ಹಿಂದಿ ರಾಷ್ಟ್ರ ಭಾಷೆ: ಪ್ರಕರಣವೊಂದರಲ್ಲಿ ಹಿಂದಿಯಲ್ಲಿ ಸಾಕ್ಷ್ಯ ನುಡಿಯಲು ಹೇಳಿದ ಸುಪ್ರೀಂ ನ್ಯಾಯಾಧೀಶರು

Date:

Advertisements

ಪ್ರಕರಣವೊಂದರಲ್ಲಿ ಹಿಂದಿ ರಾಷ್ಟ್ರ ಭಾಷೆ ಎಂದಿರುವ ಸುಪ್ರೀಂ ಕೋರ್ಟ್‌ ನ್ಯಾಯಾಧೀಶರೊಬ್ಬರು ಪಶ್ಚಿಮ ಬಂಗಾಳದ ಕೆಲ ಸಾಕ್ಷಿಗಳಿಗೆ ಉತ್ತರ ಪ್ರದೇಶದ ನ್ಯಾಯಾಲಯದ ಮುಂದೆ ಹಿಂದಿಯಲ್ಲಿ ಸಾಕ್ಷ್ಯ ನುಡಿಯುವಂತೆ ನಿರ್ದೇಶನ ನೀಡಿದ್ದಾರೆ.

ಉತ್ತರ ಪ್ರದೇಶದ ಫರುಕ್ಕಾಬಾದ್‌ನಲ್ಲಿ ಮೋಟಾರ್‌ ವಾಹನಗಳ ಅಪಘಾತಗಳ ಕ್ಲೇಮ್‌ ಟ್ರಿಬ್ಯುನಲ್‌ನಲ್ಲಿ ಬಾಕಿಯಿರುವ ಒಂದು ಅಪಘಾತ ಪ್ರಕರಣವನ್ನು ಪಶ್ಚಿಮ ಬಂಗಾಳದ ಡಾರ್ಜಲಿಂಗ್‌ಗೆ ವರ್ಗಾಯಿಸಬೇಕೆಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ವೇಳೆ ನ್ಯಾಯಾಧೀಶರಾದ ದೀಪಾಂಕರ್‌ ದತ್ತಾ ತಮ್ಮ ಆದೇಶದಲ್ಲಿ ಹಿಂದಿ ರಾಷ್ಟ್ರ ಭಾಷೆ ಎಂದು ಪ್ರಸ್ತಾಪಿಸಿದರು.

“ಭಾರತದಂತಹ ವೈವಿಧ್ಯಮಯ ದೇಶದಲ್ಲಿ, ಜನರು ವಿಭಿನ್ನ ಭಾಷೆಗಳನ್ನು ಮಾತನಾಡುತ್ತಾರೆ ಎಂಬುದರಲ್ಲಿ ಸಂದೇಹವಿಲ್ಲ. ಇಲ್ಲಿ ಕನಿಷ್ಠ 22 ಅಧಿಕೃತ ಭಾಷೆಗಳಿವೆ. ಆದರೆ ಹಿಂದಿ ರಾಷ್ಟ್ರ ಭಾಷೆ ಆಗಿರುವುದರಿಂದ ಅರ್ಜಿದಾರರು ಹಾಜರುಪಡಿಸುವ ಸಾಕ್ಷಿಗಳು ತಮ್ಮ ಸಾಕ್ಷ್ಯವನ್ನು ಹಿಂದಿಯಲ್ಲಿ ನೀಡಬೇಕು.” ಎಂದು ನ್ಯಾಯಾಧೀಶರು ತಿಳಿಸಿದ್ದಾರೆ.

Advertisements

ಉತ್ತರ ಪ್ರದೇಶದ ಫರುಕ್ಕಾಬಾದ್‌ನಲ್ಲಿ ಮೋಟಾರ್‌ ವಾಹನಗಳ ಅಪಘಾತಗಳ ಕ್ಲೇಮ್‌ ಟ್ರಿಬ್ಯುನಲ್‌ನಲ್ಲಿ ಬಾಕಿಯಿರುವ ಒಂದು ಅಪಘಾತ ಪ್ರಕರಣವನ್ನು ಪಶ್ಚಿಮ ಬಂಗಾಳದ ಡಾರ್ಜಲಿಂಗ್‌ಗೆ ವರ್ಗಾಯಿಸಬೇಕೆಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ವೇಳೆ ಮೇಲಿನ ಆದೇಶ ಹೊರಡಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ತಮಿಳುನಾಡಿಗೆ ಕಾವೇರಿ ನೀರು ಬಿಡಿ: ಪ್ರಧಾನಿಗೆ ಎಂ ಕೆ ಸ್ಟಾಲಿನ್‌ ಪತ್ರ

ಅಪಘಾತವು ಸಿಲಿಗುರಿಯಲ್ಲಿ ನಡೆದಿರುವುದರಿಂದ ಡಾರ್ಜಲಿಂಗ್‌ನ ಟ್ರಿಬ್ಯುನಲ್‌ನಲ್ಲಿ ವಿಚಾರಣೆ ನಡೆದರೆ ಅನುಕೂಲಕರ ಎಂದು ಅರ್ಜಿದಾರರು ಹೇಳಿದ್ದಾರೆ. ಅಷ್ಟೇ ಅಲ್ಲದೆ ಅರ್ಜಿದಾರರ ಪರ ಎಲ್ಲ ಸಾಕ್ಷಿಗಳೂ ಸಿಲಿಗುರಿಯವರಾಗಿರುವುದರಿಂದ ಉತ್ತರ ಪ್ರದೇಶ ಟ್ರಿಬ್ಯುನಲ್‌ನಲ್ಲಿ ಭಾಷೆಯ ಸಮಸ್ಯೆ ಎದುರಾಗಬಹುದು ಎಂದಿದ್ದರು.

ಆದರೆ ಈ ಮನವಿಯನ್ನು ತಿರಸ್ಕರಿಸಿದ ದತ್ತಾ, ಅರ್ಜಿದಾರರ ವಾದವನ್ನು ಒಪ್ಪಿದಲ್ಲಿ, ಕ್ಲೇಮ್‌ ಮಾಡುವವರು ಅನಾನುಕೂಲ ಎದುರಿಸಬಹುದು ಹಾಗೂ ತಮ್ಮ ವಾದವನ್ನು ಬಂಗಾಳಿ ಭಾಷೆಯಲ್ಲಿ ಮಂಡಿಸಲು ಕಷ್ಟಪಡಬಹುದು ಎಂದು ಹೇಳಿದ್ದಾರೆ.

ನ್ಯಾಯಧೀಶರಾದ ದೀಪಂಕರ್ ದತ್ತಾ ಪಶ್ಚಿಮ ಬಂಗಾಳದವರಾಗಿದ್ದು, ಮಾತೃಭಾಷೆ ಬಂಗಾಳಿಯಾಗಿದೆ. ಅಲ್ಲದೆ ಸಂವಿಧಾನದ ಪ್ರಕಾರ ಭಾರತಕ್ಕೆ ಯಾವುದೇ ರಾಷ್ಟ್ರಭಾಷೆಯಿಲ್ಲ. ಸಂವಿಧಾನದ ಎಂಟನೇ ಶೆಡ್ಯೂಲ್‌ ಪ್ರಕಾರ 22 ನಿಯೋಜಿತ ಅಧಿಕೃತ ಭಾಷೆಗಳಿವೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X