ಐಪಿಸಿ, ಸಿಆರ್‌ಪಿಸಿ ಕಾಯ್ದೆಗಳಿಗೆ ಹಿಂದಿ ಪದ ಬಳಕೆ ಸಂವಿಧಾನ ವಿರೋಧಿ: ಮದ್ರಾಸ್‌ ಬಾರ್‌ ಅಸೋಸಿಯೇಷನ್‌ ಆಕ್ಷೇಪ

Date:

Advertisements

ಕೇಂದ್ರ ಸರ್ಕಾರ ಇತ್ತೀಚಿಗೆ ಲೋಕಸಭೆಯಲ್ಲಿ ಐಪಿಸಿ, ಸಿಆರ್‌ಪಿಸಿ ಹಾಗೂ ಎವಿಡೆನ್ಸ್ ಕಾಯ್ದೆಗಳನ್ನು ಬದಲಿಸಿ ಹಿಂದಿ ಹೆಸರುಗಳಾಗಿ ಮರು ನಾಮಕರಣ ಮಾಡಿರುವುದಕ್ಕೆ ಮದ್ರಾಸ್‌ ಬಾರ್‌ ಅಸೋಸಿಯೇಷನ್‌ ಆಕ್ಷೇಪ ವ್ಯಕ್ತಪಡಿಸಿದೆ.

ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಅಸೋಸಿಯೇಷನ್‌, ಕೇಂದ್ರ ಸರ್ಕಾರವು ಐಪಿಸಿ 1860, ಸಿಆರ್‌ಪಿಸಿ 1973 ಹಾಗೂ 1872ರ ಎವಿಡೆನ್ಸ್ ಕಾಯ್ದೆಗಳ ಬದಲಿಯಾಗಿ ಹಿಂದಿ ಹೆಸರುಗಳಾದ ಭಾರತೀಯ ನ್ಯಾಯ ಸಂಹಿತೆ 2023, ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ಮಸೂದೆ 2023 ಮತ್ತು ಭಾರತೀಯ ಸಾಕ್ಷ್ಯ ಮಸೂದೆ 2023 ಎಂದು ಮರು ನಾಮಕರಣ ಮಾಡಿರುವುದು ಭಾರತ ಸಂವಿಧಾನದ ವಿರೋಧಿಯಾಗಿದೆ.

ಕೇಂದ್ರ ಸರ್ಕಾರದ ಮರುನಾಮಕರಣಗಳ ನಡೆಯನ್ನು ಮದ್ರಾಸ್ ಬಾರ್ ಅಸೋಸಿಯೇಷನ್ ಸರ್ವಾನುಮತ ನಿರ್ಧಾರದಿಂದ ಆಕ್ಷೇಪಣೆ ಹಾಗೂ ಕಳವಳ ವ್ಯಕ್ತಪಡಿಸುತ್ತದೆ. ಮಸೂದೆಗಳನ್ನು ಹಿಂದಿಯಲ್ಲಿ ಹೆಸರಿಸುವುದು ಸಂವಿಧಾನದ ನಿಬಂಧನೆಗಳಿಗೆ ವಿರುದ್ಧವಾಗಿದೆ. ಬದಲಿಯಾಗಿರುವ ಹೆಸರುಗಳನ್ನು ಮರುಪರಿಶೀಲನೆಯೊಂದಿಗೆ ಹಳೆಯ ಹೆಸರುಗಳನ್ನು ಉಳಿಸಿಕೊಳ್ಳುವಂತೆ ಕೇಂದ್ರ ಕಾನೂನು ಸಚಿವರಿಗೆ ಸಲಹೆಗಳು ಹಾಗೂ ಅಭಿಪ್ರಾಯಗಳನ್ನು ಶೀಘ್ರದಲ್ಲೇ ಕಳುಹಿಸಲಾಗುವುದು ಎಂದು ಅಸೋಸಿಯೇಷನ್ ಅಧ್ಯಕ್ಷರಾದ ವಿ ಆರ್‌ ಕಮಲನಾಥನ್‌ ತಿಳಿಸಿದ್ದಾರೆ.

Advertisements
IPC hindi

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು 1860ರ ಭಾರತೀಯ ದಂಡ ಸಂಹಿತೆ (ಐಪಿಸಿ), ಅಪರಾಧ ಪ್ರಕ್ರಿಯಾ ಸಂಹಿತೆ (ಸಿಆರ್‌ಪಿಸಿ) ಮತ್ತು ಭಾರತೀಯ ಪುರಾವೆ ಕಾಯ್ದೆಗಳನ್ನು ಬದಲಿಸುವ ಮಸೂದೆಗಳನ್ನು ಅವರು ಆಗಸ್ಟ್‌ 11 ರಂದು ಲೋಕಸಭೆಯಲ್ಲಿ ಮಂಡಿಸಿದ್ದರು.

ಈ ಸುದ್ದಿ ಓದಿದ್ದೀರಾ? ಕಾವೇರಿ ನದಿ ವಿವಾದ : ವಾಸ್ತವ ಸ್ಥಿತಿ ಕುರಿತು ವರದಿಗೆ ಸೂಚಿಸಿ ಸೆ 1ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂ

ಅಲ್ಲದೆ ದೇಶದ್ರೋಹ ಕಾನೂನನ್ನು ರದ್ದುಪಡಿಸಲಾಗುವುದು ಎಂದು ಗೃಹ ಸಚಿವರು ತಿಳಿಸಿದ್ದರು. ಪ್ರಸ್ತಾವಿತ ಕಾನೂನಿನಲ್ಲಿ ‘ದೇಶದ್ರೋಹ’ ಎಂಬ ಪದ ಇಲ್ಲ. ಅದನ್ನು ಭಾರತದ ಸಾರ್ವಭೌಮತೆ, ಏಕತೆ ಮತ್ತು ಸಮಗ್ರತೆಗೆ ಅಪಾಯ ತಂದೊಡ್ಡುವ ಕೃತ್ಯಗಳಿಗಾಗಿ ಸೆಕ್ಷನ್ 150 ಅನ್ನು ದೇಶದ್ರೋಹದ ಕಾನೂನಿನ ಬದಲಿಗೆ ಜಾರಿಗೆ ತರಲಾಗುತ್ತಿದೆ ಎಂದಿದ್ದರು.

ಕೇಂದ್ರ ಸರ್ಕಾರವು ಐಪಿಸಿ, ಸಿಆರ್‌ಪಿಸಿ ಮತ್ತು ಇಂಡಿಯನ್ ಎವಿಡೆನ್ಸ್ ಕಾಯ್ದೆ 1872 ಅನ್ನು ಪರಿಷ್ಕರಿಸಲು ಸಲಹೆಗಳನ್ನು ನೀಡಲು ಕ್ರಿಮಿನಲ್ ಕಾನೂನು ಸುಧಾರಣಾ ಸಮಿತಿಯನ್ನು ರಚಿಸಿತ್ತು. ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಡಾ ರಣಬೀರ್ ಸಿಂಗ್ ನೇತೃತ್ವದಲ್ಲಿ ಸಮಿತಿ ರಚಿಸಲಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X