ಜಿ 20 ಶೃಂಗಸಭೆ | ಚೀನಾ ವಿರೋಧಕ್ಕೆ ಭಾರತ ತೀಕ್ಷ್ಣ ಪ್ರತಿಕ್ರಿಯೆ

Date:

  • ವಿವಾದಿತ ಸ್ಥಳದಲ್ಲಿ ಜಿ 20 ಸಭೆ ನಡೆಸಲು ಚೀನಾ ಆಕ್ಷೇಪ
  • ಶೃಂಗಸಭೆಗೆ ಹೆಸರು ನೋಂದಾಯಿಸಿಕೊಳ್ಳದ ಟರ್ಕಿ, ಸೌದಿ ಅರೇಬಿಯಾ

ಜಿ 20 ಶೃಂಗಸಭೆ ಸಮಾರಂಭವನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಆಯೋಜಿಸುತ್ತಿರುವ ಭಾರತ ನಿರ್ಧಾರಕ್ಕೆ ಚೀನಾ ಆಕ್ಷೇಪ ವ್ಯಕ್ತಪಡಿಸಿದೆ ಎಂದು ಶನಿವಾರ (ಮೇ 20) ಮಾಧ್ಯಮಗಳು ವರದಿ ಮಾಡಿವೆ.

ಚೀನಾ ಆರೋಪಕ್ಕೆ ಭಾರತ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದೆ.

ವಿವಾದಿತ ಕಾಶ್ಮೀರ ಪ್ರದೇಶದಲ್ಲಿ ಸಮಾರಂಭ ನಡೆಸುವುದನ್ನು ಚೀನಾ ವಿರೋಧಿಸಿದ್ದು ಶ್ರೀನಗರದಲ್ಲಿ ಆಯೋಜಿಸುವ ಜಿ 20 ಶೃಂಗಸಭೆ ಸಮಾರಂಭಕ್ಕೆ ಟರ್ಕಿ ಹಾಗೂ ಸೌದಿ ಅರೇಬಿಯಾ ರಾಷ್ಟ್ರಗಳು ಹೆಸರು ನೋಂದಾಯಿಸಿಕೊಂಡಿಲ್ಲ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಯಾವುದೇ ವಿವಾದಿತ ಸ್ಥಳಗಳಲ್ಲಿ ಜಿ 20 ಸಭೆಗಳನ್ನು ಆಯೋಜಿಸುವುದನ್ನು ಚೀನಾ ವಿರೋಧಿಸುತ್ತದೆ. ಅಂತಹ ಸಭೆಗಳಲ್ಲಿ ನಾವು ಭಾಗವಹಿಸುವುದಿಲ್ಲ” ಎಂದು ಚೀನಾ ವಿದೇಶಾಂಗ ಸಚಿವಾಲಯದ ವಕ್ತಾರ ವಾಂಗ್‌ ವೆಗ್ಬಿನ್‌ ಶುಕ್ರವಾರ (ಮೇ 19) ಹೇಳಿದ್ದರು.

ಜಿ 20 ಶೃಂಗಸಭೆಯ ಸಮಾರಂಭಕ್ಕೆ ಸಂಬಂಧಿಸಿ ಚೀನಾ ಹೇಳಿಕೆಗೆ ಭಾರತ ಪ್ರತಿಕ್ರಿಯಿಸಿದೆ.

“ತನ್ನ ಸ್ವಂತ ಭೂಭಾಗದಲ್ಲಿ ಸಬೆಗಳನ್ನು ನಡೆಸಲು ಭಾರತ ಮುಕ್ತವಾಗಿದೆ. ಚೀನಾದೊಂದಿಗೆ ದೇಶ ಸಾಮಾನ್ಯ ಒಪ್ಪಂದ ಮಾಡಿಕೊಳ್ಳಲು ಗಡಿಯಲ್ಲಿ ಚೀನಾ ಶಾಂತಿ ಹಾಗೂ ನೆಮ್ಮದಿ ಕಾಯ್ದುಕೊಳ್ಳುವುದು ಅಗತ್ಯವಾಗಿದೆ” ಎಂದು ಭಾರತದ ವಿದೇಶಾಂಗ ಸಚಿವಾಲಯ ಹೇಳಿದೆ.

3ನೇ ಜಿ 20 ಪ್ರವಾಸೋದ್ಯಮ ಕಾರ್ಯ ಸಮೂಹ ಸಭೆಯು ಭಾರೀ ಭದ್ರತೆಯೊಂದಿಗೆ ಮೇ 22 ರಿಂದ 24 ರವರೆಗೆ ಶ್ರೀನಗರದಲ್ಲಿ ನಡೆಯಲಿದೆ.

2019ರಲ್ಲಿ ವಿಶೇಷ ಸ್ಥಾನಮಾನ ಹಿಂತೆಗೆದುಕೊಂಡು ಎರಡು ಕೇಂದ್ರಾಡಳಿತ ಪ್ರದೇಶವಾಗಿ ವಿಭಜಿಸಿದ ನಂತರ ಶೃಂಗಸಭೆಯು ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯುತ್ತಿರುವ ಮೊದಲ ಪ್ರಮುಖ ಅಂತಾರಾಷ್ಟ್ರೀಯ ಕಾರ್ಯಕ್ರಮವಾಗಿದೆ.

ಶ್ರೀನಗರದಲ್ಲಿ ನಡೆಯುವ ಸಭೆಯಲ್ಲಿ ಜಿ 20 ದೇಶಗಳ ಸುಮಾರು 60 ಪ್ರತಿನಿಧಿಗಳು ಭಾಗವಹಿಸುವ ಸಾಧ್ಯತೆ ಇದೆ. ಇದಕ್ಕಿಂತ ಮೊದಲು ಸುಮಾರು 100 ಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಬಹುದು ಎಂದು ಅಂದಾಜಿಸಲಾಗಿತ್ತು.

ಈ ಸುದ್ದಿ ಓದಿದ್ದೀರಾ? ಖಾತೆ ಬದಲಾವಣೆ ಶಿಕ್ಷೆಯಲ್ಲ, ಪ್ರಧಾನಿ ಮೋದಿ ದೂರದೃಷ್ಟಿ: ಕಿರಣ್ ರಿಜಿಜು

ಈ ಸಭೆಯಿಂದ ದೂರ ಉಳಿಯಲು ಟರ್ಕಿ ನಿರ್ಧರಿಸಿರುವುದಾಗಿ ತಿಳಿದು ಬಂದಿದೆ. ಸೌದಿ ಅರೇಬಿಯಾ ಸಭೆಯಲ್ಲಿ ಭಾಗವಹಿಸಲು ತನ್ನ ಹೆಸರು ನೋಂದಣಿ ಮಾಡಿಕೊಂಡಿಲ್ಲ ಎಂದು ಮೂಲಗಳು ಹೇಳಿವೆ.

ಜಿ 20 ಶೃಂಗಸಭೆ ಸಮಾರಂಭ ಹಿನ್ನೆಲೆ ಕಾಶ್ಮೀರ ಹಾಗೂ ಶ್ರೀನಗರದಲ್ಲಿ ಭದ್ರತೆ ಹೆಚ್ಚಿಸಲಾಗಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ ಪೆನ್ ಡ್ರೈವ್ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿ, ಸಂತ್ರಸ್ತ ಮಹಿಳೆಯರಿಗೆ ರಕ್ಷಣೆ ಕೊಡಿ: ಕುಶಾಲಾ ಸ್ವಾಮಿ

ಹಾಸನ ಸೇರಿದಂತೆ ರಾಜ್ಯದಾದ್ಯಂತ ಓಡಾಡುತ್ತಿರುವ ಸಾವಿರಾರು ಅಶ್ಲೀಲ ವಿಡಿಯೋಗಳುಳ್ಳ ಪೆನ್ ಡ್ರೈವ್,...

ಬರ ಪರಿಹಾರ | ಸುಪ್ರೀಂ ಕೋರ್ಟ್ ಉಗಿದಿದ್ದನ್ನೇ ಮೋದಿ ಪ್ರಸಾದ ಎನ್ನುತ್ತಿರುವ ಬಿಜೆಪಿ!

ರಾಜ್ಯಕ್ಕೆ 3,454 ಕೋಟಿ ರುಪಾಯಿ ಬರ ಪರಿಹಾರ ಸುಪ್ರೀಮ್ ಕೋರ್ಟ್ ಕೊಟ್ಟದ್ದೇ...

ಅರವಿಂದ್ ಕೇಜ್ರಿವಾಲ್ ಆರೋಗ್ಯವಾಗಿದ್ದಾರೆ, ಆದರೆ ದಿನಕ್ಕೆ ಎರಡು ಡೋಸ್ ಇನ್ಸುಲಿನ್ ನೀಡಲಾಗುತ್ತಿದೆ: ವೈದ್ಯರು

ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್...

ಮೋದಿಯ ನೆತ್ತಿಗೆ ಸುಪ್ರೀಂ ಕೋರ್ಟ್‌ ಸುತ್ತಿಗೆಯಿಂದ ಬಾರಿಸಿದ್ದಕ್ಕೆ ಸಿಕ್ತು ಪರಿಹಾರ: ದೇವನೂರು

"ಪ್ರಧಾನಿ ನರೇಂದ್ರ ಮೋದಿಯವರ ನೆತ್ತಿಗೆಗೆ ಸುಪ್ರೀಂಕೋರ್ಟ್ ಸುತ್ತಿಗೆಯಿಂದ ಬಾರಿಸಿದ್ದಕ್ಕೆ ಕೇಂದ್ರವು ಕರ್ನಾಟಕಕ್ಕೆ...