ಗೆಹ್ಲೋಟ್‌ ರಾವಣ ಹೋಲಿಕೆ; ಕೇಂದ್ರ ಸಚಿವ ಗಜೇಂದ್ರ ಸಿಂಗ್‌ ವಿರುದ್ಧ ಪ್ರಕರಣ

Date:

Advertisements
  • ಸಚಿವ ಗಜೇಂದ್ರ ಸಿಂಗ್‌ ವಿರುದ್ದ ಚಿತ್ತೋರ್‌ಗಢದಲ್ಲಿ ಪ್ರಕರಣ ದಾಖಲು
  • ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್‌ ರಾವಣನೆಂದು ಟೀಕಿಸಿದ ಸಚಿವ

ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌ ಅವರನ್ನು ರಾವಣನಿಗೆ ಹೋಲಿಸಿದ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್‌ ವಿರುದ್ಧ ಪೊಲೀಸರು ಭಾನುವಾರ (ಏಪ್ರಿಲ್‌ 30) ಪ್ರಕರಣ ದಾಖಲಿಸಿದ್ದಾರೆ.

ಕಾಂಗ್ರೆಸ್‌ ಮುಖಂಡ ಮತ್ತು ಶಾಸಕ ಸುರೇಂದ್ರ ಸಿಂಗ್‌ ಅವರು ನೀಡಿದ ದೂರಿನ ಆಧಾರದಲ್ಲಿ ರಾಜಸ್ಥಾನದ ಪೊಲೀಸರು ಗಜೇಂದ್ರ ಅವರ ವಿರುದ್ಧ ಚಿತ್ತೋಗಢ ಜಿಲ್ಲೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

“ಗಜೇಂದ್ರ ಶೇಖಾವತ್‌ ಅವರು ರಾಜಸ್ಥಾನ ರಾಜಕೀಯ ಹದಗೆಟ್ಟಿದೆ. ಇಲ್ಲಿಯದು ರಾವಣನ ರಾಜಕೀಯ” ಎಂದು ಹೇಳಿದ್ದರು.

Advertisements

ಸುರೇಂದ್ರ ಸಿಂಗ್‌ ಅವರು ರಾಜಸ್ಥಾನ ಪರಂಪರೆ ಸಂರಕ್ಷಣೆ ಮತ್ತು ಉತ್ತೇಜನ ಪ್ರಾಧಿಕಾರದ ಅಧ್ಯಕ್ಷರು. “ಗೇಜೇಂದ್ರ ಅವರ ಹೇಳಿಕೆಯಿಂದ ನನ್ನ ಮನಸ್ಸಿಗೆ ಘಾಸಿಯಾಗಿದೆ” ಎಂದು ದೂರಿನಲ್ಲಿ ಹೇಳಿದ್ದಾರೆ.

ಚಿತ್ತೋರ್‌ಗಢದಲ್ಲಿ ಏಪ್ರಿಲ್‌ 27ರಂದು ಬಿಜೆಪಿಯ ‘ಜನ ಆಕ್ರೋಶ’ ಸಮಾರಂಭದಲ್ಲಿ ಮಾತನಾಡಿದ್ದ ಗಜೇಂದ್ರ ಅವರು, “ರಾಜಸ್ಥಾನದಲ್ಲಿ ಅಶೋಕ್‌ ಗೆಹ್ಲೋಟ್‌ ಅವರು ರಾವಣನ ರಾಜಕೀಯ ಮಾಡುತ್ತಿದ್ದಾರೆ. ನೀವು ರಾಮರಾಜ್ಯವಾಗಿ ಮಾಡಬೇಕು” ಎಂದು ಹೇಳಿದ್ದರು.

ಗಜೇಂದ್ರ ಅವರ ಹೇಳಿಕೆ ಖಂಡಿಸಿ ಅವರ ವಿರುದ್ಧ ಕಾಂಗ್ರೆಸ್‌ ನಾಯಕ ಸುರೇಂದ್ರ ಸಿಂಗ್‌ ದೂರು ನೀಡಿದ್ದರು. “ಮುಖ್ಯಮಂತ್ರಿ ವಿರುದ್ಧ ಇಂತಹ ಅವಹೇಳನಕಾರಿ ಭಾಷೆ ಬಳಸಿದ ಗಜೇಂದ್ರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದೇನೆ. ಅವರು ಸಮಾವೇಶದಲ್ಲಿ ಮಾತನಾಡುವಾಗ ಧಾರ್ಮಿಕ ಭಾವನೆ ಕೆರಳಿಸುವ ಪ್ರಯತ್ನ ಮಾಡಿದ್ದಾರೆ” ಎಂದು ಸುರೇಂದ್ರ ಸಿಂಗ್‌ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಹುಲ್ ಗಾಂಧಿ ವಿರುದ್ಧ ಮೋದಿ ಸರ್‌ನೇಮ್ ಪ್ರಕರಣ; ವಿಚಾರಣೆ ಮೇ 2ಕ್ಕೆ ಮುಂದೂಡಿಕೆ

ಗಜೇಂದ್ರ ಅವರು ಜೋಧಪುರದಲ್ಲಿ ಬಿಜೆಪಿ ಸಂಸದರು. ಈ ಹಿಂದೆ ಅಶೋಕ್ ಗೆಹ್ಲೋಟ್ ಈ ಕ್ಷೇತ್ರವನ್ನು ಐದು ಬಾರಿ ಪ್ರತಿನಿಧಿಸಿದ್ದರು. 2019ರ ಲೋಕಸಭೆ ಚುನಾವಣೆ ವೇಳೆ ಗೆಹ್ಲೋಟ್ ಅವರ ಪುತ್ರ ವೈಭವ್ ವಿರುದ್ಧ ಜಯಿಸಿ ಎರಡನೇ ಅವಧಿಗೆ ಸಂಸದರಾಗಿದ್ದಾರೆ.

ಗಜೇಂದ್ರ ವಿರುದ್ಧ ಐಪಿಸಿ ಸೆಕ್ಷನ್ 143 (ಕಾನೂನು ಬಾಹಿರ ಸಭೆ), 500 (ಮಾನಹಾನಿ) ಸೇರಿದಂತೆ ನಾನಾ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಉತ್ತರಾಖಂಡ | ಕಪಾಳ ಮೋಕ್ಷ ಮಾಡಿದ ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ

ತರಗತಿಯಲ್ಲಿ ಕಪಾಳ ಮೋಕ್ಷ ಮಾಡಿದ ಕಾರಣಕ್ಕೆ ಕುಪಿತಗೊಂಡ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X