ಮಣಿಪುರ | ವಿದ್ಯಾರ್ಥಿಗಳ ಭೀಕರ ಹತ್ಯೆ ಪ್ರಕರಣ; ಪ್ರಮುಖ ಆರೋಪಿಗಳ ಬಂಧನ

Date:

Advertisements

ಮಣಿಪುರದಲ್ಲಿ ಜುಲೈನಲ್ಲಿ ನಾಪತ್ತೆಯಾದ ಇಬ್ಬರು ವಿದ್ಯಾರ್ಥಿಗಳ ಭೀಕರ ಹತ್ಯೆಯ ಪ್ರಕರಣದ ಆರು ಆರೋಪಿಗಳನ್ನು ಬಂಧಿಸಲಾಗಿದ್ದು, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಸಿಬಿಐ ವಶಕ್ಕೆ ಪಡೆದಿದೆ. ಬಂಧನದ ಬಗ್ಗೆ ಮಣಿಪುರ ಮುಖ್ಯಮಂತ್ರಿ ಎನ್‌ ಬಿರೇನ್‌ ಸಿಂಗ್‌ ಖಚಿತಪಡಿಸಿದ್ದಾರೆ.

“ಫಿಜಾಮ್ ಹೇಮಂಜಿತ್ (20) ಮತ್ತು ಹಿಜಾಮ್ ಲಿಂಟೋಯಿಂಗಂಬಿ(17) ಅವರ ಅಪಹರಣ ಮತ್ತು ಕೊಲೆಗೆ ಕಾರಣವಾದ ಕೆಲವು ಪ್ರಮುಖ ಆರೋಪಿಗಳನ್ನು ಇಂದು ಚುರಚಂದಪುರದಿಂದ ಬಂಧಿಸಲಾಗಿದೆ. ಅಪರಾಧ ಮಾಡಿದ ನಂತರ ಪರಾರಿಯಾಗಬಹುದು, ಆದರೆ ಅವರು ಕಾನೂನಿನ ಕೈಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಅವರು ಮಾಡಿದ ಘೋರ ಅಪರಾಧಕ್ಕೆ ಮರಣದಂಡನೆ ಸೇರಿದಂತೆ ಗರಿಷ್ಠ ಶಿಕ್ಷೆಯನ್ನು ಖಚಿತಪಡಿಸಿಕೊಳ್ಳಲು ನಾವು ಬದ್ಧರಾಗಿದ್ದೇವೆ” ಎಂದು ಮುಖ್ಯಮಂತ್ರಿ ಎನ್‌ ಬಿರೇನ್‌ ಸಿಂಗ್‌ ಟ್ವಿಟರ್‌ನಲ್ಲಿ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ ಗುಜರಾತ್‌: ಕಳ್ಳತನದ ಶಂಕೆಯಲ್ಲಿ ದಲಿತ ಎಂಜಿನಿಯರ್‌ಗೆ ಸಹೋದ್ಯೋಗಿಗಳಿಂದ ಥಳಿತ

Advertisements

ಮೇ 3 ರಂದು ಜನಾಂಗೀಯ ಹಿಂಸಾಚಾರ ಪ್ರಾರಂಭವಾದ ಇಂಫಾಲ್‌ನಿಂದ 51 ಕಿಮೀ ದೂರದಲ್ಲಿರುವ ಕಣಿವೆ ಜಿಲ್ಲೆ ಚುರಚಂದ್‌ಪುರದಿಂದ ಪೊಲೀಸರು ಮತ್ತು ಸೇನೆಯು ಜಂಟಿ ಕಾರ್ಯಾಚರಣೆಯಲ್ಲಿ ಶಂಕಿತ ಆರೋಪಿಗಳನ್ನು ಬಂಧಿಸಲಾಗಿದೆ.

ಹಿರಿಯ ಪೊಲೀಸ್ ಅಧೀಕ್ಷಕ ನೆಕ್ಟರ್ ಸಂಜೆನ್ಬಮ್ ಅವರು ಚುರಾಚಂದ್‌ಪುರದಲ್ಲಿ ಶಂಕಿತರನ್ನು ಹಿಡಿಯಲು ಕಠಿಣ ಕಾರ್ಯಾಚರಣೆಯನ್ನು ಕೈಗೊಂಡು ಆರೋಪಿಗಳನ್ನು ಬಂಧಿಸಲಾಗಿದೆ.

ಜುಲೈನಲ್ಲಿ ನಾಪತ್ತೆಯಾದ ಇಬ್ಬರು ವಿದ್ಯಾರ್ಥಿಗಳ ಶವಗಳನ್ನು ತೋರಿಸುವ ಫೋಟೋಗಳು ಸೆಪ್ಟೆಂಬರ್ 26 ರಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿದ್ದವು. ನಂತರದಲ್ಲಿ ಮಣಿಪುರದಲ್ಲಿ ಹಿಂಸಾಚಾರ ಮತ್ತಷ್ಟು ಭುಗಿಲೆದ್ದಿತು. ಮಣಿಪುರ ಸರ್ಕಾರ ಇಂಟರ್‌ನೆಟ್‌ ಸ್ಥಗಿತ ಸೇರಿದಂತೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿತ್ತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X