ಮಧ್ಯಪ್ರದೇಶ | ಪ್ರೇಮಿಗಳಿಗೆ ಗುಂಡು ಹಾರಿಸಿ ಮೊಸಳೆಯಿರುವ ನದಿಗೆ ಎಸೆದ ಹೆತ್ತವರು

Date:

Advertisements

ವಿರೋಧದ ನಡುವೆಯೂ ಪ್ರೀತಿ ಮುಂದುವರೆಸಿದ ಪ್ರೇಮಿಗಳನ್ನು ಗುಂಡಿಕ್ಕಿ ಕೊಂದ ಪೋಷಕರು ಮೊಸಳೆಯಿರುವ ನದಿಗೆ ಎಸೆದ ಆಘಾತಕಾರಿ ಘಟನೆ ಮಧ್ಯ ಪ್ರದೇಶ ದ ಮೊರೆನಾ ಜಿಲ್ಲೆಯಲ್ಲಿ ನಡೆದಿದೆ.

ಪ್ರಕರಣ ಸಂಬಂಧಿಸಿದಂತೆ ಮಧ್ಯ ಪ್ರದೇಶ ರಾಜ್ಯದ ಮೊರೆನಾ ಜಿಲ್ಲೆಯ ಅಂಭಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎರಡು ವಾರಗಳ ಹಿಂದೆ ಯುವತಿಯ ಪೋಷಕರು ಈ ಕೃತ್ಯ ಎಸಗಿದ್ದು, ಯುವತಿಯ ಪೋಷಕರಿಗೆ ಅವರ ಕೆಲವು ಸಂಬಂಧಿಕರೂ ಸಹಾಯ ಮಾಡಿದ್ದರು ಎಂಬ ವಿಚಾರ ಬಯಲಾಗಿದೆ.

ಮಧ್ಯ ಪ್ರದೇಶ ದ ಮೊರೆನಾ ಜಿಲ್ಲೆಯ ರತ್ನಬಸೈ ಗ್ರಾಮದ 18 ವರ್ಷ ವಯಸ್ಸಿನ ಯುವತಿ ಶಿವಾನಿ ತೋಮರ್, ತಮ್ಮ ಪಕ್ಕದ ಗ್ರಾಮವಾದ ಬಲುಪುರ ನಿವಾಸಿ 21 ವರ್ಷದ ರಾಧೆಶ್ಯಾಂ ತೋಮರ್ ಎಂಬಾತನನ್ನು ಪ್ರೀತಿಸುತ್ತಿದ್ದರು. ಒಂದೇ ಜಾತಿಯವರಾಗಿದ್ದರೂ ಇಬ್ಬರ ಪ್ರೀತಿಗೆ ಕುಟುಂಬಸ್ಥರು ಒಪ್ಪಿಗೆ ಕೊಟ್ಟಿರಲಿಲ್ಲ. ಇಷ್ಟಾದರೂ ಹೆತ್ತವರ ಮಾತು ಕೇಳದೆ ಪ್ರೇಮಿಗಳು ತಮ್ಮ ಪ್ರೇಮ ಮುಂದುವರೆಸಿದ್ದರು.

Advertisements

ಈ ಸುದ್ದಿ ಓದಿದ್ದೀರಾ? ಖುಷ್ಬು ವಿರುದ್ಧ ‘ಹಳೆಯ ಪಾತ್ರೆ’ ಹೇಳಿಕೆ; ಡಿಎಂಕೆ ವಕ್ತಾರ ಉಚ್ಚಾಟನೆ

ಇದರಿಂದ ಆಕ್ರೋಶಗೊಂಡ ಯುವತಿಯ ಪೋಷಕರು ಯುವಕ ಮತ್ತು ಯುವತಿ ಇಬ್ಬರು ಒಟ್ಟಿಗೆ ಇದ್ದಾಗ ಅವರನ್ನು ಸೆರೆ ಹಿಡಿದು ಇಬ್ಬರ ಮೇಲೂ ಗುಂಡು ಹಾರಿಸಿ ಕೊಂದಿದ್ದಾರೆ. ಬಳಿಕ ಇಬ್ಬರ ಶವಕ್ಕೂ ಭಾರವಾದ ಕಲ್ಲುಗಳನ್ನು ಕಟ್ಟಿ, ಮೊಸಳೆಗಳು ಹೆಚ್ಚಾಗಿರುವ ಚಂಬಲ್ ನದಿಯಲ್ಲಿ ಶವಗಳನ್ನು ಎಸೆದಿದ್ದಾರೆ. ಈ ವಿಷಯವನ್ನು ವಿಚಾರಣೆ ವೇಳೆ ಆರೋಪಿಗಳು ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ಧಾರೆ.

ಈ ನದಿಯಲ್ಲಿ ಮೊಸಳೆಗಳ ಓಡಾಟ ವಿಪರೀತ ಇರುವ ಕಾರಣ, ಶವಗಳನ್ನು ಮೊಸಳೆಗಳು ತಿನ್ನಲಿ ಎಂದು ಆರೋಪಿಗಳು ಈ ಕೃತ್ಯವೆಸಗಿದ್ದಾರೆ ಎಂದು ಪೊಲೀಸರ ವಿಚಾರಣೆಯಿಂದ ತಿಳಿದು ಬಂದಿದೆ.

2 ವಾರಗಳ ಬಳಿಕ ಈ ಕೊಲೆ ಕೃತ್ಯ ಬೆಳಕಿಗೆ ಬಂದ ಕೂಡಲೇ ಮಧ್ಯ ಪ್ರದೇಶ ರಾಜ್ಯ ವಿಪತ್ತು ನಿರ್ವಹಣಾ ತಂಡ ಹಾಗೂ ಈಜುಗಾರರನ್ನು ಸಂಪರ್ಕ ಮಾಡಿದ ಪೊಲೀಸರು, ಇಬ್ಬರ ಮೃತದೇಹವನ್ನು ಪತ್ತೆ ಮಾಡಬೇಕೆಂದು ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಜೂನ್ 3 ರಿಂದ ಇಬ್ಬರು ನಾಪತ್ತೆಯಾಗಿದ್ದರು. ಯುವಕ ರಾಧೆಶ್ಯಾಂ ತೋಮರ್‌ನ ಕುಟುಂಬಸ್ಥರು ಶಿವಾನಿ ತೋಮರ್‌ ಪೋಷಕರ ವಿರುದ್ಧ ದೂರು ನೀಡಿದ್ದರು. ಈ ಸಂದರ್ಭದಲ್ಲಿ ಶಿವಾನಿ ತೋಮರ್ ಕುಟುಂಬಸ್ಥರನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸಿದ ವೇಳೆ ಅಮಾನುಷ ಕೃತ್ಯ ಬಯಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X