ಸಂಚಾರ ನಿಯಮ ಉಲ್ಲಂಘನೆ ಆರೋಪ; ಪ್ರಧಾನಿ ಮೋದಿ ವಿರುದ್ಧ ದೂರು ದಾಖಲು

Date:

ಕೇರಳದಲ್ಲಿ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ನಡೆಸಿದ ವೇಳೆ ಸಂಚಾರ ನಿಯಮ ಉಲ್ಲಂಘನೆ ಆರೋಪವನ್ನು ಎದುರಿಸುತ್ತಿದ್ದಾರೆ

ಕೇರಳದ ಕೊಚ್ಚಿಯಲ್ಲಿ ರೋಡ್‌ ಶೋ ನಡೆಸಿದ್ದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರಿಂದ ಸಂಚಾರ ನಿಯಮ ಉಲ್ಲಂಘನೆ ಆಗಿರುವ ಬಗ್ಗೆ ತ್ರಿಶೂರ್ ನಿವಾಸಿ ಜಯಕೃಷ್ಣನ್ ಎಂಬುವವರು ದೂರು ನೀಡಿದ್ದಾರೆ.

ಎರಡು ದಿನಗಳ ಭೇಟಿಗಾಗಿ ಸೋಮವಾರ ಕೇರಳಕ್ಕೆ ಆಗಮಿಸಿದ್ದ ಪ್ರಧಾನಿ ಮೋದಿ, ಎರ್ನಾಕುಲಂನಲ್ಲಿ ಸಾಂಪ್ರದಾಯಿಕ ಸ್ಥಳೀಯ ಉಡುಗೆಯಲ್ಲಿ ಭರ್ಜರಿ ರೋಡ್‌ ಶೋ ನಡೆಸಿದ್ದರು. ಈ ವೇಳೆ ಕಾರಿನ ಬಾಗಿಲು ತೆರೆದು ಫುಟ್‌ಬೋರ್ಡ್‌ನಲ್ಲಿ ನಿಂತು ರಸ್ತೆಯ ಇಕ್ಕೆಲಗಳಲ್ಲಿ ನಿಂತಿದ್ದ ಸಾರ್ವಜನಿಕರತ್ತ ಕೈ ಬೀಸಿದ್ದರು.

ಇದು ಸಂಚಾರ ನಿಯಮ ಉಲ್ಲಂಘನೆ ಎಂದು ದೂರುದಾರ ಜಯಕೃಷ್ಣನ್ ಆರೋಪಿಸಿದ್ದಾರೆ. “ಡಿಎಲ್ 2 ಸಿಎಎಕ್ಸ್ 8624 ನೋಂದಣಿ ಸಂಖ್ಯೆಯ ವಾಹನವು ಸಂಚಾರ ನಿಯಮಗಳನ್ನು ಉಲ್ಲಂಘಿಸಿದೆ. ವಾಹನದ ತೆರೆದ ಬಾಗಿಲಿನಲ್ಲಿ ವ್ಯಕ್ತಿಯೊಬ್ಬರು ನೇತಾಡುತ್ತಿದ್ದರು. ಟ್ರಾಫಿಕ್ ನಿಯಮಗಳನ್ನು ಉಲ್ಲಂಘಿಸಿ ಕಾರನ್ನು ಚಲಾಯಿಸುವುದು ಅಪಾಯಕಾರಿ.‌ ಇದಲ್ಲದೆ ಕಾರಿನ ಗ್ಲಾಸ್‌ಗಳು ಹೂವುಗಳಿಂದ ಮುಚ್ಚಲ್ಪಟ್ಟಿತ್ತು. ಇದರಿಂದಾಗಿ ಚಾಲಕನ ದೃಷ್ಟಿಗೆ ಅಡ್ಡಿಯಾಗಿದೆ ಎಂದು ದೂರಿನಲ್ಲಿ ಹೇಳಲಾಗಿದೆ.

ಈ ಸುದ್ದಿ ಓದಿದ್ದೀರಾ?: ಬಿಬಿಸಿ ಸಾಕ್ಷ್ಯಚಿತ್ರ ಪ್ರಸಾರಕ್ಕೆ ದೆಹಲಿ ವಿವಿ ನಿಷೇಧ ರದ್ದುಪಡಿಸಿದ ದೆಹಲಿ ಹೈಕೋರ್ಟ್‌

ಪೊಲೀಸ್ ಮಹಾನಿರ್ದೇಶಕರು ಹಾಗೂ ಮೋಟಾರು ವಾಹನ ಇಲಾಖೆಗೆ (ಎಂವಿಡಿ) ಆನ್‌ಲೈನ್‌ ಮೂಲಕ ಜಯಕೃಷ್ಣನ್ ದೂರು ನೀಡಿದ್ದಾರೆ.

ಕಾನೂನಿನ ಮುಂದೆ ಎಲ್ಲರೂ ಸಮಾನರು. ಇಂತಹ ಚಟುವಟಿಕೆಗಳು ಸಾರ್ವಜನಿಕರಿಗೆ ತಪ್ಪು ಸಂದೇಶ ನೀಡುವುದರಿಂದ ನಿಯಮ ಉಲ್ಲಂಘಿಸುವವರ ವಿರುದ್ಧ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಆಗ್ರಹಿಸಿದ್ದಾರೆ.

ಕೊಚ್ಚಿಯ ತೇವರದಲ್ಲಿ ರೋಡ್‌ಶೋ ನಡೆಸಿದ ಪ್ರಧಾನಿ ಮೋದಿ, ಆರಂಭದಲ್ಲಿ 20 ನಿಮಿಷಗಳ ಕಾಲ ಕಾಲ್ನಡಿಗೆಯಲ್ಲಿ ತೆರಳಿ ಬಳಿಕ ಕಾರಿನ ಫುಟ್‌ಬೋರ್ಡ್‌ನಲ್ಲಿ ನಿಂತು ಹೆದ್ದಾರಿಗಳ ಬದಿಗಳಲ್ಲಿದ್ದವರತ್ತ ಕೈ ಬೀಸಿದ್ದರು.  ಬಿಜೆಪಿ ಆಯೋಜಿಸಿದ್ದ ಯುವಂ ಸಮಾವೇಶಕ್ಕೆ ಚಾಲನೆ, ʻವಂದೇ ಭಾರತ್‌ʼ ರೈಲು ಲೋಕಾರ್ಪಣೆ ಸೇರಿದಂತೆ ಹಲವು ಕಾರ್ಯಕ್ರಮಗಳಲ್ಲಿ ಮೋದಿ ಭಾಗವಹಿಸಿದ್ದರು.  

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಊಟಿ – ಮೆಟ್ಟುಪಾಳ್ಯಂ ರಸ್ತೆಯಲ್ಲಿ ಕಂದಕಕ್ಕೆ ಉರುಳಿದ ಬಸ್;‌ 8 ಮಂದಿ ಸಾವು

ಪ್ರವಾಸಿಗರ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಆಳವಾದ ಕಣಿವೆಗೆ ಬಿದ್ದಿದ್ದರಿಂದ 8...

ಟರ್ಕಿ ಸಂಸತ್‌ನ ಬಳಿ ಆತ್ಮಹತ್ಯಾ ಬಾಂಬ್ ದಾಳಿ: ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ಗಾಯ

ಟರ್ಕಿ ದೇಶದ ಸಂಸತ್‌ 'ಅಂಕಾರ' ಬಳಿ ಇಂದು ಬೆಳಗ್ಗೆ ಆತ್ಮಹತ್ಯಾ ಬಾಂಬ್...

ಪ್ರತಿಯೊಬ್ಬರೂ ವಿಶ್ವ ಮಾನವರಾಗಿ ಬದುಕಿ, ಸಾಯಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

ಹಿರಿಯರ ಬದುಕಿನ ಮೌಲ್ಯಗಳನ್ನು ಅಳವಡಿಸಿಕೊಳ್ಳುವುದೇ ನಾವು ಹಿರಿಯರಿಗೆ ನೀಡುವ ಗೌರವ: ಸಿಎಂ 'ಎಷ್ಟು...

ಆರು ತಿಂಗಳಲ್ಲಿ ಕಾಂಗ್ರೆಸ್‌ ಸರ್ಕಾರ ಪತನ; ರಾಜಕೀಯ ಸಮರ ಸೃಷ್ಟಿಸಿದ ಎಚ್‌ಡಿಕೆ ಹೇಳಿಕೆ

ಇನ್ನು ಆರು ತಿಂಗಳಲ್ಲಿ ಕರ್ನಾಟಕ ಸರ್ಕಾರ ಪತನವಾಗಲಿದೆ ಎಂಬ ಜೆಡಿಎಸ್ ನಾಯಕ...