕ್ಕು ತೋರಿಸಿದ್ದು ಅಪಘಾತಕ್ಕೆ ಕಾರಣವಾಯಿತು. ಹೀಗಾಗಿ ಕಾರು ರಸ್ತೆಯಿಂದ ನದಿಗೆ ಧುಮುಕಿದೆ.

ಮೃತರನ್ನು ಕೊಲ್ಲಂನ ಅದ್ವೈತ್ ಮತ್ತು ಕೊಡುಂಗಲ್ಲೂರಿನ ಅಜ್ಮಲ್ ಎಂದು ಗುರುತಿಸಲಾಗಿದೆ. ಇಬ್ಬರೂ 28 ವರ್ಷ ವಯಸ್ಸಿನವರಾಗಿದ್ದು ಕೊಡುಂಗಲ್ಲೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದರು. ವೈದ್ಯ ಖಾಸಿಕ್ ಕಬೀರ್, ನರ್ಸಿಂಗ್ ವಿದ್ಯಾರ್ಥಿ ಜಿಸ್ಮನ್ ಮತ್ತು ಮೆಡಿಕಲ್ ವಿದ್ಯಾರ್ಥಿ ತಮನ್ನ ಅವರನ್ನು ರಕ್ಷಣೆ ಮಾಡಲಾಗಿದೆ. ಅವರ ಸ್ಥಿತಿ ಸುಧಾರಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಮಣಿಪುರ | ವಿದ್ಯಾರ್ಥಿಗಳ ಭೀಕರ ಹತ್ಯೆ ಪ್ರಕರಣ; ಪ್ರಮುಖ ಆರೋಪಿಗಳ ಬಂಧನ

ಕೊಚ್ಚಿಯಲ್ಲಿ ವೈದ್ಯ ಅದ್ವೈತ್ ಅವರ ಹುಟ್ಟಿದ ಹಬ್ಬದ ಪಾರ್ಟಿಯಲ್ಲಿ ಭಾಗವಹಿಸಿ ಕಾರಿನಲ್ಲಿ ವಾಪಸ್‌ ಬರುತ್ತಿದ್ದರು. ಅವರು ಮಧ್ಯರಾತ್ರಿ 12.35 ರ ಸುಮಾರಿಗೆ ಎಡಕ್ಕೆ ತಿರುಗುವ ಬದಲು, ಅವರು ಗೂಗಲ್ ನಕ್ಷೆಗಳಲ್ಲಿನ ನಿರ್ದೇಶನಗಳನ್ನು ಆಧರಿಸಿ ಲೇಬರ್ ಜಂಕ್ಷನ್‌ನಿಂದ ಬಲಕ್ಕೆ ತಿರುಗಿ ಜಲಾವೃತವಾದ ರಸ್ತೆಯನ್ನು ಪ್ರವೇಶಿಸುತ್ತಿದ್ದಾರೆ ಎಂಬುದಾಗಿ ಭಾವಿಸಿದ್ದಾರೆ.

ನೇರವಾಗಿ ದೇವಸ್ಥಾನದ ದೀಪಗಳನ್ನು ನೋಡಿದ್ದರಿಂದ ಅದು ರಸ್ತೆಯೇ ಎಂದು ಅವರು ತಿಳಿದು ಕಾರನ್ನು ಎದುರು ಚಲಾಯಿಸಿದರು. ಆದರೆ ವಾಸ್ತವವಾಗಿ ದೇವಾಲಯವು ನದಿಯ ಇನ್ನೊಂದು ಬದಿಯಲ್ಲಿತ್ತು ಎಂದು ವಡಕ್ಕೇಕರ ಪೊಲೀಸ್ ಠಾಣೆಯ ಅಧಿಕಾರಿ ಹೇಳಿದರು.

ಕಾರು ನೀರಿಗೆ ಬೀಳುವುದನ್ನು ಕಂಡ ಸ್ಥಳೀಯರು ತಕ್ಷಣ ಮೂವರನ್ನು ರಕ್ಷಿಸಿದ್ದಾರೆ. ಆದರೆ ಇಬ್ಬರು ವೈದ್ಯರು ಕೊಚ್ಚಿ ಹೋಗಿದ್ದರಿಂದ ಅವರ ರಕ್ಷಣೆ ಸಾಧ್ಯವಾಗಲಿಲ್ಲ. ಅಗ್ನಿಶಾಮಕ ದಳದವರು ಬಂದು ಇಬ್ಬರ ಮೃತದೇಹ ಮೇಲಕ್ಕೆತ್ತಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X