ಕಾನೂನು ಸಚಿವರಾಗಿ ಕಿರಣ್‌ ರಿಜಿಜು ಬದಲಿಗೆ ಅರ್ಜುನ್ ರಾಮ್ ಮೇಘವಾಲ್ ನೇಮಕ

Date:

  • ಅರ್ಜುನ್ ಮೇಘವಾಲ್ ಅವರಿಗೆ ರಾಜ್ಯ ಸಚಿವರ ಹೆಚ್ಚುವರಿ ಜವಾಬ್ದಾರಿ
  • ಅರುಣಾಚಲ ಪಶ್ಚಿಮ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಸಂಸದರಾಗಿರವ ಕಿರಣ್‌ ರಿಜಿಜು

ಪ್ರಧಾನಿ ನರೇಂದ್ರ ಮೋದಿ ಅವರ ಸಂಪುಟದಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದ್ದು ಅರ್ಜುನ್ ರಾಮ್ ಮೇಘವಾಲ್ ಅವರನ್ನು ನೂತನ ಕೇಂದ್ರ ಕಾನೂನು ಸಚಿವರಾಗಿ ಗುರುವಾರ (ಮೇ 18) ನೇಮಕ ಮಾಡಲಾಗಿದೆ.

ಈ ಮುನ್ನ ಕಾನೂನು ಸಚಿವರಾಗಿದ್ದ ಕಿರಣ್ ರಿಜಿಜು ಅವರನ್ನು ಆ ಹುದ್ದೆಯಿಂದ ತೆರವುಗೊಳಿಸಲಾಗಿದೆ. ಅವರಿಗೆ ಭೂ ವಿಜ್ಞಾನ ಸಚಿವಾಲಯದ ಉಸ್ತುವಾರಿ ನೀಡಲಾಗಿದೆ. ಈ ಹಿಂದೆ ಜಿತೇಂದ್ರ ಸಿಂಗ್‌ ಅವರು ಈ ಖಾತೆ ನಿರ್ವಹಿಸುತ್ತಿದ್ದರು.

ಪ್ರಧಾನಿ ಮೋದಿ ಅವರ ಸಲಹೆಯ ಮೇರೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂಪುಟ ಪುನಾರಚನೆಗೆ ಅನುಮೋದನೆ ನೀಡಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಅರ್ಜುನ್ ರಾಮ್ ಮೇಘವಾಲ್ ಅವರನ್ನು ಕಿರಣ್ ರಿಜಿಜು ಅವರ ಸ್ಥಾನಕ್ಕೆ ನೇಮಕ ಮಾಡಲಾಗಿದೆ. ಅರ್ಜುನ್ ಮೇಘವಾಲ್ ಅವರಿಗೆ ಅಸ್ತಿತ್ವದಲ್ಲಿರುವ ಖಾತೆಗೆ ಹೆಚ್ಚುವರಿಯಾಗಿ ಕಾನೂನು ಹಾಗೂ ನ್ಯಾಯ ಸಚಿವಾಲಯ ರಾಜ್ಯ ಸಚಿವರಾಗಿ ಸ್ವತಂತ್ರ ಉಸ್ತುವಾರಿ ನೀಡಲಾಗಿದೆ.

ಮುಂಬರುವ ರಾಜಸ್ಥಾನ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಅರ್ಜುನ್‌ ಮೇಘವಾಲ್‌ ಅವರನ್ನು ಆರಿಸಲಾಗಿದೆ ಎಂದು ಹೇಳಲಾಗಿದೆ. ಅರ್ಜುನ್ ರಾಮ್ ಮೇಘವಾಲ್ ಅವರು ಪ್ರಸ್ತುತ ಸಂಸ್ಕೃತಿ ಖಾತೆಯ ರಾಜ್ಯ ಸಚಿವರಾಗಿದ್ದಾರೆ. ಕಿರಣ್ ರಿಜಿಜು ಅರುಣಾಚಲ ಪಶ್ಚಿಮ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಸಂಸದರಾಗಿದ್ದಾರೆ.

ಸುಪ್ರೀಂ ಕೋರ್ಟ್ ಹಾಗೂ ಹೈಕೋರ್ಟ್‌ಗಳಿಗೆ ನ್ಯಾಯಮೂರ್ತಿಗಳನ್ನು ನೇಮಕ ಮಾಡಲು ಜಾರಿಯಲ್ಲಿ ಇರುವ ಕೊಲಿಜಿಯಂ ವ್ಯವಸ್ಥೆ ಬಗ್ಗೆ ಕಿರಣ್‌ ರಿಜಿಜು ಅಸಮಾಧಾನ ಹೊಂದಿದ್ದರು. ನ್ಯಾಯಮೂರ್ತಿಗಳ ನೇಮಕಕ್ಕೆ ಹೊಸ ವ್ಯವಸ್ಥೆ ರೂಪಿಸುವಂತೆ ಹೇಳಿದ್ದರು.

ರಿಜಿಜು ಅವರು 2009ರ ಲೋಕಸಭೆ ಚುನಾವಣೆಯಲ್ಲಿ ಸೋತಿದ್ದರು. 2014ರ ಚುನಾವಣೆಯಲ್ಲಿ ರಿಜಿಜು ಮತ್ತೊಮ್ಮೆ ಗೆದ್ದು ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ಸಚಿವರಾಗಿದ್ದರು.

ಈ ಸುದ್ದಿ ಓದಿದ್ದೀರಾ? ಭಯೋತ್ಪಾದಕರೊಂದಿಗೆ ನಂಟು: 6 ರಾಜ್ಯಗಳ 122 ಸ್ಥಳಗಳಲ್ಲಿ ಎನ್‌ಐಎ ದಾಳಿ

ನಂತರ ಅವರನ್ನು ಮೋದಿ ಸರ್ಕಾರದ ಎರಡನೇ ಅವಧಿ 2019ರಲ್ಲಿ ಕ್ರೀಡಾ ಸಚಿವರನ್ನಾಗಿ ನೇಮಿಸಲಾಯಿತು. 2021 ಜುಲೈನಲ್ಲಿ ಸಂಪುಟ ವಿಸ್ತರಣೆ ಸಮಯದಲ್ಲಿ ಅವರನ್ನು ಕಾನೂನು ಸಚಿವರನ್ನಾಗಿ ನೇಮಿಸಲಾಗಿತ್ತು.

ರವಿಶಂಕರ್ ಪ್ರಸಾದ್ ಬದಲಿಗೆ ಅವರಿಗೆ ಈ ಜವಾಬ್ದಾರಿ ನೀಡಲಾಗಿತ್ತು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿವಿಪ್ಯಾಟ್ ಪರಿಶೀಲನಾ ಗುರುತಿನ ಚೀಟಿ, ಮತಪತ್ರ ಚುನಾವಣಾ ಪ್ರಕ್ರಿಯೆಗೆ ಸುಪ್ರೀಂ ತಿರಸ್ಕಾರ

ಇವಿಎಂನಲ್ಲಿ ಮತ ಚಲಾಯಿಸಿದ ನಂತರ ಮತದಾರರಿಗೆ ವಿವಿಪ್ಯಾಟ್ ಮೂಲಕ ಪರಿಶೀಲನಾ ಚೀಟಿ...

₹4.8 ಕೋಟಿ ನಗದು ವಶ; ಬಿಜೆಪಿ ಅಭ್ಯರ್ಥಿ ಕೆ. ಸುಧಾಕರ್ ವಿರುದ್ಧ ಎಫ್‌ಐಆರ್ ದಾಖಲು

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ವಿಚಕ್ಷಣ ದಳದ (ಎಫ್‌ಎಸ್‌ಟಿ) ಅಧಿಕಾರಿಗಳು ₹4.8...

ಗೌಪ್ಯತೆಯ ಬದ್ದತೆ ಮುರಿಯಲು ಒತ್ತಾಯಿಸಿದರೆ ಭಾರತವನ್ನೇ ತೊರೆಯುತ್ತೇವೆ: ವಾಟ್ಸಾಪ್‌

ವಾಟ್ಸಾಪ್‌ನಲ್ಲಿ ಸಂದೇಶಗಳ ಖಾಸಗಿತನ/ಗೌಪ್ಯತೆ (ಎಂಡ್‌-ಟು-ಎಂಚ್‌ ಎನ್‌ಕ್ರಿಪ್ಶನ್‌) - ಸಂದೇಶ ಕಳಿಸಿದವರು, ಸ್ವೀಕರಿಸಿದವರಲ್ಲದೆ...

ಮುಸ್ಲಿಂ ಮೀಸಲಾತಿ ರದ್ದು ನಿರ್ಧಾರಕ್ಕೆ ನಾವು ಬದ್ದರಾಗಿದ್ದೇವೆ: ಮಾಜಿ ಸಿಎಂ ಬೊಮ್ಮಾಯಿ

ಮುಸ್ಲಿಮರಿಗೆ ನೀಡಿರುವ ಮೀಸಲಾತಿ ರದ್ದು ಮಾಡಿರುವ ವಿಚಾರದಲ್ಲಿ ನಾವು ತೆಗೆದುಕೊಂಡ ನಿರ್ಧಾರಕ್ಕೆ...