ಮುಂದಿನ ನಾಲ್ಕು ವಾರಗಳಲ್ಲಿ ಭಾರತದಲ್ಲಿ ಮುಂಗಾರು ದುರ್ಬಲ: ಸ್ಕೈಮೆಟ್‌ ವರದಿ

Date:

  • ಮುಂಗಾರು ದುರ್ಬಲದ ಪರಿಣಾಮ ಜುಲೈ 6ರವರೆಗೆ ಮಳೆಯಲ್ಲಿ ವ್ಯತ್ಯಯ
  • ಜೂನ್ 1ರ ಬದಲಿಗೆ ಜೂನ್ 8ಕ್ಕೆ ಕೇರಳಕ್ಕೆ ಆಗಮಿಸಲಿರುವ ನೈರುತ್ಯ ಮುಂಗಾರು

ಮುಂದಿನ ನಾಲ್ಕು ವಾರಗಳಲ್ಲಿ ಭಾರತದಲ್ಲಿ ಮುಂಗಾರು ದುರ್ಬಲ ಸ್ಥಿತಿಯಲ್ಲಿ ಇರುವ ಸಾಧ್ಯತೆ ಇದೆ ಎಂದು ಖಾಸಗಿ ಹವಾಮಾನ ಮುನ್ಸೂಚನಾ ಸಂಸ್ಥೆ ಸ್ಕೈಮೆಟ್ ವೆದರ್‌ ಹೇಳಿರುವುದಾಗಿ ಮಂಗಳವಾರ (ಜೂನ್ 13) ವರದಿಯಾಗಿದೆ.

- Advertisement -

ಅನಿಯಮಿತವಾಗಿ ಸುರಿಯುವ ಮಳೆಯಿಂದ ಕೃಷಿ ಮೇಲೆ ಪರಿಣಾಮ ಉಂಟಾಗಬಹುದು ಎಂದು ಸಂಸ್ಥೆ ಕಳವಳ ವ್ಯಕ್ತಪಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಉತ್ತರ ಕನ್ನಡ: ನಡುಮುರಿದ ಕಾಂಗ್ರೆಸ್ ಕಟ್ಟಬಲ್ಲರೆ ಹೊಸ ಅಧ್ಯಕ್ಷರು?

ಉತ್ತರ ಕನ್ನಡ ಅಹಿಂದ ಜಿಲ್ಲೆ. ಬುಡಕಟ್ಟು ಹಾಲಕ್ಕಿ ಒಕ್ಕಲಿಗರು, ದೀವರು, ವಿವಿಧ ಪಂಗಡದ ಮೀನುಗಾರ ಸಂಕುಲ, ಕೋಮಾರ ಪಂಥ, ಕೊಂಕಣ ಮರಾಠರು ದೊಡ್ಡ ಸಂಖ್ಯೆಯಲ್ಲಿದ್ದಾರೆ. ಈ ಓಬಿಸಿಗಳ ಬೆಂಬಲ ಕ್ರೋಡೀಕರಿಸುವ ಚಾಕಚಕ್ಯತೆ ಹೊಸ...

ಹಳೇ ಮೈಸೂರು: ಮಹಿಳಾ ರಾಜಕಾರಣಕ್ಕೆ ದಿಕ್ಕು ತೋರಿದ ‘ಗುಂಡ್ಲುಪೇಟೆ...

ಹಳೇ ಮೈಸೂರು ಭಾಗದ ರಾಜಕೀಯ ಇತಿಹಾಸವನ್ನು ಗಮನಿಸಿದಾಗ, ಪುರುಷ ಪ್ರಧಾನ ರಾಜಕಾರಣದ ನಡುವೆ ತನ್ನದೇ ಆದ ಛಾಪು ಮೂಡಿಸಿದ ಮಹಿಳಾ ನಾಯಕಿಯರ ಪೈಕಿ ಕೆ.ಎಸ್. ನಾಗರತ್ನಮ್ಮ ಅವರ ಹೆಸರು ವಿಶಿಷ್ಟವಾಗಿ ಕಾಣಿಸುತ್ತದೆ. ಶಾಸಕಿಯಾಗಿ,...

ಬಡ ಯೆಮನ್ ಇಕ್ಕಳದಲ್ಲಿ ಶ್ರೀಮಂತ ಸೌದಿ: ವಿನಾಕಾರಣ ದಾಳಿ...

ಸುಮ್ಮನೆ ಇರಲಾರದ ಸೌದಿ ಅರೇಬಿಯಾ, ಬಡ ರಾಷ್ಟ್ರಗಳ ಮೇಲೆ ದಬ್ಬಾಳಿಕೆ ಮಾಡಲು ಹೋಗಿ, ಮರ್ಮಕ್ಕೆ ತಾಕುವಂತಹ ಹೊಡೆತ ತಿಂದು ಕೂತಿದೆ. ಈಗ ಸೌದಿ ಅರೇಬಿಯಾದ ನೆರವಿಗೆ ಅಮೆರಿಕಾ, ಇಸ್ರೇಲ್‌, ಪಾಕಿಸ್ತಾನ ಮತ್ತು ಟಿರ್ಕಿ...

“ಜುಲೈ 6ರವರೆಗೆ ಮುಂದಿನ ನಾಲ್ಕು ವಾರಗಳ ಕಾಲ ನಿರಾಶಾದಾಯಕ ವಾತಾವರಣ ಇರಲಿದೆ ಎಂದು ವಿಸ್ತೃತ ಶ್ರೇಣಿಯ ಮುನ್ಸೂಚನಾ ವ್ಯವಸ್ಥೆ (ಇಆರ್‌ಪಿಎಸ್‌) ಅಂದಾಜು ತೋರುತ್ತಿದೆ. ಕೃಷಿ ಭೂಮಿಯು ಬಿರುಕುಬಿಟ್ಟು ಒಣಗಿಹೋಗುತ್ತಿರುವುದು ಗೋಚರಿಸುತ್ತಿದ್ದು ಬಿತ್ತನೆಯ ನಿರ್ಣಾಯಕ ಮತ್ತು ಕೃಷಿ ಭೂಮಿಯನ್ನು ಸಿದ್ಧಗೊಳಿಸುವ ಸಮಯದಲ್ಲಿ ಮುಂಗಾರು ದುರ್ಬಲ ಸ್ಥಿತಿ ಉಂಟಾಗುವ ಸಾಧ್ಯತೆ ಇದೆ” ಎಂದು ಹವಾಮಾನ ಸಂಸ್ಥೆ ಸೋಮವಾರ (ಜೂನ್ 12) ಪ್ರಕಟಣೆಯೊಂದರಲ್ಲಿ ಹೇಳಿದೆ.

ಮುಂಗಾರು ದುರ್ಬಲ ವಲಯಕ್ಕೆ ಬರುವ ಭಾರತದ ಮಧ್ಯ ಹಾಗೂ ಪಶ್ಚಿಮ ಭಾಗಗಳಲ್ಲಿ ಋತುವಿನ ಆರಂಭದಲ್ಲಿ ಅಸಮರ್ಪಕ ಮಳೆಯಿಂದ ಉಂಟಾಗುವ ಒಣ ಭೂಮಿಯನ್ನು ನಿಭಾಯಿಸುವಲ್ಲಿ ಉಂಟಾಗುವ ಸವಾಲುಗಳನ್ನು ಎದುರಿಸಬಹುದು” ಎಂದು ಸ್ಕೈಮೆಟ್ ಸಂಸ್ಥೆ ಹೇಳಿದೆ.

ನೈರುತ್ಯ ಮುಂಗಾರು ನಿಗದಿತ ಜೂನ್ 1ರ ದಿನಾಂಕದ ಬದಲಿಗೆ ಒಂದು ವಾರ ತಡವಾಗಿ ಜೂನ್ 8ಕ್ಕೆ ಕೇರಳ ಪ್ರವೇಶಿಸಲಿದೆ.

ಅರೇಬಿಯನ್ ಸಮುದ್ರದಲ್ಲಿ ಉಂಟಾಗಿರುವ ಬಿಪೊರ್‌ಜಾಯ್‌ ಚಂಡಮಾರುತ ಮೊದಲು ಕೇರಳಕ್ಕೆ ಮುಂಗಾರು ಪ್ರವೇಶವನ್ನು ವಿಳಂಬಗೊಳಿಸಿತು. ಈಗ ಮಳೆ ಬೀಳುವ ವ್ಯವಸ್ಥೆಗೆ ಅಡ್ಡಿಯಾಗುತ್ತಿದೆ.

ಮುಂಗಾರು ದುರ್ಬಲ ಪರಿಣಾಮ ದ್ವೀಪದ ಆಂತರಿಕ ಪ್ರದೇಶಗಳಿಗೆ ಮಳೆ ಪ್ರವೇಶಕ್ಕೆ ತಡೆ ಉಂಟಾಗಿದೆ ಎಂದು ಹವಾಮಾನ ಸಂಸ್ಥೆ ಹೇಳಿದೆ.

ಜೂನ್ 15ರೊಳಗೆ ಮುಂಗಾರು ಮಳೆಯು ಮಹಾರಾಷ್ಟ್ರ, ಒಡಿಶಾ ಮತ್ತು ತೆಲಂಗಾಣ, ಛತ್ತೀಸ್‌ಘಡ, ಜಾರ್ಖಂಡ್ ಹಾಗೂ ಬಿಹಾರದ ಭಾಗಶಃ ಪ್ರದೇಶಗಳಲ್ಲಿ ಹಾದು ಹೋಗುತ್ತದೆ.

ಆದರೆ ಈ ಬಾರಿ ಮುಂಗಾರು ಈ ಪ್ರದೇಶಗಳಲ್ಲಿ ನೆಲೆಸಲು ಇನ್ನೂ ಹರಸಾಹಸ ಪಡುತ್ತಿದೆ ಎಂದು ಸ್ಕೈಮೆಟ್ ಹೇಳಿದೆ.

ಈ ಸುದ್ದಿ ಓದಿದ್ದೀರಾ? ಹರಿಯಾಣ | ಸೂರ್ಯಕಾಂತಿ ಬೆಳೆಗೆ ಎಂಎಸ್‌ಪಿ ನೀಡಲು ಆಗ್ರಹಿಸಿ ಹೆದ್ದಾರಿ ತಡೆದು ರೈತರು ಪ್ರತಿಭಟನೆ

ಪ್ರಸ್ತುತ ಮುಂಗಾರು ಈಶಾನ್ಯ ಹಾಗೂ ಪಶ್ಚಿಮ ಕರಾವಳಿಗೆ ಸೀಮಿತವಾಗಿದೆ.

ಹವಾಮಾನ ವ್ಯವಸ್ಥೆಯಲ್ಲಿ ಬದಲಾವಣೆ ಉಂಟಾಗಿದೆ. ಇದರಿಂದ ಮಳೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಸಂಸ್ಥೆ ಹೇಳಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಸೂದ್ ಅಜರ್ ತಲೆಗೆ 70 ಲಕ್ಷ ಬಹುಮಾನ ಘೋಷಿಸಿದ ಪಾಕ್: ‘ಕಣ್ಣೊರೆಸುವ ನಾಟಕ’ ಎಂದ ಭಾರತ

ಜೈಷ್-ಎ-ಮೊಹಮ್ಮದ್ (ಜೆಇಎಂ) ಉಗ್ರ ಸಂಘಟನೆಯ ಮುಖ್ಯಸ್ಥ ಮಸೂದ್ ಅಜರ್‌ನನ್ನು ಹಿಡಿದುಕೊಟ್ಟವರಿಗೆ ನೀಡುವ...

ಪೊಲೀಸ್ ಕ್ರೌರ್ಯ: ಗರ್ಭಿಣಿ ಹೊಟ್ಟೆಗೆ ಒದ್ದ ಪೊಲೀಸರು; ತಾಯಿ ಸಾವು

ಕಳ್ಳತನದ ಆರೋಪದಲ್ಲಿ ಆರೋಪಿಯನ್ನು ಬಂಧಿಸಲು ಬಂದ ಪೊಲೀಸರು, ಆತನ ಪತ್ನಿ ಗರ್ಭಿಣಿಯ...