- ಒಂದು ದಿನದ ಹಿಂದಷ್ಟೆ ಸತ್ಯೇಂದ್ರ ಜೈನ್ ಜೈಲಿನ ಸ್ಥಾನದ ಕೋಣೆಯಲ್ಲಿ ಕುಸಿದು ಬಿದ್ದಿದ್ದರು
- ಕಳೆದ ವರ್ಷ ಮೇನಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಿದ ಇಡಿ
ಎಎಪಿ ನಾಯಕ ಹಾಗೂ ದೆಹಲಿಯ ಮಾಜಿ ಸಚಿವ ಸತ್ಯೇಂದ್ರ ಜೈನ್ ಅವರಿಗೆ ವೈದ್ಯಕೀಯ ಕಾರಣಗಳಿಂದಾಗಿ ಸುಪ್ರೀಂ ಕೋರ್ಟ್ ಆರು ವಾರಗಳ ಕಾಲ ಮಧ್ಯಂತರ ಜಾಮೀನು ನೀಡಿದೆ.
ಒಂದು ದಿನದ ಹಿಂದಷ್ಟೆ ಸತ್ಯೇಂದ್ರ ಜೈನ್ ಅವರು ತಿಹಾರಿ ಜೈಲಿನ ಸ್ನಾನದ ಕೋಣೆಯಲ್ಲಿ ಜಾರಿ ಬಿದ್ದು ಅಸ್ವಸ್ಥಗೊಂಡ ಕಾರಣ ನವದೆಹಲಿಯ ಲೋಕನಾಯಕ ಜಯಪ್ರಕಾಶ ನಾರಾಯಣ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಕಳೆದ ಒಂದು ವಾರದಲ್ಲಿ ಎರಡನೇ ಬಾರಿಗೆ ಜೈನ್ ಅವರನ್ನು ವೈದ್ಯಕೀಯ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸೋಮವಾರ, ಜೈಲಿನ ಸ್ನಾನದ ಕೋಣೆಯಲ್ಲಿ ಬಿದ್ದು ಬೆನ್ನುಮೂಳೆ ಗಾಯವಾಗಿರುವ ಕಾರಣ ಅವರನ್ನು ಸಫ್ದರ್ಜಂಗ್ ಆಸ್ಪತ್ರೆಯಲ್ಲಿ ಪರೀಕ್ಷಿಸಲಾಯಿತು ಎಂದು ಜೈಲಿನ ಅಧಿಕಾರಿಗಳು ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ₹20,000 ಕೋಟಿಯ ನೂತನ ಸಂಸತ್ ಭವನ; ಭಾರತದಲ್ಲಿ ಚರಿತ್ರೆ ಸೃಷ್ಟಿಯಾಗುತ್ತಿದೆ!
ಕಳೆದ ವರ್ಷ ಮೇ ತಿಂಗಳಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದಿಂದ ಎಎಪಿ ನಾಯಕನನ್ನು ಬಂಧಿಸಿದಾಗಿನಿಂದ ತಿಹಾರ್ ಜೈಲಿನಲ್ಲಿದ್ದಾರೆ.
ಸತ್ಯೇಂದ್ರ ಜೈನ್ ಅವರು ಶೆಲ್ ಕಂಪನಿಗಳ ಮೂಲಕ ಹಣ ಸಂಪಾದಿಸಿದ್ದಾರೆ ಮತ್ತು ಅಕ್ರಮ ಹಣದಿಂದ ಭೂಮಿ ಖರೀದಿಸಿದ್ದಾರೆ ಎಂದು ತನಿಖಾ ಸಂಸ್ಥೆ ಆರೋಪಿಸಿದೆ. ಆದರೆ ದೆಹಲಿಯ ಮಾಜಿ ಸಚಿವರು ತನಿಖಾ ಸಂಸ್ಥೆಯ ಆರೋಪಗಳನ್ನು ನಿರಾಕರಿಸಿದ್ದು, ಇದನ್ನು ರಾಜಕೀಯ ಪ್ರೇರಿತ ಆರೋಪ ಎಂದು ಹೇಳಿದ್ದಾರೆ.
ಸತ್ಯೇಂದ್ರ ಜೈನ್ ಅವರು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಸಂಪುಟದಲ್ಲಿ ಆರೋಗ್ಯ, ಗೃಹ ಮತ್ತು ನಗರಾಭಿವೃದ್ಧಿ ಸೇರಿದಂತೆ ಹಲವಾರು ಖಾತೆಗಳನ್ನು ಹೊಂದಿದ್ದರು. ಜೈಲಿನಲ್ಲಿರುವಾಗಲೇ ಈ ವರ್ಷದ ಜನವರಿಯಲ್ಲಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.