ಜಮ್ಮು- ಕಾಶ್ಮೀರ | ಕಿಶ್ತ್ವಾರ್ ಬಳಿ ಸೇನಾ ಹೆಲಿಕಾಪ್ಟರ್ ಪತನ ; ತನಿಖೆಗೆ ಆದೇಶ

Date:

Advertisements
  • ಕಳೆದ ಎರಡು ತಿಂಗಳಲ್ಲಿ ಎಎಲ್ಎಚ್ ಧ್ರುವ ಸೇನೆಯ ಹೆಲಿಕಾಪ್ಟರ್ 3 ನೇ ಬಾರಿಗೆ ಪತನ
  • ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಘಟನೆ ವರದಿ

ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಸೇನಾ ಹೆಲಿಕಾಪ್ಟರ್ ಗುರುವಾರ (ಮೇ 4) ಪತನಗೊಂಡಿದೆ.

ಭಾರತೀಯ ಸೇನೆಯ ಎಎಲ್ಎಚ್ ಧ್ರುವ ಹೆಲಿಕಾಪ್ಟರ್ ಪತನಗೊಂಡಿದೆ. ಇದರಲ್ಲಿದ್ದ ಮೂವರು ಸೇನಾ ಸಿಬ್ಬಂದಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸೇನಾ ಹೆಲಿಕಾಪ್ಟರ್ ಹುಡುಕಾಟ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಆರಂಭಿಸಲಾಗಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಸೇನೆಯು ಅಧಿಕೃತ ಹೇಳಿಕೆಯೊಂದರಲ್ಲಿ ತಿಳಿಸಿದೆ.

Advertisements

“ಹೆಲಿಕಾಪ್ಟರ್‌ನ ನಿಯಂತ್ರಣದಲ್ಲಿ ತಾಂತ್ರಿಕ ದೋಷ ಕಂಡು ಬಂದಿದೆ. ಈ ಹಿನ್ನೆಲೆ ಹೆಲಿಕಾಪ್ಟರ್‌ ಅನ್ನು ತುರ್ತು ಭೂಸ್ಪರ್ಶ ಮಾಡಲು ಮುಂದಾದಾಗ ಈ ಅವಘಡ ಸಂಭವಿಸಿದೆ. ಭೂಸ್ಪರ್ಶ ಮಾಡುವ ಪ್ರದೇಶದಲ್ಲಿ ತೊಂದರೆಯಿದ್ದ ಕಾರಣ ಹೀಗಾಗಿದೆ” ಎಂದು ಸೇನಾ ಪ್ರಕಟಣೆ ತಿಳಿಸಿದೆ.

“ಕಿಶ್ತ್ವಾರ್ ಜಿಲ್ಲೆಯ ಮರ್ವಾ ಪ್ರದೇಶದಲ್ಲಿ ಎಎಲ್ಎಚ್ ಧ್ರುವ ಹೆಲಿಕಾಪ್ಟರ್ ಪತನಗೊಂಡಿದ್ದು, ಗಾಯಗೊಂಡ ಸ್ಥಿತಿಯಲ್ಲಿ ಪೈಲಟ್ ಮತ್ತು ಸಹ ಪೈಲಟ್‌ರನ್ನು ರಕ್ಷಿಸಲಾಗಿದೆ. ತಕ್ಷಣವೇ ರಕ್ಷಣಾ ತಂಡಗಳು ಅಪಘಾತದ ಸ್ಥಳಕ್ಕೆ ಧಾವಿಸಿವೆ. ಈ ಕುರಿತು ತನಿಖೆಗೆ ಆದೇಶಿಸಲಾಗಿದೆ” ಎಂದು ಕಿಶ್ತ್ವಾರ್ ಪೊಲೀಸ್‌ ಅಧಿಕಾರಿ ಖಲೀಲ್ ಪೋಸ್ವಾಲ್ ಹೇಳಿದ್ದಾರೆ.

ಕಳೆದ ಎರಡು ತಿಂಗಳಲ್ಲಿ ಎಎಲ್ಎಚ್ ಧ್ರುವ ಹೆಲಿಕಾಪ್ಟರ್ ಅಪಘಾತವಾಗಿರುವ ಮೂರನೇ ಘಟನೆ ಇದಾಗಿದೆ.

ಸೇನೆಯ ಹೆಲಿಕಾಪ್ಟರ್ ಪತನಕ್ಕೆ ತಾಂತ್ರಿಕ ದೋಷ ಕಾರಣವಿರಬಹುದೇ ಅಥವಾ ಕಳಪೆ ಗೋಚರಂತೆಯಿಂದಾಗಿ ಈ ಅಪಘಾತ ಸಂಭವಿಸಿರಬಹುದೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ.

ಮಾರ್ಚ್ 16 ರಂದು ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಅರುಣಾಚಲ ಪ್ರದೇಶದ ಮಂಡಲ ಹಿಲ್ಸ್ ಪ್ರದೇಶದ ಬಳಿ ಪತನಗೊಂಡಿತ್ತು. ಅದರಲ್ಲಿದ್ದ ಇಬ್ಬರೂ ಪೈಲಟ್‌ಗಳು ಹುತಾತ್ಮರಾಗಿದ್ದರು.

ಈ ಸುದ್ದಿ ಓದಿದ್ದೀರಾ? ವಿಶ್ವ ಪತ್ರಿಕಾ ಸ್ವಾತಂತ್ರ್ಯ ಸೂಚ್ಯಂಕ; 180 ದೇಶಗಳ ಪೈಕಿ ಭಾರತಕ್ಕೆ 161ನೇ ಸ್ಥಾನ!

ಮಾರ್ಚ್ 30 ರಂದು ಕೆಂಟುಕಿಯಲ್ಲಿ ತರಬೇತಿ ಕಾರ್ಯಾಚರಣೆಯಲ್ಲಿದ್ದ ಅಮೆರಿಕ ಸೇನೆಯ 2 ಬ್ಲ್ಯಾಕ್ ಹಾಕ್ ಹೆಲಿಕಾಪ್ಟರ್‌ಗಳು ಪತನವಾಗಿ ಒಂಬತ್ತು ಸೈನಿಕರು ಹುತಾತ್ಮರಾಗಿದ್ದರು.

ಫೆಬ್ರವರಿಯಲ್ಲಿ ಅಮೆರಿಕಾದಲ್ಲಿ ಸೇನಾ ಹೆಲಿಕಾಫ್ಟರ್ ಪತನಗೊಂಡು ಇಬ್ಬರು ಸಾವನ್ನಪ್ಪಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X