ಕಾನೂನು ಸಚಿವರಾಗಿ ಕಿರಣ್‌ ರಿಜಿಜು ಬದಲಿಗೆ ಅರ್ಜುನ್ ರಾಮ್ ಮೇಘವಾಲ್ ನೇಮಕ

Date:

  • ಅರ್ಜುನ್ ಮೇಘವಾಲ್ ಅವರಿಗೆ ರಾಜ್ಯ ಸಚಿವರ ಹೆಚ್ಚುವರಿ ಜವಾಬ್ದಾರಿ
  • ಅರುಣಾಚಲ ಪಶ್ಚಿಮ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಸಂಸದರಾಗಿರವ ಕಿರಣ್‌ ರಿಜಿಜು

ಪ್ರಧಾನಿ ನರೇಂದ್ರ ಮೋದಿ ಅವರ ಸಂಪುಟದಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದ್ದು ಅರ್ಜುನ್ ರಾಮ್ ಮೇಘವಾಲ್ ಅವರನ್ನು ನೂತನ ಕೇಂದ್ರ ಕಾನೂನು ಸಚಿವರಾಗಿ ಗುರುವಾರ (ಮೇ 18) ನೇಮಕ ಮಾಡಲಾಗಿದೆ.

- Advertisement -

ಈ ಮುನ್ನ ಕಾನೂನು ಸಚಿವರಾಗಿದ್ದ ಕಿರಣ್ ರಿಜಿಜು ಅವರನ್ನು ಆ ಹುದ್ದೆಯಿಂದ ತೆರವುಗೊಳಿಸಲಾಗಿದೆ. ಅವರಿಗೆ ಭೂ ವಿಜ್ಞಾನ ಸಚಿವಾಲಯದ ಉಸ್ತುವಾರಿ ನೀಡಲಾಗಿದೆ. ಈ ಹಿಂದೆ ಜಿತೇಂದ್ರ ಸಿಂಗ್‌ ಅವರು ಈ ಖಾತೆ ನಿರ್ವಹಿಸುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಪ್ರಧಾನಿ ಮೋದಿ ಅವರ ಸಲಹೆಯ ಮೇರೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂಪುಟ ಪುನಾರಚನೆಗೆ ಅನುಮೋದನೆ ನೀಡಿದ್ದಾರೆ.

ಅರ್ಜುನ್ ರಾಮ್ ಮೇಘವಾಲ್ ಅವರನ್ನು ಕಿರಣ್ ರಿಜಿಜು ಅವರ ಸ್ಥಾನಕ್ಕೆ ನೇಮಕ ಮಾಡಲಾಗಿದೆ. ಅರ್ಜುನ್ ಮೇಘವಾಲ್ ಅವರಿಗೆ ಅಸ್ತಿತ್ವದಲ್ಲಿರುವ ಖಾತೆಗೆ ಹೆಚ್ಚುವರಿಯಾಗಿ ಕಾನೂನು ಹಾಗೂ ನ್ಯಾಯ ಸಚಿವಾಲಯ ರಾಜ್ಯ ಸಚಿವರಾಗಿ ಸ್ವತಂತ್ರ ಉಸ್ತುವಾರಿ ನೀಡಲಾಗಿದೆ.

ಮುಂಬರುವ ರಾಜಸ್ಥಾನ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಅರ್ಜುನ್‌ ಮೇಘವಾಲ್‌ ಅವರನ್ನು ಆರಿಸಲಾಗಿದೆ ಎಂದು ಹೇಳಲಾಗಿದೆ. ಅರ್ಜುನ್ ರಾಮ್ ಮೇಘವಾಲ್ ಅವರು ಪ್ರಸ್ತುತ ಸಂಸ್ಕೃತಿ ಖಾತೆಯ ರಾಜ್ಯ ಸಚಿವರಾಗಿದ್ದಾರೆ. ಕಿರಣ್ ರಿಜಿಜು ಅರುಣಾಚಲ ಪಶ್ಚಿಮ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಸಂಸದರಾಗಿದ್ದಾರೆ.

ಸುಪ್ರೀಂ ಕೋರ್ಟ್ ಹಾಗೂ ಹೈಕೋರ್ಟ್‌ಗಳಿಗೆ ನ್ಯಾಯಮೂರ್ತಿಗಳನ್ನು ನೇಮಕ ಮಾಡಲು ಜಾರಿಯಲ್ಲಿ ಇರುವ ಕೊಲಿಜಿಯಂ ವ್ಯವಸ್ಥೆ ಬಗ್ಗೆ ಕಿರಣ್‌ ರಿಜಿಜು ಅಸಮಾಧಾನ ಹೊಂದಿದ್ದರು. ನ್ಯಾಯಮೂರ್ತಿಗಳ ನೇಮಕಕ್ಕೆ ಹೊಸ ವ್ಯವಸ್ಥೆ ರೂಪಿಸುವಂತೆ ಹೇಳಿದ್ದರು.

ರಿಜಿಜು ಅವರು 2009ರ ಲೋಕಸಭೆ ಚುನಾವಣೆಯಲ್ಲಿ ಸೋತಿದ್ದರು. 2014ರ ಚುನಾವಣೆಯಲ್ಲಿ ರಿಜಿಜು ಮತ್ತೊಮ್ಮೆ ಗೆದ್ದು ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ಸಚಿವರಾಗಿದ್ದರು.

ಈ ಸುದ್ದಿ ಓದಿದ್ದೀರಾ? ಭಯೋತ್ಪಾದಕರೊಂದಿಗೆ ನಂಟು: 6 ರಾಜ್ಯಗಳ 122 ಸ್ಥಳಗಳಲ್ಲಿ ಎನ್‌ಐಎ ದಾಳಿ

ನಂತರ ಅವರನ್ನು ಮೋದಿ ಸರ್ಕಾರದ ಎರಡನೇ ಅವಧಿ 2019ರಲ್ಲಿ ಕ್ರೀಡಾ ಸಚಿವರನ್ನಾಗಿ ನೇಮಿಸಲಾಯಿತು. 2021 ಜುಲೈನಲ್ಲಿ ಸಂಪುಟ ವಿಸ್ತರಣೆ ಸಮಯದಲ್ಲಿ ಅವರನ್ನು ಕಾನೂನು ಸಚಿವರನ್ನಾಗಿ ನೇಮಿಸಲಾಗಿತ್ತು.

ರವಿಶಂಕರ್ ಪ್ರಸಾದ್ ಬದಲಿಗೆ ಅವರಿಗೆ ಈ ಜವಾಬ್ದಾರಿ ನೀಡಲಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ ಸರ್ಕಾರದ UPI ವಿನಾಯಿತಿ ಮೋಸ; ₹2,000 ಮೇಲ್ಪಟ್ಟ ಪಾವತಿಗಳಿಗೆ MDR ವಿಧಿಸಲು ಅನುಮತಿ

₹2,000 ಮೇಲ್ಪಟ್ಟ UPI ಪಾವತಿಗಳಿಗೆ ಮರ್ಚೆಂಟ್‌ ಡಿಸ್ಕೌಂಟ್‌ ರೇಟ್‌ (MDR) ವಿಧಿಸಲು...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್...

ಸರ್ಕಾರ ಆಧಾರ್‌ನ್ನು ನಂಬುವುದಾದರೆ, ಮತದಾರರ ಪಟ್ಟಿ ಪರಿಷ್ಕರಣೆಗೂ ಬಳಸಲಿ: ಆರ್‌ ಎಸ್‌ ಶರ್ಮಾ

ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರ ಗುರುತು ದೃಢೀಕರಣಕ್ಕೂ, ಪಿಂಚಣಿದಾರರ ಜೀವಂತಿಕೆ ಪರಿಶೀಲನೆಗೂ ಆಧಾರ್‌...

ಹೌತಿಗಳ ವಿರುದ್ಧ ಮಿಲಿಟರಿ ದಾಳಿಗೆ ಸೌದಿ ಅರೇಬಿಯಾ ಮನವಿ: ಬೆಂಬಲಿಸಿಲ್ಲ ಎಂದ ಟ್ರಂಪ್

ಕೆಂಪು ಸಮುದ್ರದ ಆಯಕಟ್ಟಿನ ಪ್ರದೇಶಗಳಲ್ಲಿ ಇರಾನ್ ಬೆಂಬಲಿತ ಹೌತಿ ಬಂಡುಕೋರರ ದಾಳಿ...