ಉತ್ತರಾಖಂಡದ ಗಡಿಯಂತ್ರಣ ರೇಖೆಯ ಉದ್ದಕ್ಕೂ ಚೀನಾದ ಹೊಸ ಮಿಲಿಟರಿ ನಿರ್ಮಾಣಗಳ ವರದಿಗಳ ಕುರಿತು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಸರ್ಕಾರವನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತರಾಟೆಗೆ ತೆಗೆದುಕೊಂಡಿದ್ದಾರೆ.
ಈ ಬಗ್ಗೆ ಟ್ವಿಟರ್ನಲ್ಲಿ ಬರೆದುಕೊಂಡಿರುವ ಅವರು, “ಚೀನಾವನ್ನು ಬುದ್ಧಿವಂತಿಕೆಯಿಂದ ಎದುರಿಸಬೇಕೇ ವಿನಾ ಬಡಾಯಿ ಕೊಚ್ಚಿಕೊಳ್ಳುವುದರಿಂದ ಸಾಧ್ಯವಿಲ್ಲ. ಗಡಿ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಚೀನಾವನ್ನು ದೋಷಮುಕ್ತಗೊಳಿಸಿದ್ದಕ್ಕಾಗಿ ರಾಷ್ಟ್ರವು ಭಾರೀ ಬೆಲೆ ತೆರಬೇಕಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.
“ಈಗ ಉತ್ತರಾಖಂಡದಲ್ಲಿರುವ ಗಡಿ ನಿಯಂತ್ರಣ ರೇಖೆಯಲ್ಲಿ ಸೇನೆಗೆ ಸಂಬಂಧಿಸಿದಂತೆ ಚೀನಾವು ಹೊಸ ನಿರ್ಮಾಣಗಳನ್ನು ಕೈಗೆತ್ತಿಕೊಂಡಿರುವುದರಿಂದ ನಮ್ಮ ದೇಶದ ಪ್ರಾದೇಶಿಕ ಸಮಗ್ರತೆಗೆ ಅಡ್ಡಿಯಾಗುತ್ತಿದೆ” ಎಂದು ತಿಳಿಸಿದ್ದಾರೆ.
ಉತ್ತರಾಖಂಡದ ಗಡಿ ನಿಯಂತ್ರಣ ರೇಖೆಯ ಬಳಿ ನಿರ್ಮಾಣವಾಗುತ್ತಿರುವ ಚೀನಾದ ನಿರ್ಮಾಣಗಳನ್ನು ತೋರಿಸುವ ಉಪಗ್ರಹ ಚಿತ್ರಗಳನ್ನು ಖರ್ಗೆ ಹಂಚಿಕೊಂಡಿದ್ದಾರೆ.
ಚೀನಾದ ಆಕ್ರಮಣಕಾರಿ ನೀತಿಯ ಬಗ್ಗೆ ಕೇಂದ್ರ ಸರ್ಕಾರ ಏಕೆ ಪ್ರಶ್ನೆ ಮಾಡುವುದಿಲ್ಲ. ಪೂರ್ವ ಲಡಾಖ್ನಲ್ಲಿ ಗಡಿ ಪರಿಸ್ಥಿತಿಯು ಗಂಭೀರವಾಗಿರುವಾಗ ಚೀನಾದೊಂದಿಗಿನ ಸಂಬಂಧಗಳ ಬಗ್ಗೆ ಮಾತನಾಡಿದರೆ ಯಾವುದೇ ಪ್ರಯೋಜನವಿಲ್ಲ”
ಈ ಸುದ್ದಿ ಓದಿದ್ದೀರಾ? ಥಾಣೆ ಹತ್ಯೆ ಪ್ರಕರಣ | ಎಚ್ಐವಿ ಸೋಂಕಿತನಾಗಿದ್ದ ಹಂತಕ; ಮಹಿಳೆಯದು ಆತ್ಮಹತ್ಯೆ ಎಂದು ಹೇಳಿಕೆ!
ಚರ್ಚೆಯಿಲ್ಲದ ವಿಷಯವನ್ನು ಬಿಟ್ಟು ದೇಶದ ಗಡಿಯನ್ನು ಆಕ್ರಮಿಸಿರುವ ಚೀನಾದ ಬಗ್ಗೆ ಏಕೆ ಮಾತನಾಡುವುದಿಲ್ಲ. ಅಲ್ಲದೆ ಪೂರ್ವ ಲಡಾಖ್ನ ಗಡಿಯಲ್ಲಿ ಪರಿಸ್ಥಿತಿಯು ಸಾಮಾನ್ಯವಲ್ಲದಿರುವಾಗ ನೆರೆಯ ದೇಶದೊಂದಿಗಿನ ತನ್ನ ಸಂಬಂಧಗಳ ಬಗ್ಗೆ ಮೃದುಧೋರಣೆ ತಾಳಿದರೆ ಸಮಸ್ಯೆ ಪರಿಹಾರವಾಗುವುದೇ ಎಂದು ಖರ್ಗೆ ಪ್ರಶ್ನಿಸಿದ್ದಾರೆ.