ಉಜ್ಬೆಕಿಸ್ತಾನ ಸಿರಪ್‌ ಪ್ರಕರಣ | ನೋಯ್ಡಾ ಔ‍ಷಧ ಘಟಕದ ಪರವಾನಗಿ ರದ್ದು

Date:

ಉಜ್ಬೇಕಿಸ್ತಾನದ ಸಿಪ್‌ನಿಂದ ಮಕ್ಕಳ ಸಾವು ಪ್ರಕರಣಕ್ಕೆ ಸಂಬಂಧಿಸಿ ನೋಯ್ಡಾ ಮೂಲದ ಔಷಧೀಯ ಘಟಕ ಮಾರಿಯನ್‌ ಬಯೋಟೆಕ್‌ನ ಉತ್ಪಾದನಾ ಪರವಾನಗಿಯನ್ನು ಉತ್ತರ ಪ್ರದೇಶ ಸರ್ಕಾರ ರದ್ದುಗೊಳಿಸಿದೆ.

ಉಜ್ಬೇಕಿಸ್ತಾನದ 18 ಮಕ್ಕಳ ಸಾವಿಗೆ ಕಾರಣವಾದ ಸಿರಪ್‌ಗಳಲ್ಲಿ ಮಾರಿಯನ್‌ ಬಯೋಟೆಕ್‌ನ ಕೆಮ್ಮಿನ ಸಿರಪ್‌ ಡಾಕ್‌ 1 ಸಹ ಇದೆ ಎಂದು ಹೇಳಲಾಗಿದೆ. ಕಳೆದ ಡಿಸೆಂಬರ್‌ನಲ್ಲಿ ನಡೆದ ಈ ಘಟನೆ ಸಂಬಂಧ ಕೇಂದ್ರ ಹಾಗೂ ರಾಜ್ಯ ಔಷಧ ನಿಯಂತ್ರಕ ಅಧಿಕಾರಿಗಳು ತನಿಖೆ ಕೈಗೊಂಡಿದ್ದರು.

“ಮಕ್ಕಳ ಸಾವಿಗೆ ಸಂಬಂಧಿಸಿ ತನಿಖೆ ಕೈಗೊಂಡಾಗಿನಿಂದ ಜನವರಿಯಿಂದ ಮಾರಿಯನ್‌ ಬಯೋಟೆಕ್‌ನ ಪರವಾನಗಿಯನ್ನು ಅಮಾನತಿನಲ್ಲಿಡಲಾಗಿತ್ತು. ಈಗ ಉತ್ತರ ಪ್ರದೇಶದ ಔಷಧ ನಿಯಂತ್ರಣ ಮತ್ತು ಪರವಾನಗಿ ಪ್ರಾಧಿಕಾರ ಸಂಸ್ಥೆಯ ಪರವಾನಗಿ ರದ್ದುಗೊಳಿಸಿದೆ” ಎಂದು ಸರ್ಕಾರದ ಅಧಿಕಾರಿಯೊಬ್ಬರು ತಿಳಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಪ್ರಕರಣಕ್ಕೆ ಸಂಬಂಧಿಸಿ ನೋಯ್ಡಾ ಪೊಲೀಸರು ಮಾರ್ಚ್‌ 3 ರಂದು ಮಾರಿಯನ್‌ ಬಯೋಟೆಕ್‌ನ ಮೂವರು ಉದ್ಯೋಗಿಗಳನ್ನು ಬಂಧಿಸಿದ್ದರು. ತನಿಖೆ ವೇಳೆ ಮಾರಿಯನ್‌ ಬಯೋಟೆಕ್‌ನ ಕೆಮ್ಮಿನ ಔಷಧಿಗಳು ಕಲಬೆರಕೆಯಿಂದ ಕೂಡಿದ್ದು ಗುಣಮಟ್ಟದ ಕೊರತೆಯಿದೆ ಎಂದು ಸಂಸ್ಥೆ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಛತ್ತೀಸ್‌ಗಢ| ಚುನಾವಣಾ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿ ಆತ್ಮಹತ್ಯೆ

ಚುನಾವಣಾ ಕರ್ತವ್ಯದಲ್ಲಿದ್ದಾಗ ಪೊಲೀಸ್ ಸಿಬ್ಬಂದಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಛತ್ತೀಸ್‌ಗಢದ ಗರಿಯಾಬಂದ್...

ಲೋಕಸಭಾ 2ನೇ ಹಂತದ ಚುನಾವಣೆ: ಇವಿಎಂ ವಿರುದ್ಧ 290 ದೂರು ಸ್ವೀಕಾರ, ಶೇ.39 ಮತದಾನ

ದೇಶದ 13 ರಾಜ್ಯಗಳ 88 ಲೋಕಸಭಾ ಕ್ಷೇತ್ರಗಳಿಗೆ ಎರಡನೇ ಹಂತದ ಮತದಾನ...

ಕೋಮು ದ್ವೇಷ ಭಾಷಣ; ಮೋದಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಚು.ಆಯೋಗಕ್ಕೆ 93 ನಿವೃತ ಅಧಿಕಾರಿಗಳ ಪತ್ರ

ರಾಜಸ್ಥಾನದ ಬನ್ಸ್‌ವಾರಾದಲ್ಲಿ ಏಪ್ರಿಲ್ 21ರಂದು ನಡೆದ ಚುನಾವಣಾ ರ್‍ಯಾಲಿಯಲ್ಲಿ ಪ್ರಧಾನಿ ನರೇಂದ್ರ...

‘ನೋಟಾ’ಗೆ ಹೆಚ್ಚು ಮತ ಬಂದರೆ ಮುಂದೇನು? ಚುನಾವಣಾ ಆಯೋಗಕ್ಕೆ ಸುಪ್ರೀಂ ನೋಟಿಸ್

ಅಭ್ಯರ್ಥಿಗಳಿಗಿಂತ ‘ನೋಟಾ’ಗೆ ಹೆಚ್ಚು ಮತಗಳು ಬಂದರೆ ಏನು ಮಾಡಬೇಕೆಂಬ ಸಾರ್ವಜನಿಕ ಹಿತಾಸಕ್ತಿ...