ಛತ್ತೀಸ್‌ಗಢ | 10 ಪೊಲೀಸರು ಮೃತಪಟ್ಟಿದ್ದ ಸ್ಫೋಟ ಪ್ರಕರಣದಲ್ಲಿ 8 ಮಾವೋವಾದಿಗಳ ಬಂಧನ

Date:

  • ಛತ್ತೀಸ್‌ಗಢ ದಾಂತೇವಾಡದಲ್ಲಿ ಪೊಲೀಸರ ವಾಹನ ಸ್ಫೋಟ
  • 8 ಮವೋವಾದಿಗಳ ಬಂಧನದ ಮೂಲಕ ಬಂಧಿತರ ಸಂಖ್ಯೆ 17 ಕ್ಕೆ ಏರಿಕೆ

ಛತ್ತೀಸ್‌ಗಢ ರಾಜ್ಯದ ದಾಂತೇವಾಡ ಜಿಲ್ಲೆಯಲ್ಲಿ ಕಳೆದ ತಿಂಗಳು 10 ಪೊಲೀಸ್ ಸಿಬ್ಬಂದಿ ಹಾಗೂ ನಾಗರಿಕ ಮೃತಪಟ್ಟಿದ್ದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಒಬ್ಬ ಬಾಲಕ ಸೇರಿ ಎಂಟು ಮಾವೋವಾದಿಗಳನ್ನು ಬಂದಿರುವುದಾಗಿ ಪೊಲೀಸರು ಶನಿವಾರ (ಮೇ 20) ಹೇಳಿದ್ದಾರೆ.

ಈ ಮೂಲಕ ಈ ಪ್ರಕರಣದಲ್ಲಿ ಬಂಧಿತರಾಗಿರುವ ನಕ್ಸಲರ ಸಂಖ್ಯೆ 17ಕ್ಕೆ ಏರಿಕೆಯಾಗಿದೆ.

8 ಮಾವೋವಾದಿಗಳ ಪೈಕಿ ಐವರನ್ನು ಬುಧವಾರ (ಮೇ 17) ಬಂಧಿಸಲಾಗಿದ್ದು ಶುಕ್ರವಾರ ( ಮೇ 19) ಛತ್ತೀಸ್‌ಗಢ ಅರನ್ಪುರ್ ಪೊಲೀಸ್ ಠಾಣೆ ಪ್ರದೇಶ ಮತ್ತು ನೆರೆಯ ಪ್ರದೇಶದಲ್ಲಿ ಭದ್ರತಾ ಸಿಬ್ಬಂದಿ ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ಬಾಲಕ ಸೇರಿದಂತೆ ಇತರ ಮೂವರನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಮಾಸಾ ಕವಾಸಿ, ಕೋಸ ಮಾಂಡವಿ, ಅರ್ಜುನ್ ಕುಂಜಮ್, ದೇವಾ ಮದ್ವಿ, ಬಂಡಿ ಮದ್ವಿ, ಮುಯಾ ಕೊವಾಸಿ ಮತ್ತು ಗಂಗಾ ಮದ್ವಿ ಎಂಬ ಪೆಡ್ಕಾ ಗ್ರಾಮದ ನಕ್ಸಲರನ್ನು ಬಂಧಿಸಲಾಗಿದೆ.

ಸ್ಥಳೀಯ ನ್ಯಾಯಾಲಯಕ್ಕೆ ಅವರನ್ನು ಹಾಜರುಪಡಿಸಲಾಗಿದೆ. ನಕ್ಸಲರನ್ನು ಮೂರು ದಿನಗಳ ಕಾಲ ಪೊಲೀಸ್ ಬಂಧನಕ್ಕೆ ನೀಡಲಾಗಿದೆ. ಅಪ್ರಾಪ್ತನನ್ನು ಬಾಲ ಅಪರಾಧಿಗೃಹಕ್ಕೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಛತ್ತೀಸ್‌ಗಢ ದಾಂತೇವಾಡದಲ್ಲಿ ಏಪ್ರಿಲ್ 26 ರಂದು ರಾಜ್ಯ ಪೊಲೀಸ್ ಜಿಲ್ಲಾ ಮೀಸಲು ಪಡೆ (ಡಿಆರ್ಜಿ) ತಂಡದ ವಾಹನದ ಮೇಲೆ ನಕ್ಸಲರು ಐಇಡಿ (ಸುಧಾರಿತ ಸ್ಪೋಟಕ ಸಾಧನ) ಸ್ಪೋಟಿಸಿದ್ದರು.

ಘಟನೆಯಲ್ಲಿ ವಾಹನ ಚಾಲಕ ಹಾಗೂ 10 ಮಂದಿ ಪೊಲೀಸರು ಮೃತಪಟ್ಟಿದ್ದರು.

ದಾಂತೇವಾಡದ ಅರನ್ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರದೇಶದಲ್ಲಿ ಮಾವೋವಾದಿಗಳ ಇರುವಿಕೆಯ ಬಗ್ಗೆ ಮಾಹಿತಿ ದೊರೆತ ಹಿನ್ನೆಲೆ ನಕ್ಸಲ್ ವಿರೋಧಿ ಕಾರ್ಯಾಚರಣೆಗಾಗಿ ಡಿಆರ್ಜಿ ತಂಡವನ್ನು ಕಳುಹಿಸಲಾಗಿತ್ತು.

ಕಾರ್ಯಾಚರಣೆ ಮುಗಿಸಿ ತಂಡ ವಾಪಸಾಗುತ್ತಿದ್ದಾಗ ನಕ್ಸಲರು ಐಇಡಿ ಸ್ಫೋಟಿಸಿದ್ದರು. ಜಿಲ್ಲಾ ಮೀಸಲು ಪಡೆ (ಡಿಆರ್‌ಜಿ)ಯು ಈ ಪ್ರದೇಶದಲ್ಲಿ ಎಡಪಂಥೀಯ ಭಯೋತ್ಪಾದಕತೆಯನ್ನು ಎದುರಿಸಲು ರಚಿಸಲಾದ ಛತ್ತೀಸಗಢದ ಪೊಲೀಸರ ಘಟಕಗಳಲ್ಲಿ ಒಂದು ಎಂದು ಹೇಳಲಾಗಿದೆ.

ಈ ಸುದ್ದಿ ಓದಿದ್ದೀರಾ? ಸುಬ್ರಮಣ್ಯನ್ ಸ್ವಾಮಿ ಎಂಬ ಅತೃಪ್ತ ಆತ್ಮದ ಚೀರಾಟ

ಛತ್ತೀಸ್‌ಗಢ ರಾಜ್ಯದಲ್ಲಿ ಕೆಲದಿನಗಳ ಹಿಂದೆ ಘಟನೆಗೆ ಸಂಬಂಧಿಸಿ ಮೂವರು ಅಪ್ರಾಪ್ತರು ಸೇರಿದಂತೆ ಒಂಬತ್ತು ಮಾವೋವಾದಿಗಳನ್ನು ಬಂಧಿಸಲಾಗಿತ್ತು.

ಇವರ ವಿಚಾರಣೆಯು ಹೆಚ್ಚಿನ ನಕ್ಸಲರನ್ನು ಬಂಧಿಸಲು ಪೊಲೀಸರಿಗೆ ಸಹಾಯ ಮಾಡಿತು ಎಂದು ಅಧಿಕಾರಿಗಳು ತಿಳಿಸಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೇಶದ ಶೇ.90 ರಷ್ಟಿರುವ ಬಡಜನತೆಗೆ ನ್ಯಾಯ ಒದಗಿಸುವುದೇ ನಮ್ಮ ಯೋಜನೆ: ರಾಹುಲ್ ಗಾಂಧಿ

ಬಡತನದ ಬೇಗೆಯಲ್ಲಿ ನಲುಗುತ್ತಿರುವ ದೇಶದ ಶೇ.90 ರಷ್ಟು ಬಡವರಿಗೆ ನ್ಯಾಯ ಒದಗಿಸುವ...

ಮೋದಿ ದ್ವೇಷ ಭಾಷಣ | ಪ್ರಧಾನಿಗೆ ಸಲಹೆ ನೀಡಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

ಕಳೆದ ಏಪ್ರಿಲ್ 21ರಂದು ರಾಜಸ್ಥಾನದಲ್ಲಿ ಬಿಜೆಪಿ ಆಯೋಜಿಸಿದ್ದ ಸಾರ್ವಜನಿಕ ಸಮಾವೇಶದಲ್ಲಿ ಮುಸಲ್ಮಾನರ...

ಪ್ರಧಾನಿ ಧರ್ಮ ರಾಜಕಾರಣ ಮಾಡುವ ಬಗ್ಗೆ ಎಂದಿಗೂ ಯೋಚಿಸಿಲ್ಲ ಎಂದ ರಾಜನಾಥ್ ಸಿಂಗ್!

ರಾಜಸ್ಥಾನದ ಬನ್ಸ್ವಾರಾದಲ್ಲಿ ಚುನಾವಣಾ ಪ್ರಚಾರ ಮಾಡುತ್ತಾ ಪ್ರಧಾನಿ ನರೇಂದ್ರ ಮೋದಿ ಅವರು...

ಲೋಕಸಭೆ ಚುನಾವಣೆ| ಮಣಿಪುರದಲ್ಲಿ 3 ಬಾರಿ ಸ್ಫೋಟ; ಸೇತುವೆಗೆ ಹಾನಿ

ಮಣಿಪುರದ ಕೆಲವು ತಿಂಗಳುಗಳ ಕಾಲ ಕೊಂಚ ಕಡಿಮೆಯಾಗಿದ್ದ ಹಿಂಸಾಚಾರವು ಲೋಕಸಭೆ ಚುನಾವಣೆ...