11 ಬುಡಕಟ್ಟು ಮಹಿಳೆಯರ ಅತ್ಯಾಚಾರ ಪ್ರಕರಣ; 21 ಆಂಧ್ರ ಪೊಲೀಸರ ಖುಲಾಸೆ

Date:

ಆಂಧ್ರ ಪ್ರದೇಶದ ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯ ಹಳ್ಳಿಯೊಂದರಲ್ಲಿ 16 ವರ್ಷಗಳ ಹಿಂದೆ 11 ಬುಡಕಟ್ಟು ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ ಪ್ರಕರಣದಲ್ಲಿ 21 ಪೊಲೀಸರನ್ನು ವಿಶೇಷ ನ್ಯಾಯಾಲಯವು ಖುಲಾಸೆಗೊಳಿಸಿದೆ.

- Advertisement -

ನ್ಯಾಯಯುತ ಮತ್ತು ನಿಷ್ಪಕ್ಷಪಾತ ತನಿಖೆ ನಡೆಸಿ ಆರೋಪಿಗಳ ತಪ್ಪನ್ನು ಸಾಬೀತು ಮಾಡುವಲ್ಲಿ ಇಬ್ಬರು ತನಿಖಾಧಿಕಾರಿಗಳು ವಿಫಲರಾದ ಕಾರಣ ಆರೋಪಿಗಳನ್ನು ಖುಲಾಸೆಗೊಳಿಸಲಾಗಿದೆ ಎಂದು ನ್ಯಾಯಾಲಯ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಆಗಸ್ಟ್ 2007 ರಲ್ಲಿ ಗ್ರೇಹೌಂಡ್ಸ್ ವಿಶೇಷ ತಂಡಕ್ಕೆ ಸೇರಿದ 21 ಪೊಲೀಸ್ ಸಿಬ್ಬಂದಿ, ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆಂದು ಆರೋಪಿಸಲಾಗಿತ್ತು.

2018 ರಲ್ಲಿ ವಿಶಾಖಪಟ್ಟಣಂನಲ್ಲಿ ವಿಚಾರಣೆ ಪ್ರಾರಂಭವಾಯಿತು ಮತ್ತು ಎಸ್‌ಸಿ ಮತ್ತು ಎಸ್‌ಟಿ (ದೌರ್ಜನ್ಯ ತಡೆ) ಕಾಯಿದೆಯಡಿ ಹನ್ನೊಂದನೆ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ವಿಶೇಷ ನ್ಯಾಯಾಧೀಶರು, ಅಸಮರ್ಪಕ ತನಿಖೆಯ ಕಾರಣ ಪೊಲೀಸರನ್ನು ಖುಲಾಸೆಗೊಳಿಸಿದರು.

ಈ ಸುದ್ದಿ ಓದಿದ್ದೀರಾ? ಅಕ್ರಮ ಮದ್ಯಕ್ಕೆ ನಾಲ್ಕನೇ ಬಲಿ; ರಸ್ತೆಯಲ್ಲಿ ಶವವಿಟ್ಟು ಪ್ರತಿಭಟಿಸಿದ ಗ್ರಾಮಸ್ಥರು

ಏತನ್ಮಧ್ಯೆ, ವಿಶೇಷ ನ್ಯಾಯಾಲಯದ ನ್ಯಾಯಾಧೀಶರು, ಅತ್ಯಾಚಾರ ಪ್ರಕರಣದಲ್ಲಿ ಬದುಕುಳಿದವರಿಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ (ಡಿಎಲ್‌ಎಸ್‌ಎ)ದ ಮೂಲಕ ಪರಿಹಾರ ಪಾವತಿಸಲು ಆದೇಶಿಸಿದರು.

ಮಾನವ ಹಕ್ಕುಗಳ ವೇದಿಕೆ ಸದಸ್ಯರ ಪ್ರಕಾರ, ಆರೋಪಿತ ಪೊಲೀಸರಲ್ಲಿ ಯಾರನ್ನೂ ಬಂಧಿಸಲಾಗಿಲ್ಲ ಮತ್ತು ಅವರಲ್ಲಿ ಕೆಲವರು ನಿವೃತ್ತಿ ಹೊಂದಿದ್ದಾರೆ ಮತ್ತು ಕೆಲವರು ಮೃತಪಟ್ಟಿದ್ದಾರೆ.

“2007ರ ಆಗಸ್ಟ್‌ನಲ್ಲಿ ಗ್ರೇಹೌಂಡ್ಸ್ ಪೊಲೀಸ್ ಪಡೆ 11 ಬುಡಕಟ್ಟು ಮಹಿಳೆಯರ ಮೇಲೆ ಅತ್ಯಾಚಾರವೆಸಗಿದೆ ಮತ್ತು ಅವರ ವಿರುದ್ಧ ಪೊಲೀಸ್ ದೂರು ದಾಖಲಿಸಲಾಯಿತು. ಆದರೆ ಇವರಲ್ಲಿ ಒಬ್ಬ ಆರೋಪಿಯನ್ನು ಸಹ ಬಂಧಿಸಲಾಗಿಲ್ಲ” ಎಂದು ಮಾನವ ಹಕ್ಕುಗಳ ವೇದಿಕೆಯ ಆಂಧ್ರಪ್ರದೇಶ ರಾಜ್ಯ ಸಮಿತಿಯ ಉಪಾಧ್ಯಕ್ಷ ಎಂ ಶರತ್ ಆರೋಪಿಸಿದ್ದರು.

21 ಸದಸ್ಯರ ವಿಶೇಷ ಪೊಲೀಸ್ ತಂಡವು 2007ರ ಆಗಸ್ಟ್ 20ರಂದು ವಾಕಪಲ್ಲಿ ಗ್ರಾಮಕ್ಕೆ ಕೂಂಬಿಂಗ್ ಕಾರ್ಯಾಚರಣೆಗೆ ತೆರಳಿತ್ತು ಮತ್ತು ವಿಶೇಷವಾಗಿ ಬುಡಕಟ್ಟು ಗುಂಪಿಗೆ ಸೇರಿದ 11 ಬುಡಕಟ್ಟು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದೆ ಎಂದು ವೇದಿಕೆ ಆರೋಪಿಸಿದೆ.

ಆರೋಪಿ ಪೊಲೀಸರ ವಿರುದ್ಧದ ತನಿಖೆಯು ಪ್ರಾರಂಭದಲ್ಲಿಯೇ ಅವರನ್ನು ರಕ್ಷಿಸುವ ಉದ್ದೇಶದಿಂದ ರಾಜಿ ಮಾಡಿಕೊಳ್ಳಲಾಯಿತು. ಅಪರಾಧ ಪ್ರಕರಣಗಳ ಕಡ್ಡಾಯ ನ್ಯಾಯವಿಧಾನಗಳನ್ನು ನಿರ್ಲಕ್ಷಿಸಲಾಯಿತು ಹಾಗೂ ವಿಧಿವಿಜ್ಞಾನ ವೈದ್ಯಕೀಯ ಪರೀಕ್ಷೆಗಳನ್ನು ಉಲ್ಲಂಘಿಸಲಾಗಿದೆ ಎಂದು ವೇದಿಕೆ ಆರೋಪಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ ಸರ್ಕಾರದ UPI ವಿನಾಯಿತಿ ಮೋಸ; ₹2,000 ಮೇಲ್ಪಟ್ಟ ಪಾವತಿಗಳಿಗೆ MDR ವಿಧಿಸಲು ಅನುಮತಿ

₹2,000 ಮೇಲ್ಪಟ್ಟ UPI ಪಾವತಿಗಳಿಗೆ ಮರ್ಚೆಂಟ್‌ ಡಿಸ್ಕೌಂಟ್‌ ರೇಟ್‌ (MDR) ವಿಧಿಸಲು...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್...

ಸರ್ಕಾರ ಆಧಾರ್‌ನ್ನು ನಂಬುವುದಾದರೆ, ಮತದಾರರ ಪಟ್ಟಿ ಪರಿಷ್ಕರಣೆಗೂ ಬಳಸಲಿ: ಆರ್‌ ಎಸ್‌ ಶರ್ಮಾ

ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರ ಗುರುತು ದೃಢೀಕರಣಕ್ಕೂ, ಪಿಂಚಣಿದಾರರ ಜೀವಂತಿಕೆ ಪರಿಶೀಲನೆಗೂ ಆಧಾರ್‌...

ಹೌತಿಗಳ ವಿರುದ್ಧ ಮಿಲಿಟರಿ ದಾಳಿಗೆ ಸೌದಿ ಅರೇಬಿಯಾ ಮನವಿ: ಬೆಂಬಲಿಸಿಲ್ಲ ಎಂದ ಟ್ರಂಪ್

ಕೆಂಪು ಸಮುದ್ರದ ಆಯಕಟ್ಟಿನ ಪ್ರದೇಶಗಳಲ್ಲಿ ಇರಾನ್ ಬೆಂಬಲಿತ ಹೌತಿ ಬಂಡುಕೋರರ ದಾಳಿ...