ಕೋಝಿಕ್ಕೋಡ್ | ಫುಟ್‌ಬಾಲ್ ಆಡುತ್ತಿದ್ದ ಇಬ್ಬರು ಬಾಲಕರು ಸಮುದ್ರಪಾಲು

Date:

ಸಮುದ್ರ ತೀರದಲ್ಲಿ ಫುಟ್‌ಬಾಲ್‌ ಆಟವಾಡುತ್ತಿದ್ದ ವೇಳೆ ಇಬ್ಬರು ಯುವಕರು ನೀರುಪಾಲಾದ ಘಟನೆ ಕೇರಳದ ಕೋಝಿಕ್ಕೋಡ್‌ನಲ್ಲಿ ಭಾನುವಾರ ನಡೆದಿದೆ.

ಕೋಝಿಕ್ಕೋಡ್ ಬೀಚ್‌ನ ಲಯನ್ಸ್ ಪಾರ್ಕ್ ಬಳಿ ಭಾನುವಾರ ಬೆಳಗ್ಗೆ ಐವರು ಸ್ನೇಹಿತರು ಫುಟ್‌ಬಾಲ್‌ ಆಡುತ್ತಿದ್ದ ವೇಳೆ ಚೆಂಡು ಸಮುದ್ರಕ್ಕೆ ಬಿದ್ದಿತ್ತು. ಚೆಂಡು ತರಲೆಂದು ನೀರಿಗೆ ಇಳಿದ ಬಾಲಕನಿಗೆ ಈಜು ಬಾರದ ಕಾರಣ ನೀರಲ್ಲಿ ಮುಳುಗಿದ್ದಾನೆ. ಈ ವೇಳೆ ಆತನನ್ನು ರಕ್ಷಿಸಲು ಇಬ್ಬರು ಸ್ನೇಹಿತರು ಸಮುದ್ರಕ್ಕೆ ಜಿಗಿದ್ದಿದ್ದಾರೆ. ಮೂವರೂ ಸಹ ಮರಳಿ ದಡ ಸೇರದೇ ಇದ್ದಾಗ ಬದಿಯಲ್ಲಿದ್ದ ಇಬ್ಬರು ಸಹಾಯಕ್ಕಾಗಿ ಬೊಬ್ಬೆ ಹಾಕಿದ್ದಾರೆ. ಈ ವೇಳೆ ಸ್ಥಳೀಯ ವ್ಯಕ್ತಿಯೊಬ್ಬರು ನೆರವಿಗೆ ಧಾವಿಸಿದ್ದು, ಓರ್ವ ಯುವಕನ್ನು ನೀರಿನಿಂದ ಮೇಲೆತ್ತುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಉಳಿದಿಬ್ಬರು ನೀರು ಪಾಲಾಗಿದ್ದಾರೆ.

Kozhikode beach

ನಾಪತ್ತೆಯಾಗಿರುವ ಕೋಝಿಕ್ಕೋಡ್‌ ನಗರದ ವಳವಣ್ಣ ನಿವಾಸಿಗಳಾದ ಮೊಹಮ್ಮದ್ ಆದಿಲ್ (18) ಮತ್ತು ಆದಿಲ್ ಹಸನ್ (16) ಅವರಿಗಾಗಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ. ಕರಾವಳಿ ಪೊಲೀಸ್ ಪಡೆ, ಅಗ್ನಿಶಾಮಕ ದಳದ ಸಿಬ್ಬಂದಿ, ಮುಳುಗು ತಜ್ಞರು ಹಾಗೂ ಮೀನುಗಾರರು ಶೋಧ ಕಾರ್ಯದಲ್ಲಿ ತೊಡಗಿದ್ದಾರೆ.

ಚೆಂಡನ್ನು ತೆಗೆಯಲು ನೀರಿಗಿಳಿದ ವೇಳೆ ಎತ್ತರದ ಅಲೆಗಳ ಹೊಡೆತಕ್ಕೆ ಸಿಲುಕಿ ಬಾಲಕರು ಕೊಚ್ಚಿಹೋಗಿದ್ದಾರೆ ಎಂದು ಕರಾವಳಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಜೋಸಿ ಟಿ ಕೆ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ದ್ವೇಷದ ಮಾರುಕಟ್ಟೆಯಲ್ಲಿ ಪ್ರೀತಿಯ ಅಂಗಡಿ’: ಬಿಎಸ್‌ಪಿ ಸಂಸದ ದಾನಿಶ್ ಅಲಿ ಭೇಟಿ ಮಾಡಿದ ರಾಹುಲ್

ಲೋಕಸಭೆಯಲ್ಲಿ ಬಿಜೆಪಿ ಸಂಸದನಿಂದ ಭಯೋತ್ಪಾದಕ ಎಂದು ನಿಂದನೆಗೊಳಗಾದ ಉತ್ತರ ಪ್ರದೇಶದ ಅಮ್ರೊಹ...

ಚಂದ್ರಯಾನ 3: ವಿಕ್ರಮ್, ಪ್ರಗ್ಯಾನ್‌ನಿಂದ ಇನ್ನೂ ಯಾವುದೇ ಸಿಗ್ನಲ್ ಬಂದಿಲ್ಲ ಎಂದ ಇಸ್ರೋ

ಚಂದ್ರನ ದಕ್ಷಿಣ ಧ್ರುವದಲ್ಲಿ ನಿಂತಿರುವ ಚಂದ್ರಯಾನ 3 ಯೋಜನೆಯ ಭಾಗವಾದ ವಿಕ್ರಮ್‌...

ಉದಯನಿಧಿ ಪೂರ್ವಜರು ಕೂಡ ಸನಾತನ ಧರ್ಮದ ಬಗ್ಗೆ ಮಾತನಾಡಿದ್ದರು: ನಟ ಕಮಲ್ ಹಾಸನ್

ಕೊಯಮತ್ತೂರಿನಲ್ಲಿ ಮಕ್ಕಳ್ ನೀಧಿ ಮೈಯಂ ಪಕ್ಷದ ಸಭೆಯಲ್ಲಿ ಹೇಳಿಕೆ ನೀಡಿದ ಸ್ಥಾಪಕ ಪೆರಿಯಾರ್...

ಬಿಜೆಪಿ ಸಂಸದನಿಂದ ಅವಹೇಳನ: ಸ್ಪೀಕರ್‌ ವಿರುದ್ಧ ಸಿಡಿದೆದ್ದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಮರ್ಯಾದಾ ಪುರುಷ ಸ್ಪೀಕರ್ ಅವರೇ ಏನು ಕ್ರಮ ಕೈಗೊಳ್ಳುತ್ತೀರಿ? ಬಹಿರಂಗವಾಗಿಯೇ ಪ್ರಶ್ನಿಸಿದ...