ರಾಷ್ಟ್ರೀಯ ಪಕ್ಷ ಸ್ಥಾನಮಾನ ಕಳೆದುಕೊಂಡ ಎನ್‌ಸಿಪಿ, ಟಿಎಂಸಿ,ಸಿಪಿಐ

Date:

ಭಾರತೀಯ ಚುನಾವಣಾ ಆಯೋಗವು ಟಿಎಂಸಿ, ಎನ್‌ಸಿಪಿ ಹಾಗೂ ಭಾರತೀಯ ಕಮ್ಯುನಿಸ್ಟ್ ಪಕ್ಷಗಳಿಗೆ ನೀಡಿರುವ ರಾಷ್ಟ್ರೀಯ ಪಕ್ಷಗಳ ಸ್ಥಾನಮಾನವನ್ನು ವಾಪಸ್‌ ಪಡೆದಿದೆ. ಅಂತೆಯೇ ಅರವಿಂದ್‌ ಕೇಜ್ರೀವಾಲ್‌ ನೇತೃತ್ವದ ಅಮ್‌ ಆದ್ಮಿ ಪಕ್ಷಕ್ಕೆ ರಾಷ್ಟ್ರೀಯ ಸ್ಥಾನಮಾನವನ್ನು ನೀಡಿದೆ.

“ಎರಡು ಲೋಕಸಭಾ ಚುನಾವಣೆಗಳು ಹಾಗೂ 21 ವಿಧಾನಸಭಾ ಚುನಾವಣೆಗಳಲ್ಲಿ ಮೂರು ಪಕ್ಷಗಳಿಗೂ ಸಾಕಷ್ಟು ಅವಕಾಶವನ್ನು ಒದಗಿಸಿದ ನಂತರ ಸರಿಯಾದ ಪ್ರಕ್ರಿಯೆಯನ್ನು ಅನುಸರಿಸಿ ರಾಷ್ಟ್ರೀಯ ಪಕ್ಷಗಳ ಮಾನ್ಯತೆ ಹಿಂತೆಗೆದುಕೊಳ್ಳಲಾಗಿದೆ” ಎಂದು ಚುನಾವಣಾ ಸಮಿತಿ ತನ್ನ ಹೇಳಿಕೆಯಲ್ಲಿ ಪ್ರಕಟಿಸಿದೆ.

ಅದೇ ರೀತಿ ಆರು ಪ್ರಮುಖ ಪಕ್ಷಗಳಾದ ಉತ್ತರ ಪ್ರದೇಶದ ಆರ್‌ಎಲ್‌ಡಿ, ಆಂಧ್ರಪ್ರದೇಶದ ಬಿಆರ್‌ಎಸ್, ಮಣಿಪುರದಲ್ಲಿ ಪಿಡಿಎ, ಪುದುಚೇರಿಯ ಪಿಎಂಕೆ, ಪಶ್ಚಿಮ ಬಂಗಾಳದ ಆರ್‌ಎಸ್‌ಪಿ ಮತ್ತು ಮಿಜೋರಾಂನ ಎಂಪಿಸಿಗೆ ನೀಡಲಾಗಿದ್ದ ರಾಜ್ಯ ಪಕ್ಷದ ಸ್ಥಾನಮಾನವನ್ನು ರದ್ದುಗೊಳಿಸಲಾಗಿದೆ. ಅವು ನೋಂದಾಯಿತ ಗುರುತಿಸಲ್ಪಡದ ರಾಜಕೀಯ ಪಕ್ಷಗಳಾಗಿ ಉಳಿಯುತ್ತವೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ನಾಗಲ್ಯಾಂಡಿನ ರಾಮ್‌ ವಿಲಾಸ್‌ ನೇತೃತ್ವದ ಲೋಕಜನಶಕ್ತಿ, ಮೇಘಾಲಯದ ವಾಯ್ಸ್ ಆಫ್‌ ದಿ ಪೀಪಲ್‌ ಪಾರ್ಟಿ ಹಾಗೂ ತ್ರಿಪುರಾದ ತಿಪ್ರಾ ಮೋತಾ ಪಕ್ಷಕ್ಕೆ ಗುರುತಿಸಲ್ಪಡುವ ರಾಜಕೀಯ ಪಕ್ಷಗಳ ಮಾನ್ಯತೆ ನೀಡಲಾಗಿದೆ.

ಆಮ್ ಆದ್ಮಿ ಪಕ್ಷವು, ಚುನಾವಣಾ ಆಯೋಗದ ನಿಯಮ 6 ಬಿ (iii) ಯ ಷರತ್ತನ್ನು ಪೂರೈಸಿದೆ. ಅಂದರೆ ದೆಹಲಿ, ಗೋವಾ, ಪಂಜಾಬ್ ಮತ್ತು ಗುಜರಾತ್‌ ರಾಜ್ಯಗಳಲ್ಲಿ ಚುನಾವಣಾ ಕಾರ್ಯಕ್ಷಮತೆಯ ಆಧಾರದಲ್ಲಿ ರಾಜ್ಯ ಪಕ್ಷವಾಗಿ ಗುರುತಿಸಲ್ಪಟ್ಟಿದೆ.

ರಾಷ್ಟ್ರೀಯ ಮಾನ್ಯತೆ ಕಳೆದುಕೊಂಡಿರುವ ಪಕ್ಷಗಳು ಕೂಡ ಮುಂದಿನ ಚುನಾವಣಾ ಪ್ರಕ್ರಿಯೆಯಲ್ಲಿ ಕಾರ್ಯಕ್ಷಮತೆಯ ಆಧಾರದ ಮೇಲೆ ಸ್ಥಾನಮಾನವನ್ನು ಮರಳಿ ಪಡೆಯಬಹುದು ಎಂದು ಚುನಾವಣಾ ಆಯೋಗ ಹೇಳಿದೆ.

ಪ್ರಸ್ತುತ ಬಿಜೆಪಿ, ಕಾಂಗ್ರೆಸ್, ಸಿಪಿಐ(ಎಂ), ಬಹುಜನ ಸಮಾಜ ಪಕ್ಷ (ಬಿಎಸ್‌ಪಿ), ನ್ಯಾಷನಲ್ ಪೀಪಲ್ಸ್ ಪಾರ್ಟಿ (ಎನ್‌ಪಿಪಿ) ಮತ್ತು ಎಎಪಿ ರಾಷ್ಟ್ರೀಯ ಪಕ್ಷಗಳಾಗಿವೆ.

ರಾಷ್ಟ್ರೀಯ ಪಕ್ಷದ ರಚನೆ ಹೇಗೆ?
ಭಾರತದ ಚುನಾವಣಾ ಆಯೋಗ ಕೆಲ ಮಾನದಂಡಗಳ ಮೇಲೆ ಚುನಾಯಿತ ಪಕ್ಷಗಳಿಗೆ ರಾಷ್ಟ್ರೀಯ ಪಕ್ಷದ ಮಾನ್ಯತೆ ನೀಡುತ್ತದೆ.ಆಯೋಗ ನೀಡುವ ಷರತ್ತಿನಲ್ಲಿ ಒಂದನ್ನು ಪೂರೈಸಿದರೂ ಪಕ್ಷಗಳಿಗೆ ರಾಷ್ಟ್ರೀಯ ಪಕ್ಷದ ಸ್ಥಾನಮಾನ ನೀಡಲಾಗುತ್ತದೆ.

ಆಯೋಗದ ಷರತ್ತಿನ ಪ್ರಕಾರ 3 ರಾಜ್ಯಗಳ ಲೋಕಸಭೆ ಚುನಾವಣೆಯಲ್ಲಿ ಪಕ್ಷವು ಶೇ.2 ಸ್ಥಾನ ಗೆಲ್ಲಬೇಕು. ನಾಲ್ಕು ಲೋಕಸಭಾ ಸ್ಥಾನಗಳ ಜೊತೆಗೆ, ಪಕ್ಷವು ಲೋಕಸಭೆಯಲ್ಲಿ ಶೇ.6 ಮತಗಳನ್ನು ಅಥವಾ ಯಾವುದೇ ನಾಲ್ಕು ವಿಧಾನಸಭೆ ಚುನಾವಣೆಯಲ್ಲಿ ಶೇ.6ರಷ್ಟು ಮತಗಳನ್ನು ಗಳಿಸಬೇಕು. 4 ಅಥವಾ ಅದಕ್ಕಿಂತ ಹೆಚ್ಚು ರಾಜ್ಯಗಳಲ್ಲಿ ಪಕ್ಷವು ಪ್ರಾದೇಶಿಕ ಪಕ್ಷವಾಗಿ ಗುರುತಿಸಲ್ಪಡುವುದು.

ರಾಷ್ಟ್ರೀಯ ಪಕ್ಷವಾದರೆ ಏನು ಪ್ರಯೋಜನ?
ಭಾರತದಾದ್ಯಂತ ಬೇರಾವುದೇ ರಾಜಕೀಯ ಪಕ್ಷವು ರಾಷ್ಟ್ರೀಯ ಪಕ್ಷವಾದ ಬಳಿಕ ಅದರ ಚಿಹ್ನೆಯನ್ನು ಬಳಸಿಕೊಂಡು ದುರ್ಬಳಕೆ ಮಾಡಿಕೊಳ್ಳುವಂತಿಲ್ಲ. ರಾಷ್ಟ್ರೀಯ ಪಕ್ಷಗಳು ತಮ್ಮ ಪಕ್ಷದ ಕಚೇರಿ ಸ್ಥಾಪಿಸಲು ಸರಕಾರದಿಂದ ಭೂಮಿ ಅಥವಾ ಕಟ್ಟಡವನ್ನು ಪಡೆಯಬಹುದು.ರಾಷ್ಟ್ರೀಯ ಪಕ್ಷಗಳು ಗರಿಷ್ಠ 40 ಮಂದಿ ಸ್ಟಾರ್ ಪ್ರಚಾರಕರನ್ನು ಹೊಂದಬಹುದು. ಆದರೆ, ರಾಜ್ಯ ಅಥವಾ ಪ್ರಾದೇಶಿಕ ಪಕ್ಷಗಳಿಗೆ ಈ ಅವಕಾಶ ಕೇವಲ 20ಕ್ಕೆ ಸೀಮಿತ. ಅಲ್ಲದೆ ರಾಷ್ಟ್ರೀಯ ಮಾಧ್ಯಮಗಳಲ್ಲಿ ನಿರ್ದಿಷ್ಟ ಪ್ರಸಾರ ಪಡೆದು, ಪಕ್ಷದ ಸಂದೇಶಗಳನ್ನು ರವಾನಿಸಬಹುದು.

ಪ್ರತಿ 10 ವರ್ಷಕ್ಕೊಮ್ಮೆ ಪರಿಶೀಲನೆ
ಪ್ರತಿ 10 ವರ್ಷಕ್ಕೊಮ್ಮೆ ಚುನಾವಣಾ ಆಯೋಗ ರಾಷ್ಟ್ರೀಯ ಪಕ್ಷದ ಮಾನ್ಯತೆಯನ್ನು ವಿಮರ್ಶೆಗೊಳಪಡಿಸುತ್ತದೆ. ಈ ಹಿಂದೆ ಪ್ರತಿ 5 ವರ್ಷಕ್ಕೊಮ್ಮೆ ರಾಷ್ಟ್ರೀಯ ಪಕ್ಷದ ಮಾನ್ಯತಾ ವಿಮರ್ಶೆಯನ್ನು ಆಯೋಗ ಮಾಡುತ್ತಿತ್ತು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತದ ಮುಸ್ಲಿಮರು ಎಷ್ಟು ಸಂಪತ್ತು ಹೊಂದಿದ್ದಾರೆ? ಇಲ್ಲಿದೆ ಅಧ್ಯಯನದ ವರದಿ

ಪ್ರಧಾನಿ ನರೇಂದ್ರ ಮೋದಿ ಏ.21 ರಂದು ರಾಜಸ್ಥಾನದಲ್ಲಿ ಭಾಷಣ ಮಾಡುತ್ತಾ ಕಾಂಗ್ರೆಸ್...

ಹಾಸನ ಪೆನ್‌ಡ್ರೈವ್‌ ಪ್ರಕರಣ: ನಾಲ್ವರು ಸಂತ್ರಸ್ತೆಯರು ಆತ್ಮಹತ್ಯೆಗೆ ಯತ್ನ

ಹಾಸನದ ಪೆನ್‌ಡ್ರೈವ್‌ ಪ್ರಕರಣ ದಿನದಿಂದ ದಿನಕ್ಕೆ ಜಿಲ್ಲಾದ್ಯಂತ ಆತಂಕ ಹೆಚ್ಚಿಸ್ತಾ ಇದೆ....

ಬೀದರ್‌ | ಕಾಂಗ್ರೆಸ್‌ ಪ್ರಧಾನಿ ಅಭ್ಯರ್ಥಿ ಯಾರೆಂದು ಕೇಳಿದರೆ ಹೇಳುವುದಿಲ್ಲ : ಬಿ.ಎಸ್.ಯಡಿಯೂರಪ್ಪ

ರಾಜ್ಯದ ಉದ್ದಗಲಕ್ಕೂ ಸುತ್ತಿ ಬಂದಿದ್ದೇನೆ. ಭವಿಷ್ಯ ಹೇಳುತ್ತಿಲ್ಲ. ವಾಸ್ತವ ಹೇಳುತ್ತಿದ್ದೇನೆ. ಜೆಡಿಎಸ್‌-ಬಿಜೆಪಿ...

2025ರ ವೇಳೆಗೆ ಬಿಜೆಪಿ ಮೀಸಲಾತಿ ರದ್ದುಪಡಿಸಲಿದೆ: ತೆಲಂಗಾಣ ಸಿಎಂ ಆರೋಪ

ಮುಸ್ಲಿಮರಿಗೆ ಮೀಸಲಾತಿ ನೀಡುವ ವಿಷಯದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ವಾಕ್ಸಮರ...