ಆಂಧ್ರ ಪ್ರದೇಶ | ಮುಂದಿನ ಮೂರು ದಿನಗಳು ಶಾಖದ ಅಲೆಗಳು ಬೀಸುವ ಸಾಧ್ಯತೆ

Date:

  • ಆಂಧ್ರ ಪ್ರದೇಶದಲ್ಲಿ ಗರಿಷ್ಠ 42.2 ಡಿಗ್ರಿ ಸೆಲ್ಸಿಯಸ್ ಶಾಖದ ಅಲೆಗಳು
  • ಅಧಿಕ ಬೇಸಗೆಯಿಂದ ರಾಜ್ಯದಲ್ಲಿ ಬಿರುಗಾಳಿ ಸಾಧ್ಯತೆಯ ಎಚ್ಚರಿಕೆ

ಆಂಧ್ರ ಪ್ರದೇಶದಾದ್ಯಂತ ಮುಂದಿನ ಮೂರು ದಿನ ಬಿರು ಬೇಸಗೆಯ ಶಾಖದ ಅಲೆಗಳು ಹರಡಲಿವೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ (ಎಪಿಎಸ್‌ಡಿಎಂಎ) ವ್ಯವಸ್ಥಾಪಕ ನಿರ್ದೇಶಕ ಬಿ ಆರ್‌ ಅಂಬೇಡ್ಕರ್‌ ಹೇಳಿದ್ದಾರೆ.

ರಾಜ್ಯದ 136 ಪ್ರದೇಶಗಳು ಭಾನುವಾರ (ಮೇ 14) ಬೇಸಗೆಯ ಶಾಖದ ಅಲೆಗಳನ್ನು ಕಾಣಲಿವೆ. ಸೋಮವಾರ (ಮೇ 15) 153 ಪ್ರದೇಶಗಳಲ್ಲಿ ಶಾಖದ ಅಲೆಗಳು ಇರಲಿವೆ ಎಂದು ಅವರು ಹೇಳಿದ್ದಾರೆ.

ನಂದ್ಯಾಲ ಜಿಲ್ಲೆಯ ಗೋಸ್ಪಾಡು ಪ್ರದೇಶದಲ್ಲಿ ಶನಿವಾರ ಗರಿಷ್ಠ ತಾಪಮಾನ 42.2 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ. ಇದೇ ವೇಳೆ ಪೂರ್ವ ಗೋದಾವರಿ ಜಿಲ್ಲೆಯ ರಾಜನಗರಂ ಮತ್ತು ಸೀತಾನಗರಂ ಪ್ರದೇಶಗಳಲ್ಲಿ ಗರಿಷ್ಠ ತಾಪಮಾನ 41.9 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಸುಡು ಬೇಸಿಗೆಯ ಸ್ಥಿತಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಬಿಸಿಲಿನ ತಾಪಕ್ಕೆ ನಲುಗಿರುವ ಆಂಧ್ರ ಪ್ರದೇಶ ಜಿಲ್ಲೆಗಳಿಗೆ ಅಗತ್ಯ ಮಾರ್ಗಸೂಚಿಗಳನ್ನು ಪಾಲಿಸುವಂತೆ ಸರ್ಕಾರ ಸೂಚಿಸಿದೆ.

ರಾಜ್ಯದ ಎಲ್ಲ ಜಿಲ್ಲೆಗಳಿಗೂ ಹೆಚ್ಚು ತಾಪಮಾನದ ಎಚ್ಚರಿಕೆ ನೀಡಲಾಗಿದೆ. ಈ ಬಗ್ಗೆ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಅಂಬೇಡ್ಕರ್‌ ಹೇಳಿದರು.

ಈ ಸುದ್ದಿ ಓದಿದ್ದೀರಾ? ರಾಹುಲ್ ಗಾಂಧಿಗೆ ಶಿಕ್ಷೆ ವಿಧಿಸಿದ ನ್ಯಾಯಾಧೀಶರು ಸೇರಿ 67 ಮಂದಿ ಬಡ್ತಿಗೆ ತಡೆ ನೀಡಿದ ಸುಪ್ರೀಂ ಕೋರ್ಟ್

ಆಂಧ್ರ ಪ್ರದೇಶ ಸರ್ಕಾರ ವಿಪತ್ತು ನಿರ್ವಹಣಾ ಪ್ರಾಧಿಕಾರದ ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರದಲ್ಲಿ ಸ್ಥಾಪಿಸಿರುವ ಉಚಿತ ಸಂಖ್ಯೆಗಳಾದ 1070, 112 ಮತ್ತು 18004250101 ಗಳಿಗೆ ಸಂಪರ್ಕಿಸಿ ಜನರು ತಮ್ಮ ಪ್ರದೇಶಗಳಲ್ಲಿ ಬೇಸಿಗೆಯ ತಾಪಮಾನ ತೀವ್ರತೆ ಮತ್ತು ಇತರ ವಿವರಗಳನ್ನು ತಿಳಿದುಕೊಳ್ಳಬಹುದು ಎಂದು ಅಂಬೇಡ್ಕರ್‌ ಮಾಹಿತಿ ನೀಡಿದರು.

ಹೆಚ್ಚಿನ ಬೇಸಿಗೆಯಿಂದ ಕೆಲವು ಪ್ರದೇಶಗಳಲ್ಲಿ ಬಿರುಗಾಳಿ ಉಂಟಾಗಬಹುದು. ಕೆಲವು ಪ್ರದೇಶಗಳಲ್ಲಿ ಗುಡುಗು, ಇನ್ನೂ ಕೆಲವಲ್ಲಿ ಗುಡುಗು ಸಹಿತ ಮಳೆ ಉಂಟಾಗುವ ಸಾಧ್ಯತೆ ಇದೆ. ಈ ವೇಳೆ ಕುರಿಗಾಹಿಗಳು, ಗೋಪಾಲಕರು ಮತ್ತು ಕಾರ್ಮಿಕರು ಮರದ ಕೆಳಗೆ ಆಶ್ರಯ ಪಡೆಯಬಾರದು ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸುವ ಹೋರಾಟ ಇಂದಿನಿಂದ ಶುರು: ಮಲ್ಲಿಕಾರ್ಜುನ ಖರ್ಗೆ

ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಇಂದಿನಿಂದ ಆರಂಭವಾಗಲಿದ್ದು, ಕಾಂಗ್ರೆಸ್ ಅಧ್ಯಕ್ಷ...

ನೌಕಾಪಡೆಯ ನೂತನ ಮುಖ್ಯಸ್ಥರಾಗಿ ಡಿ ಕೆ ತ್ರಿಪಾಠಿ ನೇಮಕ

ಭಾರತದ ಮುಂದಿನ ನೌಕಾಪಡೆಯ ಮುಖ್ಯಸ್ಥರನ್ನಾಗಿ ಡಿ ಕೆ ತ್ರಿಪಾಠಿ ಅವರನ್ನು ಕೇಂದ್ರ...

ಲೋಕಸಭಾ ಚುನಾವಣೆ | 21 ರಾಜ್ಯಗಳ 102 ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ಇಂದು

ಲೋಕಸಭಾ ಚುನಾವಣೆ ಯ ಮೊದಲ ಹಂತದ ಮತದಾನ ಇಂದು ನಡೆಯಲಿದ್ದು, ದೇಶದ...

ಜೈಲಿನಲ್ಲಿ ಅರವಿಂದ್ ಕೇಜ್ರಿವಾಲ್ ಕೊಲ್ಲಲು ಸಂಚು: ಎಎಪಿ ಗಂಭೀರ ಆರೋಪ

ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್ ಅವರನ್ನು ಕೊಲ್ಲಲು ಸಂಚು ನಡೆಯುತ್ತಿದೆ ಎಂದು...