2016ರಿಂದ ಅದಾನಿ ಸಮೂಹದ ತನಿಖೆ ಮಾಡಿಲ್ಲ; ಸುಪ್ರೀಂ ಕೋರ್ಟ್‌ಗೆ ಸೆಬಿ ಮಾಹಿತಿ

Date:

2016ರಿಂದ ಅದಾನಿ ಸಮೂಹದ ಮೇಲೆ ನಿಗಾ ಇಟ್ಟಿಲ್ಲ ಎನ್ನುವ ವಿವರವನ್ನು ಸೆಬಿ ಸುಪ್ರೀಂ ಕೋರ್ಟ್‌ ಮುಂದೆ ಬಹಿರಂಗಪಡಿಸಿದೆ.

ಸೋಮವಾರ ಸುಪ್ರೀಂ ಕೋರ್ಟ್‌ಗೆ ನೀಡಿದ ಉತ್ತರದಲ್ಲಿ ಭಾರತೀಯ ಷೇರುಪೇಟೆ ನಿಯಂತ್ರಣ ಮಂಡಳಿ (ಸೆಬಿ)ಯು, 201 ರಿಂದ ಯಾವುದೇ ಅದಾನಿ ಸಮೂಹದ ಯಾವುದೇ ಕಂಪನಿಯನ್ನು ತನಿಖೆ ಮಾಡಿಲ್ಲ ಮತ್ತು ತಮ್ಮ ಹಿಂದಿನ ಹೇಳಿಕೆಯು ತಪ್ಪಾಗಿದೆ ಎಂದು ಹೇಳಿದೆ.

ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ನೇತೃತ್ವದ ಪೀಠವು, ಅದಾನಿ ಗುಂಪಿನ ವಿರುದ್ಧ ಹಿಂಡೆನ್‌ಬರ್ಗ್ ಸಂಶೋಧನೆಯ ಆರೋಪಗಳ ತನಿಖೆಯನ್ನು ಪೂರ್ಣಗೊಳಿಸಲು ಆರು ತಿಂಗಳ ವಿಸ್ತರಣೆಯನ್ನು ಕೋರಿ ಮಾರುಕಟ್ಟೆ ನಿಯಂತ್ರಕ ಸೆಬಿಯ ಅರ್ಜಿಯನ್ನು ಶೀಘ್ರದಲ್ಲೇ ಪರಿಗಣಿಸಲಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಹಿನ್ನೆಲೆಯಲ್ಲಿ ಸೋಮವಾರ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ತನ್ನ ಉತ್ತರದಲ್ಲಿ, ಸೆಬಿ ತನ್ನ ತನಿಖೆ ಪೂರ್ಣಗೊಳಿಸಲು ಸಮಯ ವಿಸ್ತರಣೆಯ ಅಗತ್ಯವಿದೆ ಎಂದು ಪುನರುಚ್ಚರಿಸಿತು. ಆದರೆ ಕಳೆದ ಶುಕ್ರವಾರದಂದು, ಸುಪ್ರೀಂ ಕೋರ್ಟ್ ತನಿಖೆ ಪೂರ್ಣಗೊಳಿಸಲು ಮಾರುಕಟ್ಟೆ ನಿಯಂತ್ರಕರು ಕೋರಿರುವ ಆರು ತಿಂಗಳ ವಿಸ್ತರಣೆಯ ಸಮಯ ನೀಡಲು ಸಾಧ್ಯವಿಲ್ಲ ಎಂದು ಹೇಳಿತ್ತು.

“ನಾವು ಈಗ 6 ತಿಂಗಳು ಸಮಯ ನೀಡಲು ಸಾಧ್ಯವಿಲ್ಲ. ಕೆಲಸದಲ್ಲಿ ಸ್ವಲ್ಪ ಎಚ್ಚರ ಅಗತ್ಯ. ಒಂದು ತಂಡವನ್ನು ಒಟ್ಟುಗೂಡಿಸಿ. ನಾವು ಆಗಸ್ಟ್ ಮಧ್ಯದಲ್ಲಿ ಪ್ರಕರಣವನ್ನು ಪಟ್ಟಿ ಮಾಡಬಹುದು ಮತ್ತು ನಂತರ ವರದಿಯ ಬಗ್ಗೆ ವಿಚಾರಣೆ ನಡೆಸಬಹುದು. ಇದಕ್ಕೆ ಕನಿಷ್ಠ ಸಮಯ 6 ತಿಂಗಳು ನೀಡಲಾಗುವುದಿಲ್ಲ. ಸೆಬಿ ಅನಿರ್ದಿಷ್ಟ ಅವಧಿಯನ್ನು ತೆಗೆದುಕೊಳ್ಳಲು ಸಾಧ್ಯವಿಲ್ಲ ಮತ್ತು ನಾವು ಅವರಿಗೆ 3 ತಿಂಗಳ ಕಾಲಾವಕಾಶ ನೀಡುತ್ತೇವೆ” ಎಂದು ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಪಿ ಎಸ್ ನರಸಿಂಹ ಮತ್ತು ಜೆಬಿ ಪರ್ದಿವಾಲಾ ಅವರ ಪೀಠವು ತನ್ನ ತನಿಖೆಯನ್ನು ಪೂರ್ಣಗೊಳಿಸಲು ಆರು ತಿಂಗಳ ಕಾಲ ವಿಸ್ತರಣೆ ಕೋರಿ ಸೆಬಿ ಸಲ್ಲಿಸಿದ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ಹೇಳಿದೆ.

ಈ ಸುದ್ದಿ ಓದಿದ್ದೀರಾ?: ಜ್ಞಾನವಾಪಿ ಮಸೀದಿ | ಶಿವಲಿಂಗದ ಆಕೃತಿಯ ಕಾರ್ಬನ್ ಡೇಟಿಂಗ್‌ ಪರೀಕ್ಷೆಗೆ ಹೈಕೋರ್ಟ್ ಅಸ್ತು

ಗೌತಮ್ ಅದಾನಿ ನೇತೃತ್ವದ ವ್ಯವಹಾರ ಸಂಸ್ಥೆಯು ಹಲವು ದಶಕಗಳಿಂದ ತನ್ನ ಷೇರುಗಳ ಬೆಲೆಯನ್ನು ಕೃತಕವಾಗಿ ಹೆಚ್ಚಿಸಿ ವಂಚಿಸುತ್ತಿದೆ” ಎಂದು ಅಮೆರಿಕ ಮೂಲದ ಹಿಂಡೆನ್‌ಬರ್ಗ್ ಸಂಶೋಧನಾ ಸಂಸ್ಥೆ ಆರೋಪಿಸಿತ್ತು.

ಇನ್ನೊಂದೆಡೆ, ಹಿಂಡೆನ್‍ಬರ್ಗ್ ರಿಸರ್ಚ್‍ನ ಸಂಸ್ಥಾಪಕ ನಾಥನ್ ಆಂಡರ್ಸನ್ ಮತ್ತು ಭಾರತದಲ್ಲಿನ ಅದರ ಸಿಬ್ಬಂದಿ ವಿರುದ್ಧ ತನಿಖೆ ನಡೆಸಬೇಕು. ಅವರ ವಿರುದ್ಧ ಎಫ್‍ಐಆರ್ ದಾಖಲಿಸಲು ಸೆಬಿ ಮತ್ತು ಕೇಂದ್ರ ಗೃಹ ಸಚಿವಾಲಯಕ್ಕೆ ಸುಪ್ರೀಂ ನಿರ್ದೇಶನ ನೀಡಬೇಕು ಎಂದು ಕೋರಿ ವಕೀಲ ಮನೋಹರ್ ಲಾಲ್ ಶರ್ಮಾ ಮನವಿ ಮಾಡಿದ್ದಾರೆ.

ಲೋಕಸಭೆಯಲ್ಲೂ ಕೂಡ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿ ಹಲವು ವಿಪಕ್ಷ ನಾಯಕರು ಅದಾನಿ ಪ್ರಕರಣವನ್ನು ಜಂಟಿ ಸಂಸದೀಯ ತನಿಖೆಗೆ ಒಳಪಡಿಸಬೇಕೆಂದು ಆಗ್ರಹಿಸಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಎಪಿ ಜೊತೆ ಮೈತ್ರಿಗೆ ವಿರೋಧ : ದೆಹಲಿ ಕಾಂಗ್ರೆಸ್​ ಅಧ್ಯಕ್ಷ ಅರವಿಂದರ್ ಸಿಂಗ್ ಲವ್ಲಿ ರಾಜೀನಾಮೆ

ಆಮ್‌ ಆದ್ಮಿ ಪಕ್ಷದೊಂದಿಗಿನ ಮೈತ್ರಿ ವಿರೋಧಿಸಿ ದೆಹಲಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ...

ಖಾಸಗಿ ಸಂಪತ್ತಿನ ಬಗ್ಗೆ ರಾಹುಲ್ ಮಾತನಾಡಿಲ್ಲ; ಬಿಜೆಪಿ ಗೊಂದಲ ಸೃಷ್ಟಿಸುತ್ತಿದೆ: ಸಿಎಂ ರೇವಂತ್ ರೆಡ್ಡಿ

ತೆಲಂಗಾಣದಲ್ಲಿ ಕಾಂಗ್ರೆಸ್‌ ಭರ್ಜರಿ ಗೆಲುವು ಸಾಧಿಸಿ, ಅಧಿಕಾರ ಹಿಡಿದ ಕೆಲ ತಿಂಗಳುಗಳಲ್ಲೇ...

ಉದ್ಧವ್‌, ಶರದ್ ಪರವಾಗಿ ಅನುಕಂಪದ ಅಲೆಯಿದೆ ಎಂದ ಅಜಿತ್ ಪವಾರ್ ಬಣದ ನಾಯಕ!

"ರಾಜ್ಯದಲ್ಲಿ (ಮಹಾರಾಷ್ಟ್ರ) ಉದ್ಧವ್ ಠಾಕ್ರೆ ಮತ್ತು ಶರದ್ ಪವಾರ್ ಪರವಾಗಿ ಅನುಕಂಪದ...

ಹಾಸನ ಪೆನ್‌ಡ್ರೈವ್‌ | ಪ್ರಜ್ವಲ್ ರೇವಣ್ಣ ದೇಶಬಿಟ್ಟು ಓಡಿ ಹೋಗಲು ಮೋದಿ ಸಹಾಯ ಮಾಡಿದರಾ?; ರಾಷ್ಟ್ರಮಟ್ಟದಲ್ಲಿ ಆಕ್ರೋಶ

ಹಾಸನ ಪೆನ್‌ಡ್ರೈವ್‌ ಪ್ರಕರಣವು ರಾಜ್ಯದಲ್ಲಿ ಆತಂಕ ಸೃಷ್ಟಿಸಿದೆ. ಪ್ರಕರಣವನ್ನು ಎಸ್‌ಐಟಿ ತನಿಖೆಗೆ...