ಪ್ರಯಾಣಿಕರಿಗೆ ಮದ್ಯ ಕೊಂಡೊಯ್ಯಲು ಅವಕಾಶ ನೀಡಿದ ದೆಹಲಿ ಮೆಟ್ರೋ

Date:

Advertisements

ದೆಹಲಿ ಮೆಟ್ರೋ ರೈಲು ಕಾರ್ಪೊರೇಷನ್ (ಡಿಎಂಆರ್‌ಸಿ) ಶುಕ್ರವಾರ(ಜೂನ್ 30) ಹೊಸ ನಿಯಮಾವಳಿಗಳನ್ನು ಜಾರಿಗೊಳಿಸಿದ್ದು, ಇದರನ್ವಯ ದೆಹಲಿ ಮೆಟ್ರೋ ಒಳಗೆ ಒಬ್ಬ ವ್ಯಕ್ತಿ ಎರಡು ಸೀಲ್ ಮಾಡಿದ ಮದ್ಯದ ಬಾಟಲಿಗಳನ್ನು ಕೊಂಡೊಯ್ಯಲು ಅನುಮತಿ ನೀಡಲಾಗಿದೆ. ಆದರೆ ಮೆಟ್ರೋ ಆವರಣದಲ್ಲಿ ಮದ್ಯಪಾನ ಸೇವಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.

ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್) ಮತ್ತು ಡಿಎಂಆರ್‌ಸಿಯ ಅಧಿಕಾರಿಗಳನ್ನು ಒಳಗೊಂಡ ಸಮಿತಿಯು ಏರ್‌ಪೋರ್ಟ್ ಎಕ್ಸ್‌ಪ್ರೆಸ್ ಲೈನ್ ಹೊರತುಪಡಿಸಿ ಮೆಟ್ರೋದಲ್ಲಿ ಮದ್ಯ ಸಾಗಿಸುವುದನ್ನು ನಿಷೇಧಿಸಲಾಗಿತ್ತು. ಈಗ ಹಳೆಯ ಆದೇಶವನ್ನು ಪರಿಶೀಲಿಸಿದ ನಂತರ ಈ ನಿರ್ಧಾರವನ್ನು ಜಾರಿಗೊಳಿಸಲಾಗಿದೆ. ನವೀಕರಿಸಿದ ನಿಯಮಾವಳಿಗಳ ಪ್ರಕಾರ ದೆಹಲಿ ಮೆಟ್ರೋದ ಯಾವುದೇ ಭಾಗದಲ್ಲಿ ಬೇಕಾದರೂ ಓರ್ವ ವ್ಯಕ್ತಿಗೆ ಎರಡು ಸೀಲ್‌ ಮಾಡಿದ ಬಾಟಲಿ ಮದ್ಯ ಸಾಗಿಸುವ ಅವಕಾಶ ನೀಡಲಾಗಿದೆ.

ಈ ಸುದ್ದಿ ಓದಿದ್ದೀರಾ? ಮಣಿಪುರ ಮುಖ್ಯಮಂತ್ರಿ ಬಿರೇನ್ ಸಿಂಗ್ ರಾಜ್ಯಪಾಲರ ಭೇಟಿ: ರಾಜೀನಾಮೆ ಸಾಧ್ಯತೆ

Advertisements

ಡಿಎಂಆರ್‌ಸಿ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ, “ಪ್ರತಿ ವ್ಯಕ್ತಿಗೆ ಎರಡು ಸೀಲ್ ಮಾಡಿದ ಮದ್ಯದ ಬಾಟಲಿಗಳನ್ನು ದೆಹಲಿ ಮೆಟ್ರೋದಲ್ಲಿ ಏರ್‌ಪೋರ್ಟ್ ಎಕ್ಸ್‌ಪ್ರೆಸ್ ಲೈನ್‌ನಲ್ಲಿನ ನಿಬಂಧನೆಗಳಿಗೆ ಸಮನಾಗಿ ಸಾಗಿಸಲು ಅನುಮತಿಸಲಾಗಿದೆ. ಸಿಐಎಸ್‌ಎಫ್ ಮತ್ತು ಡಿಎಂಆರ್‌ಸಿಯ ಅಧಿಕಾರಿಗಳನ್ನು ಒಳಗೊಂಡ ಸಮಿತಿಯು ಹಿಂದಿನ ಆದೇಶವನ್ನು ಪರಿಶೀಲಿಸಿದೆ. ಹಳೆಯ ನಿಯಮದ ಪ್ರಕಾರ, ಏರ್‌ಪೋರ್ಟ್ ಎಕ್ಸ್‌ಪ್ರೆಸ್ ಲೈನ್ ಹೊರತುಪಡಿಸಿ ದೆಹಲಿ ಮೆಟ್ರೋದಲ್ಲಿ ಮದ್ಯ ಸಾಗಿಸುವುದನ್ನು ನಿಷೇಧಿಸಲಾಗಿತ್ತು. ಆದಾಗ್ಯೂ, ಮೆಟ್ರೋ ಆವರಣದಲ್ಲಿ ಮದ್ಯಪಾನ ಮಾಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂದು ತಿಳಿಸಲಾಗಿದೆ.

ಪ್ರಯಾಣಿಕರು ಮೆಟ್ರೋದಲ್ಲಿ ಪ್ರಯಾಣಿಸುವಾಗ ಸರಿಯಾದ ವರ್ತನೆಯನ್ನು ಕಾಪಾಡಿಕೊಳ್ಳಲು ವಿನಂತಿಸಲಾಗಿದೆ. ಪ್ರಯಾಣಿಕರು ಅಸಭ್ಯವಾಗಿ ವರ್ತಿಸುವುದು ಕಂಡುಬಂದಲ್ಲಿ, ಕಾನೂನಿನ ಅನ್ವಯ ಸೂಕ್ತ ಕ್ರಮವನ್ನು ತೆಗೆದುಕೊಳ್ಳಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X