ಕೋಝಿಕ್ಕೋಡ್ | ಫುಟ್‌ಬಾಲ್ ಆಡುತ್ತಿದ್ದ ಇಬ್ಬರು ಬಾಲಕರು ಸಮುದ್ರಪಾಲು

Date:

ಸಮುದ್ರ ತೀರದಲ್ಲಿ ಫುಟ್‌ಬಾಲ್‌ ಆಟವಾಡುತ್ತಿದ್ದ ವೇಳೆ ಇಬ್ಬರು ಯುವಕರು ನೀರುಪಾಲಾದ ಘಟನೆ ಕೇರಳದ ಕೋಝಿಕ್ಕೋಡ್‌ನಲ್ಲಿ ಭಾನುವಾರ ನಡೆದಿದೆ.

ಕೋಝಿಕ್ಕೋಡ್ ಬೀಚ್‌ನ ಲಯನ್ಸ್ ಪಾರ್ಕ್ ಬಳಿ ಭಾನುವಾರ ಬೆಳಗ್ಗೆ ಐವರು ಸ್ನೇಹಿತರು ಫುಟ್‌ಬಾಲ್‌ ಆಡುತ್ತಿದ್ದ ವೇಳೆ ಚೆಂಡು ಸಮುದ್ರಕ್ಕೆ ಬಿದ್ದಿತ್ತು. ಚೆಂಡು ತರಲೆಂದು ನೀರಿಗೆ ಇಳಿದ ಬಾಲಕನಿಗೆ ಈಜು ಬಾರದ ಕಾರಣ ನೀರಲ್ಲಿ ಮುಳುಗಿದ್ದಾನೆ. ಈ ವೇಳೆ ಆತನನ್ನು ರಕ್ಷಿಸಲು ಇಬ್ಬರು ಸ್ನೇಹಿತರು ಸಮುದ್ರಕ್ಕೆ ಜಿಗಿದ್ದಿದ್ದಾರೆ. ಮೂವರೂ ಸಹ ಮರಳಿ ದಡ ಸೇರದೇ ಇದ್ದಾಗ ಬದಿಯಲ್ಲಿದ್ದ ಇಬ್ಬರು ಸಹಾಯಕ್ಕಾಗಿ ಬೊಬ್ಬೆ ಹಾಕಿದ್ದಾರೆ. ಈ ವೇಳೆ ಸ್ಥಳೀಯ ವ್ಯಕ್ತಿಯೊಬ್ಬರು ನೆರವಿಗೆ ಧಾವಿಸಿದ್ದು, ಓರ್ವ ಯುವಕನ್ನು ನೀರಿನಿಂದ ಮೇಲೆತ್ತುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಉಳಿದಿಬ್ಬರು ನೀರು ಪಾಲಾಗಿದ್ದಾರೆ.

Kozhikode beach

ನಾಪತ್ತೆಯಾಗಿರುವ ಕೋಝಿಕ್ಕೋಡ್‌ ನಗರದ ವಳವಣ್ಣ ನಿವಾಸಿಗಳಾದ ಮೊಹಮ್ಮದ್ ಆದಿಲ್ (18) ಮತ್ತು ಆದಿಲ್ ಹಸನ್ (16) ಅವರಿಗಾಗಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ. ಕರಾವಳಿ ಪೊಲೀಸ್ ಪಡೆ, ಅಗ್ನಿಶಾಮಕ ದಳದ ಸಿಬ್ಬಂದಿ, ಮುಳುಗು ತಜ್ಞರು ಹಾಗೂ ಮೀನುಗಾರರು ಶೋಧ ಕಾರ್ಯದಲ್ಲಿ ತೊಡಗಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಚೆಂಡನ್ನು ತೆಗೆಯಲು ನೀರಿಗಿಳಿದ ವೇಳೆ ಎತ್ತರದ ಅಲೆಗಳ ಹೊಡೆತಕ್ಕೆ ಸಿಲುಕಿ ಬಾಲಕರು ಕೊಚ್ಚಿಹೋಗಿದ್ದಾರೆ ಎಂದು ಕರಾವಳಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಜೋಸಿ ಟಿ ಕೆ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಡಿಡಿ ನ್ಯೂಸ್ ಲೋಗೊ ಬಣ್ಣ ಕೇಸರೀಕರಣ: ವ್ಯಾಪಕ ಆಕ್ರೋಶ

ಕೇಂದ್ರ ಸರ್ಕಾರ ಅಧೀನದ ವಿದ್ಯುನ್ಮಾನ ಮಾಧ್ಯಮ ಸಂಸ್ಥೆ ಡಿಡಿ ನ್ಯೂಸ್‌ ಲೋಗೊ...

ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸುವ ಹೋರಾಟ ಇಂದಿನಿಂದ ಶುರು: ಮಲ್ಲಿಕಾರ್ಜುನ ಖರ್ಗೆ

ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಇಂದಿನಿಂದ ಆರಂಭವಾಗಲಿದ್ದು, ಕಾಂಗ್ರೆಸ್ ಅಧ್ಯಕ್ಷ...

ಮುಂಬೈ ಗೆದ್ದರೂ ನಾಯಕ ಹಾರ್ದಿಕ್ ಪಾಂಡ್ಯಗೆ ಬಿಸಿಸಿಐನಿಂದ ಭಾರಿ ದಂಡ

ನಿನ್ನೆ ಮುಲ್ಲನ್‌ಪುರ್‌ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2024ನೇ ಆವೃತ್ತಿಯ 33ನೇ ಪಂದ್ಯದಲ್ಲಿ...

ನೌಕಾಪಡೆಯ ನೂತನ ಮುಖ್ಯಸ್ಥರಾಗಿ ಡಿ ಕೆ ತ್ರಿಪಾಠಿ ನೇಮಕ

ಭಾರತದ ಮುಂದಿನ ನೌಕಾಪಡೆಯ ಮುಖ್ಯಸ್ಥರನ್ನಾಗಿ ಡಿ ಕೆ ತ್ರಿಪಾಠಿ ಅವರನ್ನು ಕೇಂದ್ರ...