ಫೇಸ್‌ಬುಕ್ ಲೈವ್‌ನಲ್ಲಿ ಹಾಸ್ಯನಟ ತೀರ್ಥಾನಂದ್ ರಾವ್ ಆತ್ಮಹತ್ಯೆಗೆ ಯತ್ನ

Date:

Advertisements

ಹಿಂದಿ ಕಿರುತೆರೆಯ ಪ್ರಸಿದ್ಧ ಹಾಸ್ಯ ಕಾರ್ಯಕ್ರಮ ʻಕಪಿಲ್‌ ಶರ್ಮಾ ಶೋʼದ ಮಾಜಿ ಸಹ ನಟ, ಖ್ಯಾತ ಹಾಸ್ಯನಟ ತೀರ್ಥಾನಂದ್ ರಾವ್, ಫೇಸ್‌ಬುಕ್ ಲೈವ್‌ನಲ್ಲಿ ಮಾತನಾಡುತ್ತಿದ್ಧ ವೇಳೆಯೇ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬುಧವಾರ ನಡೆದಿದೆ.

‘ಲಿವ್-ಇನ್’ ಸಂಬಂಧ ಹೊಂದಿದ್ದ ಗೆಳತಿಯ ಕಿರುಕುಳದ ಕಾರಣದಿಂದ ಆತ್ಮಹತ್ಯೆಗೆ ಮಾಡಿಕೊಳ್ಳುತ್ತಿರುವುದಾಗಿ  ತೀರ್ಥಾನಂದ್ ವಿಡಿಯೋದಲ್ಲಿ ಹೇಳಿದ್ಧಾರೆ.

ʻ2022ರ ಅಕ್ಟೋಬರ್‌ನಲ್ಲಿ ಭೇಟಿಯಾದ ಮಹಿಳೆಯೊಂದಿಗೆ ‘ಲಿವ್-ಇನ್’ ಸಂಬಂಧವನ್ನು ಹೊಂದಿದ್ದೇನೆ. ಮದುವೆಯಾಗುವಂತೆ ಆಕೆ ನನ್ನನ್ನು ‘ಭಾವನಾತ್ಮಕವಾಗಿ ಬ್ಲ್ಯಾಕ್‌ಮೇಲ್’ ಮಾಡಿ ಹಣ ವಸೂಲಿ ಮಾಡುತ್ತಾಳೆ’ ಎಂದು ರಾವ್‌ ಹೇಳಿದ್ದಾರೆ.

ʻಈ ಮಹಿಳೆಯಿಂದಾಗಿ ನಾನು ಇದೀಗ ₹3-4 ಲಕ್ಷ ಸಾಲದಲ್ಲಿದ್ದೇನೆ. ನನ್ನ ವಿರುದ್ಧ ಭಾಯಂದರ್‌ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಆದರೆ ಯಾವ ಕಾರಣಕ್ಕಾಗಿ ನನ್ನ ವಿರುದ್ಧ ಆಕೆ ದೂರು ದಾಖಲಿಸಿದ್ದಾಳೆ ಎಂಬುದು ನನಗೆ ತಿಳಿದಿಲ್ಲ. ಪದೆ ಪದೇ ಕರೆ ಮಾಡಿ ಭೇಟಿಯಾಗಬೇಕೆಂದು ಒತ್ತಾಯಿಸುತ್ತಿದ್ದಳುʼ ಎಂದು ತೀರ್ಥಾನಂದ್ ವಿಡಿಯೋದಲ್ಲಿ ಹೇಳಿದ್ದಾರೆ.

‘ಜೂನಿಯರ್ ನಾನಾ ಪಾಟೇಕರ್’ ಎಂದು ಸ್ನೇಹಿತರ ವಲಯದಲ್ಲಿ ಕರೆಯಲ್ಪಡುತ್ತಿದ್ದ ತೀರ್ಥಾನಂದ್‌, ಫೇಸ್‌ಬುಕ್‌ ಲೈವ್‌ನಲ್ಲಿ ಮಾತನಾಡುತ್ತಿರುವ ನಡುವೆಯೇ, ಕೀಟನಾಶಕವನ್ನು ಬಾಟಲಿಯಿಂದ ಗ್ಲಾಸ್‌ವೊಂದಕ್ಕೆ ಸುರಿದು ಕುಡಿಯುತ್ತಿರುವುದು ವಿಡಿಯೋದಲ್ಲಿದೆ.

ವಿಡಿಯೋ ನೋಡಿದ ಬಳಿಕ ನಟನ ಮನೆಗೆ ಧಾವಿಸಿದ ಸ್ನೇಹಿತರು, ರಾವ್ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ತೀರ್ಥಾನಂದ್ ಆತ್ಮಹತ್ಯೆಗೆ ಯತ್ನಿಸುತ್ತಿರುವುದು ಇದು ಮೊದಲೇನಲ್ಲ. 2021ರಲ್ಲಿ ಆರ್ಥಿಕ ತೊಂದರೆಗೆ ಸಿಲುಕಿದ್ದೇನೆ ಎಂದು ಹೇಳಿದ್ದ ಹಾಸ್ಯನಟ ಆತ್ಮಹತ್ಯೆಗೆ ಯತ್ನಿಸಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುವಜನರಿಗಾಗಿ ಪ್ರಾಣವನ್ನೇ ತ್ಯಾಗ ಮಾಡುತ್ತೇನೆ: ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ

ಸುಡುವ ಬಿಸಿಲಿನಲ್ಲಿ ಕುರಿತು ಯುವಜನರು ತಮ್ಮ ಹಕ್ಕೊತ್ತಾಯಗಳ ಈಡೇರಿಕೆಗಾಗಿ ಹೋರಾಟ ನಡೆಸುತ್ತಿದ್ದಾರೆ....

ದೆಹಲಿ ಶಾಲೆಗಳಲ್ಲಿ RSS ಬೋಧನೆ: ಮಕ್ಕಳ ಎಳೆ ಮನಸ್ಸಲ್ಲಿ ಕೋಮುದ್ವೇಷ ಬಿತ್ತುವ ಹುನ್ನಾರ!

ಕೋಮುವಾದಿ, ಕೋಮುದ್ವೇಷಿ, ಸಮಾಜಘಾತುಕ ಸಂಘಟನೆಯ ಬಗ್ಗೆ ಶಾಲೆಗಳಲ್ಲಿ ಬೋಧಿಸುವುದು ಎಳೆ ಮನಸ್ಸುಗಳಲ್ಲಿ...

ಆರ್‌ಎಸ್‌ಎಸ್‌ನ ಕೈಗಳಿಗೆ ಮಹಾತ್ಮ ಗಾಂಧಿಯ ರಕ್ತದ ಕಲೆ ಅಂಟಿದೆ: ಕಾಂಗ್ರೆಸ್‌

ಆರ್‌ಎಸ್‌ಎಸ್ ಮಹಾತ್ಮ ಗಾಂಧಿ, ಭಗತ್ ಸಿಂಗ್ ಮತ್ತು ಚಂದ್ರಶೇಖರ್ ಆಜಾದ್ ಅವರಂತಹ...

RSS ಕುರಿತ ₹100 ನಾಣ್ಯ & ಅಂಚೆ ಚೀಟಿ ಬಿಡುಗಡೆ, ಸಂವಿಧಾನಕ್ಕೆ ಎಸಗಿದ ಘೋರ ಅಪಚಾರ: ಸಿಪಿಐ(ಎಂ)

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶತಮಾನೋತ್ಸವ ಸಮಾರಂಭದ ಪ್ರಯುಕ್ತ ಪ್ರಧಾನಿ ನರೇಂದ್ರ...

Download Eedina App Android / iOS

X