ಉತ್ತರ ಪ್ರದೇಶ: ಮನೆ ಮುಂದೆ ನೀರು ಚೆಲ್ಲಬೇಡಿ ಎಂದದ್ದಕ್ಕೆ ದಲಿತ ವ್ಯಕ್ತಿಯ ಗುಂಡಿಕ್ಕಿ ಕೊಲೆ

Date:

Advertisements

ಆಘಾತಕಾರಿ ಘಟನೆಯೊಂದರಲ್ಲಿ ಮನೆಮುಂದೆ ನೀರು ಚೆಲ್ಲಬೇಡಿ ಎಂದದ್ದಕ್ಕೆ ದಲಿತ ಸಮುದಾಯದ ವ್ಯಕ್ತಿಯೊಬ್ಬರನ್ನು ಗುಂಡಿಕ್ಕಿ ಕೊಂದ ಘಟನೆ ಉತ್ತರ ಪ್ರದೇಶ ಲಖನೌದಿಂದ ಸುಮಾರು 250 ಕಿಲೋಮೀಟರ್ ದೂರದಲ್ಲಿರುವ ಕೌಶಂಬಿ ಜಿಲ್ಲೆಯಲ್ಲಿ ನಡೆದಿದೆ.

ದಲಿತ ಸಮುದಾಯದ ರಮ್ನೇವಾಜ್ ರಾಯಿದಾಸ್ (35) ಕೊಲೆಯಾದವರು. ನೆರೆ ಮನೆಯ ರಾಹುಲ್ ಕುಮಾರ್ ಎಂಬಾತ ಗುಂಡು ಹಾರಿಸಿದ್ದಾನೆ. ಎದೆ ಭಾಗಕ್ಕೆ ಎರಡು ಗುಂಡು ಹಾರಿಸಿದ್ದು, ರಾಯಿದಾಸ್ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ಆರೋಪಿ ತಲೆಮರೆಸಿಕೊಂಡಿದ್ದು, ಆತನ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದೆ. ಗುಂಡೇಟಿನಿಂದ ರಾಯಿದಾಸ್ ಕುಟುಂಬದ ಇಬ್ಬರು ಮಹಿಳೆಯರು ಸಹ ಗಾಯಗೊಂಡಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಮರ್ ಬಹಾದ್ದೂರ್ ಸಿಂಗ್ ತಿಳಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಬಿಲ್ಕಿಸ್ ಬಾನೊ ಪ್ರಕರಣ | ಗುಜರಾತ್, ಕೇಂದ್ರಕ್ಕೆ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ಪೊಲೀಸ್ ವರದಿಗಳ ಪ್ರಕಾರ ಬುಧವಾರ ರಾತ್ರಿ ಈ ಘಟನೆ ನಡೆದಿದೆ. ಸಮೀಪದ ಮಾರುಕಟ್ಟೆಯಲ್ಲಿ ರಮ್ನೇವಾಜ್ ರಾಯಿದಾಸ್ ಕೂಲಿ ಕೆಲಸ ಮಾಡುತ್ತಿದ್ದರು. ನಿತ್ಯ ರಮ್ನೇವಾಜ್ ಅವರ ಮನೆಯ ಮುಂದೆ ನೆರೆ ಮನೆಯ ರಾಹುಲ್ ಕುಮಾರ್ ನೀರು ಚೆಲ್ಲುತ್ತಿದ್ದ ಕಾರಣ ರಾಯಿದಾಸ್ ಮನೆ ಮುಂದೆ ನೀರು ಹರಿದು ಕೊಳಚೆಯಾಗುತ್ತಿತ್ತು. ಬುಧವಾರವು ಇದೇ ರೀತಿ ಆದ ಕಾರಣ ರಾಯಿದಾಸ್ ರಾಹುಲ್ ಮನೆಯವರನ್ನು ಪ್ರಶ್ನಿಸಿದ್ದಾರೆ.

ಮಾತಿಗೆ ಮಾತು ಬೆಳೆದು ವಿಕೋಪಕ್ಕೆ ಹೋಗಿ ರಾಹುಲ್ ರಮ್ನೇವಾಜ್ ರಾಯಿದಾಸ್ ಅವರ ಮೇಲೆ ಬಂದೂಕಿನಿಂದ ಗುಂಡು ಹಾರಿಸಿ ಕೊಲೆ ಮಾಡಿದ್ದಾನೆ.

ಅಪರಾಧ ಎಸಗಿದ ಬಳಿಕ ರಾಹುಲ್ ಪರಾರಿಯಾಗಿದ್ದು, ಆತನ ಪತ್ತೆಗೆ ಶೋಧ ನಡೆಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಯ ನಂತರ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದರಿಂದ ಹಿರಿಯ ಅಧಿಕಾರಿಗಳು ಗ್ರಾಮಕ್ಕೆ ಆಗಮಿಸಿದ್ದು, ಸ್ಥಳದಲ್ಲಿ ಭದ್ರತೆಯನ್ನು ನಿಯೋಜಿಸಲಾಗಿದೆ.

”ನಾವು ಪರಿಸ್ಥಿತಿಯನ್ನು ಗಮನಿಸುತ್ತಿದ್ದೇವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡವರ ರಕ್ಷಣೆಗಾಗಿ ಇಬ್ಬರು ಪೊಲೀಸ್ ಪೇದೆಗಳನ್ನು ಆಸ್ಪತ್ರೆಯಲ್ಲಿ ನಿಯೋಜಿಸಲಾಗಿದೆ” ಎಂದು ಅಧಿಕಾರಿಗಳು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಮುಸ್ಲಿಂ ದ್ವೇಷ ಹರಡಿ ದಲಿತರು ತಳವರ್ಗದವರು ಆದಿವಾಸಿಗಳು ಮೇಲಿನ ದೌರ್ಜನ್ಯ ಮುಚ್ಚಿಡಲು ಪ್ರಯತ್ನ

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X