ಜಮ್ಮು-ಕಾಶ್ಮೀರ ಮಿಲಿಟರೀಕೃತ ರಾಜ್ಯವಾಗಿ ಮಾರ್ಪಟ್ಟಿದೆ: ಮೆಹಬೂಬಾ ಮುಫ್ತಿ

Date:

“ಕೇಂದ್ರ ಸರ್ಕಾರವು ಜಿ20 ಲಾಂಛನವನ್ನು ಬದಲಿಸಿದೆ. ಲಾಂಛನದಲ್ಲಿ ಕಮಲವನ್ನು ಸೇರಿಸಿದೆ. ಕಾಶ್ಮೀರವು ಸಹಜ ಸ್ಥಿತಿಗೆ ಮರಳಿದೆ ಎಂದು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಚಾರ ಪಡೆದುಕೊಳ್ಳುತ್ತಿದೆ. ಆದರೆ, ಕಣಿವೆ ರಾಜ್ಯವು ಮಿಲಿಟರೀಕೃತ ರಾಜ್ಯವಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವರು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹಾಗೂ ಸಚಿವ ಪ್ರಮಾಣವಚನ ಕಾರ್ಯಕ್ರಮಕ್ಕಾಗಿ ಮುಫ್ತಿ ಬೆಂಗಳೂರಿಗೆ ಬಂದಿದ್ದರು. ಅವರೊಂದಿಗೆ ಪ್ರೆಸ್‌ಕ್ಲಬ್‌ನಲ್ಲಿ ಮಾಧ್ಯಮ ಸಂವಾದ ಏರ್ಪಡಿಸಲಾಗಿತ್ತು. ಸಂವಾದದಲ್ಲಿ ಮಾತನಾಡಿದ ಅವರು ಜಮ್ಮು ಮತ್ತು ಕಾಶ್ಮೀರದ ವಿಚಾರದಲ್ಲಿ ಮೋದಿ ಸರ್ಕಾರ ಎಸಗುತ್ತಿರುವ ಧೋರಣೆಗಳ ವಿರುದ್ಧ ಕಿಡಿಕಾರಿದರು.

ಕಾಶ್ಮೀರದ ಶ್ರೀನಗರದಲ್ಲಿ ಇಂದಿನಿಂದ (ಮೇ 22) ಮೂರು ದಿನಗಳ ಕಾಲ ಜಿ20 ಶೃಂಗಸಭೆ ನಡೆಯಲಿದೆ. ಆ ಬಗ್ಗೆ ಮಾತನಾಡಿದ ಮುಫ್ತಿ, “ಜಿ20 ಲೋಗೋವನ್ನು ದೇಶಕ್ಕೆ ಸಂಬಂಧಿಸಿದ ಯಾವುದನ್ನಾದರೂ ಚಿಹ್ನೆಯನ್ನು ಅಳವಡಿಸಬೇಕೆ ಹೊರತು, ಪಕ್ಷದ ಚಿಹ್ನೆಯನ್ನಲ್ಲ” ಎಂದರು.

“ಕಾಶ್ಮೀರಕ್ಕೆ ಸಂಬಂಧಿಸಿದಂತೆ ಮೋದಿಯವರ ನಿರ್ಧಾರಗಳು ಚೀನಾದ ಹಸ್ತಕ್ಷೇಪಕ್ಕೆ ಕಾರಣವಾದವು. ಕಣಿವೆಯ ಸಮಸ್ಯೆಗಳಿಗೆ ಸಾರ್ಕ್ ಕೆಲವು ಪರಿಹಾರಗಳನ್ನು ಕಂಡುಕೊಳ್ಳಬೇಕು” ಎಂದು ಅವರು ಆಶಿಸಿದರು.

“ರಾಜ್ಯಕ್ಕೆ 370ನೇ ವಿಧಿಯಡಿ ವಿಶೇಷ ಸ್ಥಾನಮಾನವನ್ನು ಮರಳಿ ನೀಡುವವರೆಗೆ ನಾನು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ” ಎಂದು ಅವರು ಪುನರುಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ?: ಕೇಜ್ರಿವಾಲ್ ನಿಯಂತ್ರಿಸಲು ‘ಸುಪ್ರೀಂ’ ಆದೇಶ ಧಿಕ್ಕರಿಸಿ ಸುಗ್ರೀವಾಜ್ಞೆ ಹೊರಡಿಸಿದ ಮೋದಿ ಸರ್ಕಾರ

“ಇಂದು, ಜಮ್ಮು ಮತ್ತು ಕಾಶ್ಮೀರವು ಅತ್ಯಂತ ಮಿಲಿಟರೀಕೃತ ರಾಜ್ಯವಾಗಿದೆ. ವಿಶೇಷವಾಗಿ, ಜಿ20 ಶೃಂಗಸಭೆಯ ಈ ಹೊತ್ತಿನಲ್ಲಿ ತಪಾಸಣೆ ಮತ್ತು ಭದ್ರತೆಯ ಹೆಸರಿನಲ್ಲಿ ಕಿರುಕುಳ ನೀಡಲಾಗುತ್ತಿದೆ. ಕಣಿವೆಯಲ್ಲಿ ಏನಾಗುತ್ತಿದೆ ಎಂಬುದರ ಬಗ್ಗೆ ಗಮನ ಸೆಳೆಯಲು ನಾನು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಇತರರೊಂದಿಗೆ ಮಾತನಾಡಿದ್ದೇನೆ” ಎಂದು ಅವರು ಹೇಳಿದರು.

“ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ಮೂಲಕ ದೆಹಲಿ ಸರ್ಕಾರವನ್ನು ನಿಯಂತ್ರಿಸಲು ಮುಂದಾಗಿದೆ. ಅದನ್ನೇ ಇತರ ರಾಜ್ಯ ಸರ್ಕಾರಗಳ ಮೇಲೂ ಮಾಡಬಹುದು. ಹೀಗಾಗಿ, 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಒಗ್ಗಟ್ಟಿನ ಹೋರಾಡುವುದು ಅಗತ್ಯವಾಗಿದೆ” ಎಂದು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ?: ಪ್ರಧಾನಿ ಮೋದಿ ಜಪಾನ್‌ಗೆ ಹೋದಾಗಲೆಲ್ಲ ಭಾರತದಲ್ಲಿ ನೋಟು ನಿಷೇಧ: ಖರ್ಗೆ ಆರೋಪ

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Subscribe

ಹೆಚ್ಚು ಓದಿಸಿಕೊಂಡ ಲೇಖನಗಳು

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಲಿತರ ಹತ್ಯಾಕಾಂಡ | 42 ವರ್ಷಗಳ ಬಳಿಕ ತೀರ್ಪಿತ್ತ ಕೋರ್ಟ್‌; ನ್ಯಾಯ ದಕ್ಕಿದ್ದು ಯಾರಿಗೆ?

ಇಲ್ಲಿ ನ್ಯಾಯ ತೋರುತ್ತಿದೆಯೇ? ನಾನು ನನ್ನ ಇಡೀ ಜೀವನವನ್ನು ನ್ಯಾಯಕ್ಕಾಗಿ ಕಾಯುವುದರಲ್ಲೇ...

ನಮ್ಮ ಸಚಿವರು | ಮಾಸ್ ಲೀಡರ್ ಆಗುವ ಲಕ್ಷಣವುಳ್ಳ ಪ್ರಿಯಾಂಕ್ ಖರ್ಗೆ; ಕ್ಷೇತ್ರದ ಅಭಿವೃದ್ಧಿಗೆ ನೀಡಬೇಕಿದೆ ಆದ್ಯತೆ

ಪ್ರಿಯಾಂಕ್ ಖರ್ಗೆ ಅವರು  ಕಾಂಗ್ರೆಸ್‌ನಲ್ಲಿ ತಮ್ಮದೇ ವರ್ಚಸ್ಸು ಹೊಂದಿದ್ದಾರೆ. ತಂದೆಯ ಹಾದಿಯಲ್ಲಿಯೇ...

ಮೈಸೂರಿನಲ್ಲಿ ಅನ್ನಭಾಗ್ಯ ಯೋಜನೆಗೆ ಚಾಲನೆ: ಸಿಎಂ ಸಿದ್ದರಾಮಯ್ಯ

ಗ್ಯಾರಂಟಿ ಯೋಜನೆಗಳ ಉದ್ಘಾಟನೆಗೆ ಸ್ಥಳ ನಿಗದಿ ನಾಳೆ ಬೆಂಗಳೂರಿನಲ್ಲಿ ಮೊದಲ ಯೋಜನೆಗೆ ಚಾಲನೆ ಕಾಂಗ್ರೆಸ್...

ಬರಲಿರುವ ಮಾನ್ಸೂನ್‌ ಮಳೆಗೆ ಬೇಕಾದ ಸಿದ್ಧತೆಯನ್ನು ಬಿಬಿಎಂಪಿ ಮಾಡಿಕೊಂಡಿದೆಯೇ?

ಕಳೆದ ಒಂದು ವರ್ಷದ ಹಿಂದೆ ಮಾನ್ಸೂನ್ ಮಳೆಗೆ ರಾಜಧಾನಿ ತೇಲುತ್ತಿತ್ತು. ಈ...