ಜೈಲಿಗೆ ತಳ್ಳಿದರೂ ಜನರ ಪರವಾಗಿ ಹೋರಾಟ; ವಯನಾಡಿನಲ್ಲಿ ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ

Date:

  • ಸಂಸದ ಸ್ಥಾನದ ರದ್ದಾದ ನಂತರ ವಯನಾಡಿನಲ್ಲಿ ಸಭೆ ನಡೆಸಿದ ರಾಹುಲ್ ಗಾಂಧಿ
  • ಸಹೋದರನ ಜೊತೆಗೆ ಬಹಿರಂಗ ಸಭೆಯಲ್ಲಿ ಭಾಗವಹಿಸಿದ ಪ್ರಿಯಾಂಕಾ ಗಾಂಧಿ ವಾದ್ರಾ

ಬಿಜೆಪಿ ನನ್ನ ಮನೆ ಕಿತ್ತಕೊಂಡು ಜೈಲಿಗೆ ತಳ್ಳಲಿ, ಆದರೆ ವಯನಾಡು ಜನರನ್ನು ಪ್ರತಿನಿಧಿಸುವುದನ್ನು ಹಾಗೂ ಅವರ ಪರವಾಗಿ ಹೋರಾಟ ನಡೆಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದರು.

ಸಂಸದ ಸ್ಥಾನದಿಂದ ಅನರ್ಹಗೊಂಡ ನಂತರ ತಮ್ಮ ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರೊಂದಿಗೆ ಮೊದಲ ಬಾರಿಗೆ ಕೇರಳದ ವಯನಾಡಿಗೆ ಭೇಟಿ ನೀಡಿದ ರಾಹುಲ್ ಗಾಂಧಿ ಅವರು ಸಾರ್ವಜನಿಕ ಸಮಾವೇಶದಲ್ಲಿ ಮಾತನಾಡಿದರು.

“ಬಿಜೆಪಿಯವರು ನನ್ನ ಸಂಸದನ ಸ್ಥಾನ, ವಾಸ್ತವ್ಯ ಮತ್ತು ಸ್ಥಾನಮಾನ ಕಿತ್ತುಕೊಂಡಿರಬಹುದು, ಜೈಲಿಗೆ ಕೂಡ ಹಾಕಬಹುದು. ಆದರೆ ನನ್ನನ್ನು ವಯನಾಡಿನ ಜನತೆಯಿಂದ ದೂರಮಾಡಲು ಸಾಧ್ಯವಾಗದು” ಎಂದು ಹೇಳಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ನಾಲ್ಕು ವರ್ಷಗಳ ಹಿಂದೆ ನಾನು ಇಲ್ಲಿಗೆ ಬಂದು ಸಂಸದನಾಗಿದ್ದೇನೆ. ಕೇರಳವು ನನ್ನನ್ನು ಕುಟುಂಬದ ಭಾಗವಾಗಿ ಮತ್ತು ಅವರ ಮಗ ಎಂದು ಭಾವಿಸಿದೆ. ಸಂಸದ ಎಂದರೆ ಕೇವಲ ಜನರ ಪ್ರತಿನಿಧಿಯಲ್ಲ. ಸಾರ್ವಜನಿಕರ ಭಾವನೆಗಳು, ಕಷ್ಟಗಳು ಹಾಗೂ ಅವರ ಅಗತ್ಯಗಳನ್ನು ಅರ್ಥ ಮಾಡಿಕೊಳ್ಳಬೇಕು” ಎಂದು ರಾಹುಲ್ ಗಾಂಧಿ ತಿಳಿಸಿದರು.

ತಾನು ಕೆಲವು ವರ್ಷಗಳಿಂದ ಬಿಜೆಪಿ ವಿರುದ್ಧ ಹೋರಾಡುತ್ತಿದ್ದೇನೆ ಎಂದು ಒತ್ತಿ ಹೇಳಿದ ರಾಹುಲ್‌ ಗಾಂಧಿ, “ಎದುರಾಳಿಯು ಸತ್ಯ ಹಾಗೂ ಜನರಿಗೆ ಹೊರತುಪಡಿಸಿ ಪೊಲೀಸರಿಗಾಗಲಿ ಅಥವಾ ಮತ್ಯಾರಿಗಾಗಲಿ ಹೆದರುವುದಿಲ್ಲ ಎಂದು ಆಡಳಿತ ನಡೆಸುವವರು ತಿಳಿದುಕೊಳ್ಳಬೇಕು. ಅವರು ಸತ್ಯದ ಪರ ಮಾತನಾಡಿದ್ದಕ್ಕಾಗಿ ನನ್ನ ಮೇಲೆ ಹೆಚ್ಚು ಆಕ್ರಮಣ ಮಾಡುತ್ತಾರೆ. ಆದರೂ ಕೊನೆಯವರೆಗೂ ಸತ್ಯ ಮಾತನಾಡುವುದನ್ನು ನಿಲ್ಲಿಸುವುದಿಲ್ಲ” ಎಂದು ಹೇಳಿದರು.

“ವಯನಾಡಿನಲ್ಲಿ ಎಷ್ಟು ಜನರು ಪ್ರವಾಹದಲ್ಲಿ ಮನೆ ಕಳೆದುಕೊಂಡರು ಮತ್ತು ಅವರು ಹೇಗೆ ಸಂಕಷ್ಟಕ್ಕೆ ಒಳಗಾದರು ಎಂಬುದನ್ನು ನಾನು ನೋಡಿದ್ದೇನೆ. ಜನರ ಕಷ್ಟಕ್ಕಿಂತ ನಾನು ಖಾಲಿ ಮಾಡಿರುವ ಮನೆ ಮುಖ್ಯವಲ್ಲ. ಜನರ ಏಳಿಗೆ, ದೇಶದ ಹಿತಾಸಕ್ತಿಯೇ ನನಗೆ ಮುಖ್ಯ” ಎಂದು ತಿಳಿಸಿದರು

ಈ ಸುದ್ದಿ ಓದಿದ್ದೀರಾ?: ‘ಭಾರತೀಯ ಮುಸ್ಲಿಮರು ಸ್ಥಿತಿವಂತರು’; ನಿರ್ಮಲಾ ಹೇಳಿಕೆಗೆ ವಾಸ್ತವ ಚಿತ್ರಣ ತೆರೆದಿಟ್ಟ ಪತ್ರಕರ್ತರು

ಗೌತಮ್‌ ಅದಾನಿ ರಕ್ಷಣೆಗೆ ನಿಂತ ಸರ್ಕಾರ

ಸಮಾವೇಶದಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ, “ಬಿಜೆಪಿಯವರಿಗೆ ಉತ್ತರಿಸಲು ಸಾಧ್ಯವಾಗದ ಪ್ರಶ್ನೆಯನ್ನು ಕೇಳಿದ್ದಕ್ಕಾಗಿ ರಾಹುಲ್ ಗಾಂಧಿಯವರನ್ನು ಅನರ್ಹಗೊಳಿಸಲಾಯಿತು. ಗೌತಮ್ ಅದಾನಿಯನ್ನು ರಕ್ಷಿಸಲು ಇಡೀ ಸರ್ಕಾರ ಪ್ರಯತ್ನಿಸುತ್ತಿದೆ. ಪ್ರಧಾನಿಯವರು ಅದಾನಿಯನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ. ಬಿಜೆಪಿ ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹಾಳುಗೆಡವುತ್ತಿದೆ. ಪ್ರಧಾನಿಯವರು ಪ್ರತಿದಿನ ತಮ್ಮ ಡ್ರೆಸ್ಸಿಂಗ್ ಶೈಲಿಯನ್ನು ಬದಲಾಯಿಸುತ್ತಿದ್ದಾರೆ ವಿನಾ ಸಾಮಾನ್ಯ ಜನರ ಜೀವನಶೈಲಿಯಲ್ಲಿ ಯಾವುದೇ ಬದಲಾವಣೆ ತರಲು ಪ್ರಯತ್ನಿಸುತ್ತಿಲ್ಲ. ದೇಶದಲ್ಲಿ ನಿರುದ್ಯೋಗ ಸಮಸ್ಯೆ ತಾಂಡವವಾಡುತ್ತಿದೆ” ಎಂದು ಕಿಡಿಕಾರಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

Fact Check | ಸುಳ್ಳು ಹೇಳಿದ ಪ್ರಧಾನಿ ಮೋದಿ; ಆಂಧ್ರದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಕಿತ್ತು ಮುಸ್ಲಿಮರಿಗೆ ಕೊಟ್ಟಿಲ್ಲ

''ಆಂಧ್ರಪ್ರದೇಶದಲ್ಲಿ ಮುಸ್ಲಿಂ ಮೀಸಲಾತಿಯನ್ನು ಜಾರಿಗೊಳಿಸಲು ಕಾಂಗ್ರೆಸ್ ಸರ್ಕಾರ ಎಸ್‌ಸಿ/ಎಸ್‌ಟಿ ಮೀಸಲಾತಿಯನ್ನು ಕಡಿಮೆ...

ಬಿಜೆಪಿಯಲ್ಲಿ ಆತಂಕ ಸೃಷ್ಟಿಸಿದ ಕಾಂಗ್ರೆಸ್ ಪ್ರಣಾಳಿಕೆ: ಮೆಹಬೂಬಾ ಮುಫ್ತಿ

"ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಬಿಡುಗಡೆ ಮಾಡಿರುವ ಪ್ರಣಾಳಿಕೆಯು ಜನಪರವಾಗಿದ್ದು, ಇದು ಕೋಮು...

ಸುಪ್ರೀಂ ಕೋರ್ಟ್‌ನಲ್ಲಿ ಕೇಜ್ರಿವಾಲ್ ಬಂಧನ ಸಮರ್ಥಿಸಿಕೊಂಡ ಇಡಿ; ಅಫಿಡವಿಟ್ ಸಲ್ಲಿಕೆ

ಸುಪ್ರೀಂ ಕೋರ್ಟ್‌ನಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಅಫಿಡವಿಟ್ ಸಲ್ಲಿಸಿದ್ದು ದೆಹಲಿ ಅಬಕಾರಿ...

ಬೀದರ್‌ | ಮೋದಿಯವರ ಸಬ್ ಕಾ ಸಾಥ್ – ಸಬ್ ಕಾ ವಿಕಾಸ್ ಎನ್ನುವ ಘೋಷಣೆಯೇ ಬೋಗಸ್ : ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಬಿಜೆಪಿ ಪಕ್ಷ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ...