ಮಣಿಪುರ ಹಿಂಸಾಚಾರ ಕೊನೆಗೊಳಿಸಲು ಭಾರತಕ್ಕೆ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಆಯುಕ್ತರ ಒತ್ತಾಯ

Date:

ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರ ಕೊನೆಗೊಳಿಸಬೇಕೆಂದು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಆಯುಕ್ತ ವೊಲ್ಕರ್ ಟರ್ಕ್ ಪ್ರಸ್ತಾಪಿಸಿದ್ದಾರೆ.

ಜಾಗತಿಕ ಮಾನವಹಕ್ಕುಗಳ ಘೋಷಣೆಗೆ 75 ವರ್ಷಗಳು ತುಂಬಿರುವ ಸಂದರ್ಭದಲ್ಲಿ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದು, ಈ ಸಂದರ್ಭದಲ್ಲಿ ಮಣಿಪುರದ ಜನಾಂಗೀಯ ಹಿಂಸಾಚಾರವನ್ನು ಕೊನೆಗೊಳಿಸಬೇಕೆಂದು ಪ್ರಸ್ತಾಪಿಸಿದ್ದಾರೆ.

ಜಾಗತಿಕ ಮಾನವ ಹಕ್ಕುಗಳ ಘೋಷಣೆಗೆ 75 ವರ್ಷಗಳು ತುಂಬಿರುವ ಸಂಭ್ರಮದ ಆಚರಣೆಗಾಗಿ ವಿಶ್ವಸಂಸ್ಥೆಯು ’75 ವರ್ಷಗಳ ಮಾನವಹಕ್ಕುಗಳು’ ಎಂಬ ಕಾರ್ಯಕ್ರಮವನ್ನು ಆಯೋಜಿಸಿದೆ. ಈ ಕಾರ್ಯಕ್ರಮಕ್ಕೆ ವೊಲ್ಕರ್ ಟರ್ಕ್ ಕಳೆದ ವರ್ಷದ ಡಿಸೆಂಬರ್‌ನಲ್ಲಿ ಚಾಲನೆ ನೀಡಿದ್ದರು.

ಈ ಸಂದರ್ಭದಲ್ಲಿ ಹೇಳಿಕೆಯೊಂದನ್ನು ಹೊರಡಿಸಿರುವ ವೊಲ್ಕರ್ ಟರ್ಕ್ ಅವರು, ‘‘ಕೆಲವು ಗುಂಪುಗಳು ಸಮುದಾಯಗಳ ನಡುವೆ ದ್ವೇಷವನ್ನು ಪ್ರಚೋದಿಸಿ ವಿಭಜನೆ ಹುಟ್ಟು ಹಾಕುತ್ತವೆ. ಹಲವು ಘಟನೆಗಳಲ್ಲಿ ಇದರ ಪರಿಣಾಮಗಳನ್ನು ನಾವು ನೋಡಿದ್ದೇವೆ. ಇದಕ್ಕೆ ಇತ್ತೀಚಿನ ಉದಾಹರಣೆಯಂದರೆ ಈಶಾನ್ಯ ಭಾರತದ ಮಣಿಪುರದಲ್ಲಿ ನಡೆದ ಹಿಂಸಾಚಾರ. ವಿಭಿನ್ನ ಜನಾಂಗೀಯ ಮತ್ತು ಬುಡಕಟ್ಟು ಗುಂಪುಗಳ ನಡುವೆ ಆಂತರ್ಯದಲ್ಲಿ ಇರುವ ಉದ್ವಿಗ್ನತೆಯನ್ನು ಈ ಹಿಂಸಾಚಾರ ಬಹಿರಂಗಪಡಿಸಿದೆ. ಇಂತಹ ಸಂದರ್ಭಗಳಲ್ಲಿ ಕ್ಷಿಪ್ರವಾಗಿ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ನಾನು ಸಂಬಂಧಪಟ್ಟ ಅಧಿಕಾರಿಗಳನ್ನು ಒತ್ತಾಯಿಸುತ್ತೇ ನೆ. ಅಧಿಕಾರಿಗಳು ತಮ್ಮ ಅಂತರರಾಷ್ಟ್ರೀಯ ಮಾನವಹಕ್ಕುಗಳ ಬಾಧ್ಯತೆಗಳಿಗೆ ಅನುಗುಣವಾಗಿ ಈ ಹಿಂಸಾಚಾರಗಳ ತನಿಖೆ ಮಾಡಬೇಕು ಮತ್ತು ಅವುಗಳ ಸಮಸ್ಯೆಗಳಿಗೆ ಪರಿಹಾರ ಕಂಡುಹಿಡಿಯಬೇಕು’’ ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ವಿಶ್ವದ ನಾಲ್ಕನೇ ಅತಿದೊಡ್ಡ ರಾಷ್ಟ್ರ ಜರ್ಮನಿಗೆ ಆರ್ಥಿಕ ಹಿಂಜರಿತದ ಆಘಾತ

ಹಲವು ಮಾನವ ಹಕ್ಕುಗಳ ಉಲ್ಲಂಘನೆ ಉಲ್ಲೇಖ

ಮಣಿಪುರದ ಜೊತೆಗೆ, ಮಯನ್ಮಾರ್‌ನ ರೊಹಿಂಗ್ಯಾ ಮುಸ್ಲಿಮರ ಮಾನವ ಹಕ್ಕು ಉಲ್ಲಂಘನೆಗಳು, ಸುಡಾನ್‌ನ ನಾಗರಿಕರ ಹತ್ಯೆ , ಅಮೆರಿಕದಲ್ಲಿ ಜಾರ್ಜ್ ಫ್ಲಾಯ್ಡಾ ಹತ್ಯೆ , ಎಲ್‌ಜಿಬಿಟಿಕ್ಯು ಹಕ್ಕುಗಳ ಉಲ್ಲಂಘನೆಗಳು, ರಿಯಲ್‌ ಮ್ಯಾಡ್ರಿಡ್ ಫುಟ್ಬಾ ಲ್ ಆಟಗಾರ ವಿನ್ಸಿಯಸ್ ಜೂನಿಯರ್ ಸ್ಪೇನ್‌ನಲ್ಲಿ ಎದುರಿಸುತ್ತಿರುವ ಜನಾಂಗೀಯ ನಿಂದನೆ, ಚೀನಾದಲ್ಲಿ ಮಾನವಹಕ್ಕುಗಳ ಹೋರಾಟಗಾರರಿಗೆ ವಿಧಿಸಲಾಗುತ್ತಿರುವ ಜೈಲು ಶಿಕ್ಷೆ ಮತ್ತು ಫ್ಲಾಯ್ಡ್ ಹತ್ಯೆ ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಆಡಳಿತವು ಮಹಿಳೆಯರ ವಿರುದ್ಧ ನಡೆಸುತ್ತಿರುವ ಲಿಂಗ ತಾರತಮ್ಯ ವಿಷಯಗಳನ್ನು ವೊಲ್ಕರ್ ಟರ್ಕ್ ಪ್ರಸ್ತಾಪಿಸಿದ್ದಾರೆ.

‘‘ವಲಸಿಗರು ಮತ್ತು ನಿರಾಶ್ರಿತರ ವಿರುದ್ಧದ ದ್ವೇಷಪೂರಿತ ಮಾತುಗಳು ಮತ್ತು ಹಾನಿಯುಂಟು ಮಾಡುವ ವ್ಯಾಖ್ಯಾನಗಳು ಈಗಲೂ ವ್ಯಾಪಕವಾಗಿ ಹರಿದಾಡುತ್ತಿವೆ. ಇದರ ವಿರುದ್ಧ ವಲಸಿಗ-ವಿರೋಧಿ ಕಾನೂನುಗಳು ಮತ್ತು ನೀತಿಗಳು ಜನರ ಬೆಂಬಲಕ್ಕೆ ನಿಂತಿವೆ. ದ್ವೇಷಪೂರಿತ ಮಾತುಗಳು ಮತ್ತು ವ್ಯಾಖ್ಯಾನಗಳು ಅಂತರರಾಷ್ಟ್ರೀಯ ಮಾನವಹಕ್ಕುಗಳ ಕಾನೂನು ಮತ್ತು ನಿರಾಶ್ರಿತರ ಕಾನೂನುಗಳ ಅಡಿಪಾಯವನ್ನೇ ದುರ್ಬಲಗೊಳಿಸುವ ಬೆದರಿಕೆ ಒಡ್ಡಿವೆ’’ ಎಂದು ಟರ್ಕ್ ತಿಳಿಸಿದ್ದಾರೆ.

‘‘ಜಾಗತಿಕ ಮಾನವಹಕ್ಕುಗಳ ಘೋಷಣೆಯ 14ನೇ ವಿಧಿಯು ಹಿಂಸಾಚಾರದಿಂದ ತಪ್ಪಿಸಿಕೊಂಡು ಆಶ್ರಯ ಕೋರುವ ಹಕ್ಕನ್ನು ಪ್ರತಿಯೊಬ್ಬರಿಗೂ ನೀಡುತ್ತದೆ. ಸಂಕಷ್ಟದ ಪರಿಸ್ಥಿತಿಗಳಲ್ಲಿರುವ ಎಲ್ಲ ನಾಗರಿಕನ್ನು ಮಾನವೀಯತೆಯಿಂದ ಕಾಣಬೇಕು ಮತ್ತು ಅವರ ಹಕ್ಕುಗಳನ್ನು ಗೌರವಿಸಬೇಕು. ಇಂಥ ಪರಿಸ್ಥಿತಿಯೊಂದು ಸೃಷ್ಟಿಯಾಗಲು ನಾವು ಒಗ್ಗಟ್ಟಿನಿಂದ ಕೆಲಸಮಾಡಬೇಕು’’ ಎಂದು ವಿಶ್ವ ಸಂಸ್ಥೆಯ ಮಾನವಹಕ್ಕುಗಳ ಆಯುಕ್ತರು ಹೇಳಿದ್ದಾರೆ.

ಮಣಿಪುರದ ಕುಕಿ-ರೊಮಿ ಬುಡಕಟ್ಟು ಪಂಗಡಗಳು ಮತ್ತು ಬಹುಸಂಖ್ಯಾತ ಮೇಟಿ ಸಮುದಾಯದ ನಡುವೆ ಇತ್ತೀಚೆಗೆ ಸಂಭವಿಸಿದ ಹಿಂಸಾಚಾರದಲ್ಲಿ 70ಕ್ಕೂ ಅಧಿಕ ಮಂದಿ ಪ್ರಾಣ ಕಳೆದುಕೊಂಡು ನೂರಾರು ಮಂದಿ ಗಾಯಗೊಂಡಿದ್ದಾರೆ. ಕೋಟ್ಯಂತರ ಮೌಲ್ಯದ ಆಸ್ತಿಪಾಸ್ತಿ ನಷ್ಟವುಂಟಾಗಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Subscribe

ಹೆಚ್ಚು ಓದಿಸಿಕೊಂಡ ಲೇಖನಗಳು

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೇಂದ್ರ ಸರ್ಕಾರದ ಸಬ್ಸಿಡಿ ಕಡಿತ; ಎಲೆಕ್ಟ್ರಿಕ್ ಸ್ಕೂಟರ್ ದುಬಾರಿ!

ಕೇಂದ್ರ  ಸರ್ಕಾರ ಸಬ್ಸಿಡಿಯನ್ನು ಕಡಿತಗೊಳಿಸಿದ ಪರಿಣಾಮ ಗುರುವಾರದಿಂದ (ಜೂನ್‌ 1) ಎಲೆಕ್ಟ್ರಿಕ್...

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ತೊಂದರೆಯಾಗದು: ಉಪಮುಖ್ಯಮಂತ್ರಿ ಡಿಕೆಶಿ

ನಾವು ಜಗಳವಾಡಿ ಕೋರ್ಟ್ ಕಚೇರಿ ಅಲೆದಿದ್ದು ಸಾಕು ಸೌಹಾರ್ದತೆಯಿಂದ ಮೇಕೆದಾಟು ಯೋಜನೆಗೆ ಸಹಕರಿಸಿ ಮೇಕೆದಾಟು...

ಬೆಂಗಳೂರು ಅಭಿವೃದ್ಧಿಗಾಗಿ ಮಾಜಿ ಮೇಯರ್‌ಗಳ ಸಲಹೆ ಪಡೆದಿರುವೆ: ಡಿಸಿಎಂ ಶಿವಕುಮಾರ್‌

ಮಾಜಿ ಮೇಯರ್‌ಗಳೊಂದಿಗೆ ಸಭೆ ನಡೆಸಿದ ಬೆಂಗಳೂರು ಅಭಿವೃದ್ದಿ ಸಚಿವ ಕೆಪಿಸಿಸಿ ಕಚೇರಿಯಲ್ಲಿ...

ಬಿಬಿಎಂಪಿ ಚುನಾವಣೆ ತಯಾರಿ; ಪಕ್ಷ ಪ್ರಮುಖರೊಂದಿಗೆ ಎಚ್‌ಡಿಕೆ ಸಭೆ

ಬಿಡದಿ ತೋಟದ ಮನೆಯಲ್ಲಿ ಸಭೆ ನಡೆಸಿದ ಕುಮಾರಸ್ವಾಮಿ ಬಿಬಿಎಂಪಿ ಚುನಾವಣೆಗೆ ತಯಾರಿ ಆರಂಭಿಸಿದ...