ನ್ಯಾಯಾಲಯದ ಕೊಠಡಿಗಳಲ್ಲಿ ಅಂಬೇಡ್ಕರ್ ಭಾವಚಿತ್ರ ಅಳವಡಿಸಿ: ತಮಿಳುನಾಡು ಕಾಂಗ್ರೆಸ್ ಒತ್ತಾಯ

Date:

Advertisements

ತಮಿಳುನಾಡು ಮತ್ತು ಪುದುಚೇರಿಯ ಎಲ್ಲ ನ್ಯಾಯಾಲಯಗಳಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಸೇರಿದಂತೆ ಇತರ ನಾಯಕರ ಭಾವಚಿತ್ರಗಳನ್ನು ತೆರವುಗೊಳಿಸಬೇಕು ಎಂದು ಮದ್ರಾಸ್ ಹೈಕೋರ್ಟ್‌ನ ರಿಜಿಸ್ಟ್ರಾರ್ ಜನರಲ್ ಹೊರಡಿಸಿದ ಸುತ್ತೋಲೆಯ ಬಗ್ಗೆ ತಮಿಳುನಾಡು ಕಾಂಗ್ರೆಸ್ ಸಮಿತಿಯ ಪರಿಶಿಷ್ಟ ಜಾತಿ ವಿಭಾಗ ಬೇಸರ ವ್ಯಕ್ತಪಡಿಸಿದೆ.

ಸಂವಿಧಾನದ ಕರಡು ಸಮಿತಿಯ ಮುಖ್ಯಸ್ಥರೂ ಮತ್ತು ಭಾರತದ ಮೊದಲ ಕಾನೂನು ಸಚಿವರೂ ಆಗಿದ್ದ ಅಂಬೇಡ್ಕರ್ ಭಾವಚಿತ್ರಗಳನ್ನು ನ್ಯಾಯಾಲಯದ ಕೊಠಡಿಗಳಲ್ಲಿ ಪ್ರದರ್ಶಿಸುವಂತೆ ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರನ್ನು ತಮಿಳುನಾಡು ಕಾಂಗ್ರೆಸ್ ಸಮಿತಿಯ ಪರಿಶಿಷ್ಟ ಜಾತಿ ವಿಭಾಗದ ರಾಜ್ಯಾಧ್ಯಕ್ಷ ಎಂ ಪಿ ರಂಜನ್ ಕುಮಾರ್ ಅವರು ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.

ಸಂವಿಧಾನವನ್ನು ರಚಿಸುವಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಕೊಡುಗೆಯನ್ನು ಯಾರೂ ಅಲ್ಲಗಳೆಯಲು ಸಾಧ್ಯವಿಲ್ಲ. ಇದು ಜನರ ಹಕ್ಕುಗಳನ್ನು ರಕ್ಷಿಸುವ ಗುರಾಣಿಯಾಗಿ ಮುಂದುವರಿಯುತ್ತದೆ. ಜನರ ಮಾನವ ಹಕ್ಕುಗಳ ಉಲ್ಲಂಘನೆಯಾದಾಗ, ನ್ಯಾಯಾಲಯಗಳು ಈ ಹಕ್ಕುಗಳನ್ನು ರಕ್ಷಿಸುತ್ತವೆ. ಇಂತಹ ಸಂದರ್ಭದಲ್ಲಿ ಅಂಬೇಡ್ಕರ್ ಅವರ ಭಾವಚಿತ್ರ ಅಳವಡಿಸಿದರೆ ತೆಗೆದು ಹಾಕುವುದಾಗಿ ಹೇಳಿಕೆ ನೀಡಿರುವುದು ಒಪ್ಪಲಾಗದು” ಎಂದು ತಿಳಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ದಲಿತ ಯುವಕನ ಮೇಲೆ ಮಲ ಬಳಿದ ಪ್ರಕರಣ: ಕಠಿಣ ಕ್ರಮಕ್ಕೆ ಖರ್ಗೆ ಆಗ್ರಹ

ಏಪ್ರಿಲ್ 11 ರಂದು ಮದ್ರಾಸ್ ಹೈಕೋರ್ಟ್‌ನ ಪೂರ್ಣ ನ್ಯಾಯಾಲಯವು ತಮಿಳುನಾಡು ಮತ್ತು ಪುದುಚೇರಿಯ ನ್ಯಾಯಾಲಯಗಳು ಮಹಾತ್ಮಾ ಗಾಂಧಿ ಮತ್ತು ತಮಿಳು ಕವಿ ಸಂತ ತಿರುವಳ್ಳುವರ್ ಅವರ ಭಾವಚಿತ್ರಗಳನ್ನು ಮಾತ್ರ ಪ್ರದರ್ಶಿಸಬಹುದು ಎಂದು ಸುತ್ತೋಲೆಯಲ್ಲಿ ತಿಳಿಸಿತ್ತು.

ನ್ಯಾಯಾಲಯದಲ್ಲಿ ಬಿ ಆರ್ ಅಂಬೇಡ್ಕರ್ ಸೇರಿದಂತೆ ಇತರ ನಾಯಕರ ಭಾವಚಿತ್ರಗಳನ್ನು ತೆಗೆದುಹಾಕುವಂತೆ ಎರಡೂ ರಾಜ್ಯಗಳ ಜಿಲ್ಲಾ ನ್ಯಾಯಾಧೀಶರಿಗೆ ಸೂಚನೆ ನೀಡಲಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X