ʻಅಜ್ಮೀರ್ 92’ ಚಲನಚಿತ್ರ ನಿಷೇಧಕ್ಕೆ ಜಮೀಯತ್ ಉಲಮಾ ಹಿಂದ್ ಆಗ್ರಹ

Date:

ʻದಿ ಕೇರಳ ಸ್ಟೋರಿʼ ಬಳಿಕ ಮುಸ್ಲಿಮ್‌ ಸಮುದಾಯವನ್ನು ಕೆಟ್ಟದಾಗಿ ಚಿತ್ರೀಕರಿಸಿರುವ ಮತ್ತೊಂದು ಬಾಲಿವುಡ್‌ ಚಿತ್ರ ಮುಂದಿನ ತಿಂಗಳು ಬಿಡುಗಡೆಗೆ ಸಿದ್ಧವಾಗಿದೆ.  

30 ವರ್ಷಗಳ ಹಿಂದೆ ರಾಜಸ್ಥಾನದ ಅಜ್ಮೀರ್‌ನಲ್ಲಿ ನಡೆದಿದೆ ಎನ್ನಲಾದ ಘಟನೆಯೊಂದನ್ನು ಆಧರಿಸಿ ʻಅಜ್ಮೀರ್-92ʼ ಎಂಬ ಹೆಸರಿನ ಸಿನಿಮಾವೊಂದು ತೆರೆಗೆ ಬರಲು ಸಜ್ಜಾಗಿದೆ. ಆದರೆ ಈ ಸಿನಿಮಾ ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಉದ್ದೇಶವನ್ನು ಹೊಂದಿದೆ ಎಂದು ಆತಂಕ ವ್ಯಕ್ತಪಡಿಸಿರುವ ಜಮೀಯತ್ ಉಲಮಾ ಇ ಹಿಂದ್ ಸಂಘಟನೆಯು ʻಅಜ್ಮೀರ್ 92ʼ ಚಲನಚಿತ್ರವನ್ನು ನಿಷೇಧಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ʻಅಪರಾಧ ಘಟನೆಗಳನ್ನು ಧರ್ಮದ ಜೊತೆ ತಳುಕು ಹಾಕುವ ಬದಲು, ಅಪರಾಧಗಳ ವಿರುದ್ಧ ಒಗ್ಗಟ್ಟಿನ ಕ್ರಮದ ಅಗತ್ಯವಿದೆ ಎಂದು ಸಂಘಟನೆಯ ಅಧ್ಯಕ್ಷ ಮೌಲಾನಾ ಮಹಮೂದ್ ಮದನಿ ಹೇಳಿದ್ದಾರೆ. ಇಂತಹ ಸಿನಿಮಾಗಳು ಸಮಾಜದಲ್ಲಿ ಬಿರುಕು ಮೂಡಿಸುತ್ತವೆ. ಕೇಂದ್ರ ಸರ್ಕಾರವು ಈ ಚಿತ್ರವನ್ನು ನಿಷೇಧಿಸುವ ಮೂಲಕ ಕೋಮುಭಾವನೆಗಳನ್ನು ಕೆರಳಿಸಿ ಸಮಾಜವನ್ನು ವಿಭಜಿಸುವ ಪ್ರಯತ್ನವನ್ನು ವಿಫಲಗೊಳಿಸಬೇಕುʼ ಎಂದು ಮದನಿ ಒತ್ತಾಯಿಸಿದ್ಧಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ʻಅಜ್ಮೀರ್‌ನಲ್ಲಿರುವ ಖ್ವಾಜಾ ಮುಈನುದ್ದೀನ್ ಷರೀಫ್ ಚಿಷ್ತಿ ದರ್ಗಾವು ದೇಶದ ಹಿಂದೂ- ಮುಸ್ಲಿಂ ಏಕತೆಗೆ ಉದಾಹರಣೆಯಾಗಿದೆ. ಖ್ವಾಜಾ ಮುಈನುದ್ದೀನ್ ಷರೀಫ್ ಅವರು ಭಾರತದ ದೇಶದಲ್ಲಿ ಶಾಂತಿ ಮತ್ತು ಸಾಮರಸ್ಯದ ದೇವದೂತ” ಎನಿಸಿಕೊಂಡಿದ್ದರು ಎಂದು ಮಹಮೂದ್ ಮದನಿ ಬಣ್ಣಿಸಿದ್ದಾರೆ.

ʻಅಜ್ಮೀರ್-92ʼ ಸಿನಿಮಾವನ್ನು ಪುಷ್ಪೇಂದ್ರ ಸಿಂಗ್ ನಿರ್ದೇಶಿಸಿದ್ದು, ಜರೀನಾ ವಹಾಬ್, ಸಯಾಜಿ ಶಿಂಧೆ, ಮನೋಜ್ ಜೋಶಿ ಹಾಗೂ ರಾಜೇಶ್ ಶರ್ಮಾ ನಟಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭ್ರಷ್ಟಾಚಾರದಲ್ಲಿ ಮುಳುಗಿರುವ ಬಿಜೆಪಿ; ರಾಜ್ಯಗಳ ಪರಿಸ್ಥಿತಿಗೆ ಅನುಗುಣವಾಗಿ ಮೋದಿ ಮತಬೇಟೆ

ಭ್ರಷ್ಟಾಚಾರದ ಬೇಟೆಯಾಡುತ್ತೇನೆ, ಕಪ್ಪುಹಣ ಮರಳಿ ತರುತ್ತೇನೆ ಎಂದು ಪಣ ತೊಟ್ಟಿದ್ದ ಮೋದಿ...

ಮಾದರಿ ನೀತಿ ಸಂಹಿತೆ ಉಲ್ಲಂಘನೆ: ಮೋದಿ, ರಾಹುಲ್ ಗಾಂಧಿಗೆ ಚುನಾವಣಾ ಆಯೋಗದಿಂದ ನೋಟಿಸ್

ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕಾಂಗ್ರೆಸ್...

‘ಮೋದಿ ಕಿ ಗ್ಯಾರಂಟಿ’ ಕುರುಹು ಇಲ್ಲದೆ ಕಣ್ಮರೆಯಾದಾಗ ಬಿಜೆಪಿ ಸುಳ್ಳಿನ ಬೆನ್ನತ್ತಿದೆ: ಚಿದಂಬರಂ

'ಮೋದಿ ಕಿ ಗ್ಯಾರಂಟಿ' ಈಗ ಕುರುಹು ಇಲ್ಲದೆ ಕಣ್ಮರೆಯಾಗಿದ್ದು, ಇದರಿಂದಾಗಿ ಆತಂಕಕ್ಕೆ...

ಮೋದಿ ಭಾಷಣ | ರಾಮಮಂದಿರದ ಉಲ್ಲೇಖ, ಸಿಖ್ಖರ ಓಲೈಕೆ; ನೀತಿ ಸಂಹಿತೆ ಉಲ್ಲಂಘನೆಯಲ್ಲ ಎಂದ ಚು. ಆಯೋಗ

ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣಾ ರ್‍ಯಾಲಿಯಲ್ಲಿ ರಾಮಮಂದಿರ ನಿರ್ಮಾಣದ ಬಗ್ಗೆ...