ಬಹಿರಂಗಗೊಂಡ ಬಿಹಾರದ ಜಾತಿ ಗಣತಿ ವರದಿ: ಯಾವ್ಯಾವ ಸಮುದಾಯ ಎಷ್ಟೆಷ್ಟು ಗೊತ್ತೆ?

Date:

2024ರ ಲೋಕಸಭೆ ಚುನಾವಣೆಗೆ ಕೆಲವೇ ತಿಂಗಳುಗಳ ಮೊದಲು ಬಿಹಾರ ಸರ್ಕಾರವು ತನ್ನ ಜಾತಿ ಆಧಾರಿತ ಸಮೀಕ್ಷೆಯ ಫಲಿತಾಂಶಗಳನ್ನು ಸೋಮವಾರ(ಅ.02) ಬಹಿರಂಗಗೊಳಿಸಿದೆ.

- Advertisement -

ಸರ್ಕಾರ ಬಿಡುಗಡೆಗೊಳಿಸಿದ ಜಾತಿ ಸಮೀಕ್ಷೆಯ ಅಂಕಿಅಂಶಗಳ ಪ್ರಕಾರ ಇತರೆ ಹಿಂದುಳಿದ ವರ್ಗಗಳು (ಒಬಿಸಿ) ಬಿಹಾರ ರಾಜ್ಯದ ಜನಸಂಖ್ಯೆಯ ಶೇ. 63 ರಷ್ಟು ಒಳಗೊಂಡಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಬಿಹಾರ ಜಾತಿ ಅಧಾರಿತ ಗಣನೆ ಎಂದೂ ಕರೆಯಲ್ಪಡುವ ಜನಗಣತಿಯು 13 ಕೋಟಿ ಜನಸಂಖ್ಯೆಯಲ್ಲಿ ಪರಿಶಿಷ್ಟ ಜಾತಿಯವರು ಶೇಕಡಾ 19 ಕ್ಕಿಂತ ಹೆಚ್ಚು ಎಂದು ತೋರಿಸುತ್ತದೆ. ಆದರೆ ಪರಿಶಿಷ್ಟ ಪಂಗಡದವರು ಶೇಕಡಾ 1.68 ರಷ್ಟಿದ್ದಾರೆ. ಮೇಲ್ಜಾತಿಗಳು ಅಥವಾ ‘ಸವರ್ಣೀಯರು’ ರಾಜ್ಯದ ಜನಸಂಖ್ಯೆಯ ಶೇಕಡಾ 15.52 ರಷ್ಟಿದ್ದಾರೆ. ಹಿಂದುಳಿದ ವರ್ಗಗಳು ಜನಸಂಖ್ಯೆಯ ಶೇಕಡಾ 27 ರಷ್ಟಿದ್ದರೆ, ಅತ್ಯಂತ ಹಿಂದುಳಿದ ವರ್ಗಗಳು (ಇಬಿಸಿಗಳು) ಶೇಕಡಾ 36 ರಷ್ಟಿದ್ದಾರೆ.

ಭೂಮಿಹಾರ್ ಜನಸಂಖ್ಯೆ ಶೇಕಡಾ 2.86 ರಷ್ಟಿದ್ದರೆ, ಬ್ರಾಹ್ಮಣರು ಶೇಕಡಾ 3.66 ರಷ್ಟಿದ್ದಾರೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ಸಮುದಾಯಕ್ಕೆ ಸೇರಿದ ಕುರ್ಮಿಗಳು ಜನಸಂಖ್ಯೆ ಶೇಕಡಾ 2.87 ರಷ್ಟಿದ್ದಾರೆ. ಮುಸಾಹರ್‌ಗಳು ಶೇಕಡಾ 3 ರಷ್ಟಿದ್ದಾರೆ ಮತ್ತು ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರ ಸಮುದಾಯಕ್ಕೆ ಸೇರಿದ ಯಾದವರು ಜನಸಂಖ್ಯೆಯ ಶೇಕಡಾ 14 ರಷ್ಟಿದ್ದಾರೆ.

ಈ ಸುದ್ದಿ ಓದಿದ್ದೀರಾ? ವರದಿಗಾರ್ತಿಗೆ ಅವಮಾನಿಸಿದ ಅಣ್ಣಾಮಲೈ: ಪತ್ರಕರ್ತರ ಖಂಡನೆ

ಸಮೀಕ್ಷೆಗೆ ಸಂಬಂಧಿಸಿದಂತೆ ಬಿಜೆಪಿಯಿಂದ ಕಾನೂನು ತೊಡಕುಗಳು ಮತ್ತು ವಿರೋಧವನ್ನು ಎದುರಿಸಿದ ಮುಖ್ಯಮಂತ್ರಿ ನಿತೀಶ್ ಕುಮಾರ್, ಎಲ್ಲ ವರ್ಗಗಳ ಅಭಿವೃದ್ಧಿ ಮತ್ತು ಉನ್ನತಿಗಾಗಿ ರಾಜ್ಯ ಸರ್ಕಾರದ ವರದಿಯು ಸಹಾಯ ಮಾಡುತ್ತದೆ ಎಂದು ಹೇಳಿದರು.

“ಇಂದು, ಗಾಂಧಿ ಜಯಂತಿಯ ಶುಭ ಸಂದರ್ಭದಲ್ಲಿ, ಬಿಹಾರದಲ್ಲಿ ನಡೆಸಿದ ಜಾತಿ ಆಧಾರಿತ ಜನಗಣತಿಯ ಅಂಕಿಅಂಶವನ್ನು ಪ್ರಕಟಿಸಲಾಗಿದೆ. ಜಾತಿ ಆಧಾರಿತ ಗಣತಿ ಕಾರ್ಯದಲ್ಲಿ ತೊಡಗಿರುವ ಇಡೀ ತಂಡಕ್ಕೆ ಅಭಿನಂದನೆಗಳು. ಜಾತಿ ಆಧಾರಿತ ಜನಗಣತಿಯು ಪ್ರತಿಯೊಬ್ಬರ ಆರ್ಥಿಕ ಸ್ಥಿತಿಯ ಬಗ್ಗೆಯೂ ಮಾಹಿತಿಯನ್ನು ಒದಗಿಸುತ್ತದೆ. ಈ ವರದಿಯ ಆಧಾರದ ಮೇಲೆ ಎಲ್ಲ ವರ್ಗಗಳ ಅಭಿವೃದ್ಧಿ ಮತ್ತು ಉನ್ನತಿಗೆ ಮುಂದಿನ ಕ್ರಮ ಕೈಗೊಳ್ಳಲಾಗುವುದು” ಎಂದು ನಿತೀಶ್ ಕುಮಾರ್‌ ಟ್ವಿಟರ್‌ನಲ್ಲಿ ತಿಳಿಸಿದ್ದಾರೆ.

ಮಿತ್ರ ಪಕ್ಷ ಆರ್‌ಜೆಡಿಯ ಮುಖ್ಯಸ್ಥ ಲಾಲು ಪ್ರಸಾದ್‌ ಯಾದವ್, “ಗಾಂಧಿ ಜಯಂತಿಯಂದು ನಾವೆಲ್ಲರೂ ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿದ್ದೇವೆ. ಬಿಜೆಪಿಯ ಹಲವು ಪಿತೂರಿಗಳು, ಕಾನೂನು ಅಡೆತಡೆಗಳು ನಡುವೆಯೂ ಇಂದು ಬಿಹಾರ ಸರ್ಕಾರ ಜಾತಿ ಆಧಾರಿತ ಸಮೀಕ್ಷೆಯನ್ನು ಬಿಡುಗಡೆ ಮಾಡಿದೆ” ಎಂದು ಟ್ವೀಟ್ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರ MLC ಚುನಾವಣೆ: 5 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಪ್ರಶಾಂತ್ ಕಿಶೋರ್ ಜನ ಸುರಾಜ್ ಪಾರ್ಟಿ

ಬಿಹಾರ ವಿಧಾನ ಪರಿಷತ್ತಿನ (ಎಂಎಲ್‌ಸಿ) ಮುಂಬರುವ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ...

ರಾಜಸ್ಥಾನದ ಬುಡಕಟ್ಟು ಶಾಲೆಗಳ ದುಸ್ಥಿತಿ: ‘ಖಾಲಿ ಜಾಗ, ಕುಡಿಯುವ ನೀರಿಲ್ಲ’ – ಸಿಜೆಪಿ ಆಕ್ರೋಶ

ರಾಜಸ್ಥಾನದ ಬುಡಕಟ್ಟು (ಆದಿವಾಸಿ) ಪ್ರದೇಶಗಳಲ್ಲಿರುವ ಸರ್ಕಾರಿ ಶಾಲೆಗಳ ಶೋಚನೀಯ ಸ್ಥಿತಿಯನ್ನು ಖಂಡಿಸಿ...

ಜಾತಿ ಕಿರುಕುಳ | ಐಐಟಿ-ಬಾಂಬೆ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ಪ್ರೊಫೆಸರ್ ವಿರುದ್ಧ ಎಫ್‌ಐಆರ್ ದಾಖಲು

ಮುಂಬೈನ ಐಐಟಿ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆಗೆ...