ಭಾರತೀಯ ವೈದ್ಯಕೀಯ ಪದವೀಧರರು ಇನ್ನು ಮುಂದೆ ಅಮೆರಿಕದಲ್ಲಿ ಪ್ರಾಕ್ಟೀಸ್‌ ಮಾಡಬಹುದು

Date:

Advertisements

ಭಾರತದ ರಾಷ್ಟ್ರೀಯ ವೈದ್ಯಕೀಯ ಆಯೋಗಕ್ಕೆ ವಿಶ್ವ ವೈದ್ಯಕೀಯ ಶಿಕ್ಷಣ ಫೆಡರೇಶನ್ 10 ವರ್ಷಗಳ ಅವಧಿಯ ಮಾನ್ಯತೆ ಸ್ಥಾನಮಾನ ನೀಡಿದ್ದು, ಇದರಿಂದಾಗಿ ಇನ್ನು ಮುಂದೆ ಭಾರತೀಯ ವೈದ್ಯಕೀಯ ಪದವೀಧರರು ಅಮೆರಿಕ, ಕೆನಡಾ, ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ಸೇರಿದಂತೆ ಹಲವು ದೇಶಗಳಲ್ಲಿ ವೈದ್ಯಕೀಯ ಸ್ನಾತಕೋತ್ತರ ತರಬೇತಿ ಮತ್ತು ಪ್ರಾಕ್ಟೀಸ್‌ ಮಾಡಬಹುದಾಗಿದೆ.

ಭಾರತೀಯ ಆರೋಗ್ಯ ಸಚಿವಾಲಯ ಈ ಬಗ್ಗೆ ತಿಳಿಸಿದ್ದು, ಭಾರತದಲ್ಲಿ ಅಸ್ತಿತ್ವದಲ್ಲಿರುವ ಎಲ್ಲ 706 ವೈದ್ಯಕೀಯ ಕಾಲೇಜುಗಳು ವಿಶ್ವ ವೈದ್ಯಕೀಯ ಶಿಕ್ಷಣ ಫೆಡರೇಶನ್ ಮಾನ್ಯತೆ ಪಡೆಯುತ್ತವೆ ಎಂದು ಸಚಿವಾಲಯ ಹೇಳಿದೆ.

“ಈ ಮಾನ್ಯತೆಯಿಂದ ಭಾರತದಲ್ಲಿ ಅಸ್ತಿತ್ವದಲ್ಲಿರುವ 706 ವೈದ್ಯಕೀಯ ಕಾಲೇಜುಗಳು ವಿಶ್ವ ವೈದ್ಯಕೀಯ ಶಿಕ್ಷಣ ಫೆಡರೇಶನ್ ಮಾನ್ಯತೆ ಪಡೆಯುತ್ತವೆ. ಮುಂಬರುವ 10 ವರ್ಷಗಳಲ್ಲಿ ಸ್ಥಾಪಿಸಲಾಗುವ ಹೊಸ ವೈದ್ಯಕೀಯ ಕಾಲೇಜುಗಳೂ ಸ್ವಯಂಚಾಲಿತವಾಗಿ ವಿಶ್ವ ಫೆಡರೇಷನ್‌ನ ಮಾನ್ಯತೆ ಪಡೆಯುತ್ತವೆ. ಜಾಗತಿಕ ಉತ್ತಮ ಅಭ್ಯಾಸಗಳು ಮತ್ತು ಮಾನದಂಡಗಳೊಂದಿಗೆ ಅವುಗಳನ್ನು ಜೋಡಿಸುವ ಮೂಲಕ ಭಾರತದಲ್ಲಿ ವೈದ್ಯಕೀಯ ಶಿಕ್ಷಣದ ಗುಣಮಟ್ಟವನ್ನು ಈ ಮನ್ನಣೆಯು ಮತ್ತಷ್ಟು ಹೆಚ್ಚಿಸಲಿದೆ” ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

Advertisements

ಈ ಸುದ್ದಿ ಓದಿದ್ದೀರಾ? ಮತದಾರರ ಪಟ್ಟಿಗೆ ಆಧಾರ್ ಸಂಖ್ಯೆ ಕಡ್ಡಾಯವಲ್ಲ: ಸುಪ್ರೀಂ ಕೋರ್ಟಿಗೆ ಚುನಾವಣಾ ಆಯೋಗ ಮಾಹಿತಿ

ವಿಶ್ವ ವೈದ್ಯಕೀಯ ಶಿಕ್ಷಣ ಫೆಡರೇಶನ್ ವಿಶ್ವಾದ್ಯಂತ ವೈದ್ಯಕೀಯ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸಲು ಮೀಸಲಾಗಿರುವ ಜಾಗತಿಕ ಸಂಸ್ಥೆ. ವಿಶ್ವ ಫೆಡರೇಷನ್‌ನ ಮಾನ್ಯತೆ ಕಾರ್ಯಕ್ರಮವು ವೈದ್ಯಕೀಯ ಸಂಸ್ಥೆಗಳು ಶಿಕ್ಷಣ ಮತ್ತು ತರಬೇತಿಯ ಅತ್ಯುನ್ನತ ಅಂತಾರಾಷ್ಟ್ರೀಯ ಮಾನದಂಡಗಳನ್ನು ಪೂರೈಸುತ್ತವೆ ಎಂಬುದನ್ನು ಖಚಿತಪಡಿಸಿಕೊಳ್ಳಲು ಸಹಾಯ ಮಾಡುತ್ತದೆ.

ವಿಶ್ವ ವೈದ್ಯಕೀಯ ಶಿಕ್ಷಣ ಫೆಡರೇಶನ್ ಮಾನ್ಯತೆ ಭಾರತದಲ್ಲಿ ವೈದ್ಯಕೀಯ ಶಿಕ್ಷಣದ ಗುಣಮಟ್ಟವು ಜಾಗತಿಕ ಮಾನದಂಡಗಳಿಗೆ ಬದ್ಧವಾಗಿದೆ ಎಂದು ಹೇಳುತ್ತದೆ. ಈ ಪುರಸ್ಕಾರವು ನಮ್ಮ ವಿದ್ಯಾರ್ಥಿಗಳಿಗೆ ವಿಶ್ವದ ಎಲ್ಲ ಕಡೆ ತಮ್ಮ ವೃತ್ತಿಜೀವನ ನಡೆಸಲು ಅವಕಾಶ ನೀಡುತ್ತದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X