ಮಹಾರಾಷ್ಟ್ರ | ಭಾರೀ ಮಳೆ, ಬಿರುಗಾಳಿಗೆ ಧರೆಗುರುಳಿದ ಶತಮಾನದ ಹಳೆಯ ಮರ; 7 ಮಂದಿ ಸಾವು

Date:

Advertisements
  • ಮಹಾರಾಷ್ಟ್ರ ಪರಾಸ್‌ ಗ್ರಾಮದ ಬಾಬುಜಿ ದೇವಾಲಯದಲ್ಲಿ ಘಟನೆ
  • ಮೃತರಿಗೆ ಡಿಸಿಎಂ ದೇವೇಂದ್ರ ಫಡ್ನಾವಿಸ್ ಆರ್ಥಿಕ ನೆರವು ಘೋಷಣೆ

ಮಹಾರಾಷ್ಟ್ರದಲ್ಲಿ ಭಾನುವಾರ (ಏಪ್ರಿಲ್ 9) ಬೀಸಿದ ಗಾಳಿ ಸಹಿತ ಭಾರೀ ಮಳೆಗೆ ಅಕೋಲ ಜಿಲ್ಲೆಯ ದೇವಾಲಯವೊಂದರ ಆವರಣದಲ್ಲಿದ್ದ ಟಿನ್ ಶೆಡ್ ಮೇಲೆ ಶತಮಾನದ ಹಳೆಯ ಬೃಹತ್ ಮರವೊಂದು ಉರುಳಿ ಬಿದ್ದು, ಶೆಡ್‌ನಲ್ಲಿ ಆಶ್ರಯ ಪಡೆದಿದ್ದ 7 ಮಂದಿ ಮೃತಪಟ್ಟಿದ್ದಾರೆ. ಅಲ್ಲದೆ ಐದು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಬಾಲಾಪುರ್ ತಾಲೂಕಿನ ಪರಾಸ್ ಗ್ರಾಮದ ಬಾಬುಜಿ ಮಹಾರಾಜ್ ದೇವಾಲಯದಲ್ಲಿ ಭಾನುವಾರ ರಾತ್ರಿ 7.30ರ ಹೊತ್ತಿಗೆ ಧಾರ್ಮಿಕ ಕಾರ್ಯಕ್ರಮವೊಂದು ಜರುಗಿದ್ದ ಸಂದರ್ಭದಲ್ಲಿ ದುರಂತ ಸಂಭವಿಸಿದೆ. ಈ ಬಗ್ಗೆ ಸ್ಥಳೀಯ ಆಡಳಿತ ಮಾಹಿತಿ ನೀಡಿದೆ ಎಂದು ವರದಿಯಾಗಿದೆ.

ಪೂಜಾ ಕಾರ್ಯಕ್ರಮದ ಸಲುವಾಗಿ ಜನರು ಮಹಾರಾಷ್ಟ್ರದ ಅಕೋಲಾ ಜಿಲ್ಲೆಯ ದೇವಾಲಯಕ್ಕೆ ಆಗಮಿಸಿದ್ದರು. ಈ ವೇಳೆ ಭಾರೀ ಗಾಳಿ ಸಹಿತ ಮಳೆ ಸುರಿದಿದೆ. ಪರಿಣಾಮ ಶತಮಾನದಷ್ಟು ಹಳೆಯ ಬೃಹತ್ ಬೇವಿನ ಮರ ಟಿನ್ ಶೆಡ್ ಮೇಲೆ ಉರುಳಿದೆ.

Advertisements

ಸುಮಾರು 35ರಿಂದ 40 ಜನರು ಶೆಡ್‌ನಲ್ಲಿ ಆಶ್ರಯ ಪಡೆದಿದ್ದರು. ಈ ಪೈಕಿ 7 ಮಂದಿ ಮೃತಪಟ್ಟಿದ್ದಾರೆ. 23 ಮಂದಿ ಗಾಯಗೊಂಡಿದ್ದಾರೆ. ಇವರಲ್ಲಿ ಐವರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಜಮ್ಮು ಮತ್ತು ಕಾಶ್ಮೀರ | ಪಾಕಿಸ್ತಾನ ಗಡಿಯಲ್ಲಿ ಒಳ ನುಸುಳುಕೋರನ ಹತ್ಯೆ

ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಮತ್ತು ಜಿಲ್ಲಾ ವಿಪತ್ತು ನಿರ್ವಹಣಾ ಪಡೆ ಸಿಬ್ಬಂದಿ, ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಗಾಯಾಳುಗಳನ್ನು ಅಕೋಲಾ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು.

ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನಾವಿಸ್ ಅವರು ಮೃತರಿಗೆ ಸಂತಾಪ ಸೂಚಿಸಿದರು. ಮೃತರ ಕುಟುಂಬಕ್ಕೆ ಹಣಕಾಸಿನ ನೆರವು ನೀಡುವ ಭರವಸೆ ನೀಡಿದರು.

ಮಾಹಿತಿ ದೊರೆತ ಕೂಡಲೇ ಜಿಲ್ಲಾಧಿಕಾರಿ ಹಾಗೂ ಪೊಲೀಸ್‌ ವರಿಷ್ಠಾಧಿಕಾರಿ ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ಅವಲೋಕಿಸಿದರು. ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆ ನೀಡಲು ಸೂಚಿಸಿದರು. ಪರಿಸ್ಥಿತಿ ಮೇಲೆ ನಿಗಾ ಇರಿಸುವಂತೆ ಪೊಲೀಸರಿಗೆ ನಿರ್ದೇಶಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X