ಜ್ಞಾನವಾಪಿ ಮಸೀದಿ ಪ್ರಕರಣ : ಏಪ್ರಿಲ್‌ 21ಕ್ಕೆ ಕ್ರೋಡೀಕರಿಸಿದ ಮೊಕದ್ದಮೆಗಳ ಮನವಿ ಆಲಿಸಲು ಸುಪ್ರೀಂ ಒಪ್ಪಿಗೆ

Date:

ಜ್ಞಾನವಾಪಿ ಮಸೀದಿ ಪ್ರಕರಣಕ್ಕೆ ಸಂಬಂಧಿಸಿ ವಾರಾಣಾಸಿ ನ್ಯಾಯಾಲಯದಲ್ಲಿ ಸಲ್ಲಿಸಲಾದ ಎಲ್ಲಾ ಮೊಕದ್ದಮೆಗಳ ಕ್ರೋಡೀಕರಿಸಿದ ಮನವಿಯನ್ನು ಏಪ್ರಿಲ್‌ 21ರಂದು ವಿಚಾರಣೆ ಪಟ್ಟಿ ನಡೆಸುವುದಾಗಿ ಸುಪ್ರೀಂಕೋರ್ಟ್ ಸಮ್ಮತಿಸಿದೆ.

- Advertisement -

ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್, ನ್ಯಾಯಮೂರ್ತಿ ಪಿ ಎಸ್ ನರಸಿಂಹ ಮತ್ತು ನ್ಯಾಯಮೂರ್ತಿ ಜೆಬಿ ಪಾರ್ದಿವಾಲಾ ಅವರನ್ನೊಳಗೊಂಡ ನ್ಯಾಯಪೀಠವು ವಕೀಲ ವಿಷ್ಣು ಶಂಕರ್ ಜೈನ್ ಅವರು ಸಲ್ಲಿಸಿದ ಅರ್ಜಿಗಳನ್ನು ಆಲಿಸಲು ಒಪ್ಪಿಗೆ ಸೂಚಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

“ವಾರಣಾಸಿಯ ಜಿಲ್ಲಾ ನ್ಯಾಯಾಧೀಶರು ವಿವಾದಕ್ಕೆ ಸಂಬಂಧಿಸಿದ ಎಲ್ಲಾ ಸಿವಿಲ್ ಮೊಕದ್ದಮೆಗಳನ್ನು ಒಟ್ಟುಗೂಡಿಸಲು ಕೋರಿದ ಮನವಿಯ ನಿರ್ಧಾರವನ್ನು ಐದು ಬಾರಿ ಮುಂದೂಡಿದ್ದಾರೆ. ನಾವು ಈ ಮೊಕದ್ದಮೆಗಳನ್ನು ಏಪ್ರಿಲ್ 21ರಂದು ವಿಚಾರಣೆಗೆ ಪಟ್ಟಿ ಮಾಡುತ್ತೇವೆ” ಎಂದು ಪೀಠ ಹೇಳಿದೆ.

2022, ಮೇ 17ರಂದು ವಾರಣಾಸಿಯ ಸಿವಿಲ್ ನ್ಯಾಯಾಧೀಶರ ಹಿರಿಯ ವಿಭಾಗವು ಜ್ಞಾನವಾಪಿ ಮಸೀದಿಯ ಸಮೀಕ್ಷೆಯ ಸಮಯದಲ್ಲಿ ‘ಶಿವಲಿಂಗ’ ಕಂಡುಬಂದಿದೆ ಎಂದು ಹೇಳಲಾದ ಸ್ಥಳವನ್ನು ರಕ್ಷಿಸಲು ನೀಡಿದ ಆದೇಶವು ಹಕ್ಕನ್ನು ನಿರ್ಬಂಧಿಸುವುದಿಲ್ಲ ಎಂದು ಸುಪ್ರೀಂಕೋರ್ಟ್ ಕಳೆದ ವರ್ಷ ನವೆಂಬರ್ 11ರಂದು ಸ್ಪಷ್ಟಪಡಿಸಿತು. ಮುಸ್ಲಿಮರು ನಮಾಜ್ ಮಾಡಲು ಮತ್ತು ಧಾರ್ಮಿಕ ಆಚರಣೆಗಳನ್ನು ಕೈಗೊಳ್ಳಲು ಮಸೀದಿಯನ್ನು ಪ್ರವೇಶಿಸಲು ನೀಡಿದ ಮಧ್ಯಂತರ ಆದೇಶವನ್ನು ಮುಂದಿನ ಆದೇಶದವರೆಗೆ ವಿಸ್ತರಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ವಿಪಕ್ಷಗಳ ಪ್ರತಿಭಟನೆ ನಡುವೆಯೇ ಲೋಕಸಭೆಯಲ್ಲಿ ವಿತ್ತೀಯ ಮಸೂದೆ ಅಂಗೀಕಾರ

ಜ್ಞಾನವಾಪಿ ಮಸೀದಿ-ಶೃಂಗಾರ್ ಗೌರಿ ವಿವಾದಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಎಲ್ಲಾ ಮೊಕದ್ದಮೆಗಳ ಕ್ರೋಡೀಕರಣಕ್ಕಾಗಿ ವಾರಣಾಸಿ ಜಿಲ್ಲಾ ನ್ಯಾಯಾಧೀಶರ ಮುಂದೆ ಅರ್ಜಿಯನ್ನು ಸಲ್ಲಿಸಲು ಹಿಂದೂ ಅರ್ಜಿದಾರರಿಗೆ ಅವಕಾಶ ನೀಡಿತು.

ಸಮೀಕ್ಷೆ ಆಯುಕ್ತರ ನೇಮಕಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಅಂಜುಮನ್ ಇಂತೇಜಾಮಿಯಾ ಮಸೀದಿ ಸಮಿತಿಯು ಸಲ್ಲಿಸಿದ ಮೇಲ್ಮನವಿಯ ಮೇಲೆ ಮೂರು ವಾರಗಳಲ್ಲಿ ಉತ್ತರವನ್ನು ಸಲ್ಲಿಸುವಂತೆ ಸುಪ್ರೀಂಕೋರ್ಟ್ ಹಿಂದೂ ಅರ್ಜಿದಾರರಿಗೆ ಸೂಚಿಸಿದೆ.

ಅಖಿಲೇಶ್, ಓವೈಸಿ ವಿರುದ್ಧ ಎಫ್‌ಐಆರ್‌ ದಾಖಲಿಸಲು ಕೋರಿಕೆ

ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆ ಕುರಿತಾದ ಘಟನೆಯ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಮತ್ತು ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅವರ ವಿರುದ್ಧ ಎಫ್‌ಐಆರ್‌ ದಾಖಲಿಸುವಂತೆ ಕೋರಿ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಗೆ ಸಂಬಂಧಿಸಿದಂತೆ ವಾರಾಣಸಿ ನ್ಯಾಯಾಲಯ ಇತ್ತೀಚೆಗೆ ಈ ಇಬ್ಬರು ನಾಯಕರಿಗೆ ನೋಟಿಸ್‌ ನೀಡಿದೆ.

ಇಬ್ಬರೂ ನಾಯಕರು ಯಾವುದೇ ಆಕ್ಷೇಪಾರ್ಹ ಅಪರಾಧ ಎಸಗಿಲ್ಲ ಎಂದು ತಿಳಿಸಿ ಈ ಹಿಂದೆ ನಡೆದಿದ್ದ ವಿಚಾರಣೆ ವೇಳೆ ವಕೀಲ ಹರಿಶಂಕರ್ ಪಾಂಡೆ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿತ್ತು. ಆದೇಶ ಪ್ರಶ್ನಿಸಿ ಪಾಂಡೆ ಬಳಿಕ ಮರುಪರಿಶೀಲನಾ ಅರ್ಜಿ ಸಲ್ಲಿಸಿದ್ದರು.

ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡಿದ್ದಕ್ಕಾಗಿ ಓವೈಸಿ ಮತ್ತು ಯಾದವ್ ವಿರುದ್ಧ ಎಫ್‌ಐಆರ್‌ಗಳನ್ನು ದಾಖಲಿಸಲು ಕೋರಿ ಸಲ್ಲಿಸಲಾದ ಆರಂಭಿಕ ಮನವಿಯ ವಿಚಾರಣೆಗೆ ಕಳೆದ ವರ್ಷ ನವೆಂಬರ್ 15ರಂದು ಸಮ್ಮತಿ ಸೂಚಿಸಲಾಗಿತ್ತು. ಜನವರಿ 31ರಂದು ಆದೇಶ ಕಾಯ್ದಿರಿಸಿದ್ದ ನ್ಯಾಯಾಲಯ ಕಳೆದ ತಿಂಗಳು ಪಾಂಡೆ ಅವರ ಮನವಿಯನ್ನು ವಜಾಗೊಳಿಸಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ ಸರ್ಕಾರದ UPI ವಿನಾಯಿತಿ ಮೋಸ; ₹2,000 ಮೇಲ್ಪಟ್ಟ ಪಾವತಿಗಳಿಗೆ MDR ವಿಧಿಸಲು ಅನುಮತಿ

₹2,000 ಮೇಲ್ಪಟ್ಟ UPI ಪಾವತಿಗಳಿಗೆ ಮರ್ಚೆಂಟ್‌ ಡಿಸ್ಕೌಂಟ್‌ ರೇಟ್‌ (MDR) ವಿಧಿಸಲು...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್...

ಸರ್ಕಾರ ಆಧಾರ್‌ನ್ನು ನಂಬುವುದಾದರೆ, ಮತದಾರರ ಪಟ್ಟಿ ಪರಿಷ್ಕರಣೆಗೂ ಬಳಸಲಿ: ಆರ್‌ ಎಸ್‌ ಶರ್ಮಾ

ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರ ಗುರುತು ದೃಢೀಕರಣಕ್ಕೂ, ಪಿಂಚಣಿದಾರರ ಜೀವಂತಿಕೆ ಪರಿಶೀಲನೆಗೂ ಆಧಾರ್‌...

ಹೌತಿಗಳ ವಿರುದ್ಧ ಮಿಲಿಟರಿ ದಾಳಿಗೆ ಸೌದಿ ಅರೇಬಿಯಾ ಮನವಿ: ಬೆಂಬಲಿಸಿಲ್ಲ ಎಂದ ಟ್ರಂಪ್

ಕೆಂಪು ಸಮುದ್ರದ ಆಯಕಟ್ಟಿನ ಪ್ರದೇಶಗಳಲ್ಲಿ ಇರಾನ್ ಬೆಂಬಲಿತ ಹೌತಿ ಬಂಡುಕೋರರ ದಾಳಿ...