ಅದಾನಿ ಸಮೂಹದ ತನಿಖೆಗೆ ಸೆಬಿಗೆ ಮೂರು ತಿಂಗಳು ಸಮಯ ನೀಡಿದ ಸುಪ್ರೀಂ ಕೋರ್ಟ್

Date:

Advertisements

ಅದಾನಿ ಸಮೂಹದ ಕಂಪನಿಗಳ ತನಿಖೆಯನ್ನು ಪೂರ್ಣಗೊಳಿಸಲು ಸುಪ್ರೀಂ ಕೋರ್ಟ್ ಬುಧವಾರ ಸೆಬಿಗೆ ಆಗಸ್ಟ್ 14 ರವರೆಗೆ ಮೂರು ತಿಂಗಳು ಹೆಚ್ಚುವರಿ ಸಮಯ ನೀಡಿದೆ. ಆದರೆ ಅನಿರ್ದಿಷ್ಟ ಅವಧಿಯವರೆಗೆ ಸಮಯವನ್ನು ವಿಸ್ತರಿಸಲು ಸಾಧ್ಯವಿಲ್ಲ ಎಂದು ಹೆಚ್ಚುವರಿ ಆರು ತಿಂಗಳುಗಳ ಮನವಿಯನ್ನು ತಿರಸ್ಕರಿಸಿತು.

ಅಮೆರಿಕದ ಕಿರು ಮಾರಾಟಗಾರ ಸಂಸ್ಥೆ ಹಿಂಡೆನ್‌ಬರ್ಗ್‌ನ ಸಂಶೋಧನೆಯ ವರದಿಯು ಅದಾನಿ ಸಮೂಹದಿಂದ “ಲೆಕ್ಕಪತ್ರ ವಂಚನೆ” ಮತ್ತು “ಷೇರುಗಳ ತಿರುಚುವಿಕೆ” ಎಂದು ಆರೋಪಿಸಿದ ನಂತರ ಜನವರಿ 25 ರಂದು ಮಾರುಕಟ್ಟೆ ನಿಯಂತ್ರಕ ಸೆಬಿ ತನಿಖೆ ಪ್ರಾರಂಭಿಸಿತ್ತು.

ಸೆಬಿ ಅರ್ಜಿಯನ್ನು ಕೈಗೆತ್ತಿಕೊಂಡ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಪಿ ಎಸ್ ನರಸಿಂಹ ಮತ್ತು ಜೆ ಬಿ ಪಾರ್ದಿವಾಲಾ ಅವರ ಪೀಠವು ಆಗಸ್ಟ್ 14 ರಂದು ನವೀಕರಿಸಿದ ವರದಿಯನ್ನು ಸಲ್ಲಿಸುವಂತೆ ಸೆಬಿಗೆ ತಿಳಿಸಿದೆ.

Advertisements

ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ಪ್ರಶಾಂತ್ ಭೂಷಣ್, ಸೆಬಿಯು ಅದಾನಿ ಕಂಪನಿಯ ವಿವಾದಗಳ ಬಗ್ಗೆ ಹಲವು ವರ್ಷಗಳಿಂದ ತನಿಖೆ ನಡೆಸುತ್ತಿದೆ. ಈ ಹಿನ್ನೆಲೆ ಕೈಗೊಂಡ ವರದಿಗಳನ್ನು ದಾಖಲೆಯಲ್ಲಿ ಇರಿಸಲು ಸೆಬಿಗೆ ನಿರ್ದೇಶಿಸುವಂತೆ ಕೋರಿದರು.

“ಸೆಬಿ ಸಂಪೂರ್ಣವಾಗಿ ಏನನ್ನೂ ಮಾಡುತ್ತಿಲ್ಲ, ಅದಾನಿ ಷೇರುಗಳು ಏಕಾಏಕಿ ಹೆಚ್ಚಾದರೆ, ಕಂಪನಿಗೆ ಎಚ್ಚರಿಕೆ ನೀಡಬೇಕಿತ್ತು. ಸಂಸತ್ತಿನಲ್ಲಿ ಅದಾನಿ ವಿರುದ್ಧ ತನಿಖೆ ನಡೆಸುತ್ತಿದ್ದಾರೆ ಎಂದು ಸೆಬಿ ಹೇಳುತ್ತಿದೆ. ಅಲ್ಲಿನ ತನಿಖೆಗಳಲ್ಲಿ ಏನಾಯಿತು ಎಂದು ಮಾರುಕಟ್ಟೆ ನಿಯಂತ್ರಕ ನಮಗೆ ತಿಳಿಸಬೇಕು” ಎಂದು ಪ್ರಶಾಂತ್ ಭೂಷಣ್ ವಾದ ಮಂಡಿಸಿದರು.

2016 ರಿಂದ ಅದಾನಿ ಗ್ರೂಪ್ ಆಫ್ ಕಂಪನಿಗಳ ವಿರುದ್ಧ ತನಿಖೆ ನಡೆಸುತ್ತಿದೆ ಎಂಬ ಆರೋಪವು “ವಾಸ್ತವವಾಗಿ ಆಧಾರರಹಿತ” ಎಂದು ಸೋಮವಾರ ಸೆಬಿ ನ್ಯಾಯಾಲಯಕ್ಕೆ ತಿಳಿಸಿತ್ತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X