ನಾಗಾಲ್ಯಾಂಡ್ ನಾಗರಿಕರ ಹತ್ಯೆ | 30 ಸೇನಾ ಸಿಬ್ಬಂದಿ ವಿಚಾರಣೆಗೆ ನಿರಾಕರಿಸಿದ ರಕ್ಷಣಾ ಸಚಿವಾಲಯ

Date:

Advertisements
  • 30 ಸೇನಾ ಸಿಬ್ಬಂದಿ ತಪ್ಪಿತಸ್ಥರೆಂದು ನಾಗಾಲ್ಯಾಂಡ್ ಎಸ್ಐಟಿ ಚಾರ್ಜ್‌ಶೀಟ್‌
  • ತಿರು-ಓಟಿಂಗ್ ಪ್ರದೇಶದಲ್ಲಿ ಸ್ಥಳೀಯ ಕಲ್ಲಿದ್ದಲು ಗಣಿಗಾರರ ಮೇಲೆ ಸೇನೆ ದಾಳಿ

ಭಯೋತ್ಪಾದನೆ ನಿಗ್ರಹಕ್ಕೆ ಸಂಬಂಧಿಸಿದಂತೆ ಸೇನಾ ಪಡೆ ನಾಗಾಲ್ಯಾಂಡ್ ಗ್ರಾಮವೊಂದರಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ನಾಗರಿಕರ ಹತ್ಯೆ ಆರೋಪದಲ್ಲಿ ಸೇನಾ ಸಿಬ್ಬಂದಿಯ ವಿಚಾರಣೆ ನಡೆಸಲು ಕೇಂದ್ರ ರಕ್ಷಣಾ ಸಚಿವಾಲಯ ಗುರುವಾರ (ಏಪ್ರಿಲ್ 14) ಅನುಮತಿ ನಿರಾಕರಿಸಿದೆ.

2021ರ ಡಿಸಂಬರ್‌ನಲ್ಲಿ ರಾಜ್ಯದ ಓಟಿಂಗ್‌ ಗ್ರಾಮದಲ್ಲಿ ಸೇನಾ ಪಡೆ ಭಯೋತ್ಪಾದನೆ ನಿಗ್ರಹ ಕಾರ್ಯಾಚರಣೆ ಕೈಗೊಂಡಿತ್ತು. ಈ ವೇಳೆ ಸೇನೆ ನಡೆಸಿದ ಗುಂಡಿನ ದಾಳಿಯಲ್ಲಿ 6 ನಾಗರಿಕರು ಮೃತಪಟ್ಟಿದ್ದರು.

ಘಟನೆಗೆ ಸಂಬಂಧಿಸಿ ಸೇನಾ ಸಿಬ್ಬಂದಿ ವಿಚಾರಣೆಗೆ ಅನುಮತಿ ನೀಡಲು ರಕ್ಷಣಾ ಸಚಿವಾಲಯದ ಅಡಿಯ ಮಿಲಿಟರಿ ವ್ಯವಹಾರಗಳ ಸಚಿವಾಲಯ ನಿರಾಕರಿಸಿ ಗುರುವಾರ ಅಧಿಸೂಚನೆ ಹೊರಡಿಸಿದೆ.

Advertisements

ಗುಂಡಿನ ದಾಳಿಯ ಬಗ್ಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ತನಿಖೆ ನಡೆಸಿ ದೋಷಾರೋಪಪಟ್ಟಿ ಸಲ್ಲಿಸಿದೆ. ಇದರಲ್ಲಿ 30 ಸೇನಾ ಯೋಧರನ್ನು ಹೆಸರಿಸಲಾಗಿತ್ತು.

ಎಲ್ಲ 30 ಸೇನಾ ಸಿಬ್ಬಂದಿ ವಿರುದ್ಧ ಕಾನೂನು ಕ್ರಮಕ್ಕೆ ಅನುಮತಿ ನೀಡಲು ಕೇಂದ್ರ ಸರ್ಕಾರದ ರಕ್ಷಣಾ ಸಚಿವಾಲಯ ಸಕ್ಷಮ ಪ್ರಾಧಿಕಾರವಾದ ಮಿಲಿಟರಿ ವ್ಯವಹಾರಗಳ ಇಲಾಖೆ ನಿರಾಕರಿಸಿದೆ ಎಂದು ನಾಗಾಲ್ಯಾಂಡ್ ಪೊಲೀಸರು ತಿಳಿಸಿದ್ದಾರೆ.

ಕೇಂದ್ರ ರಕ್ಷಣಾ ಸಚಿವಾಲಯದ ಅನುಮತಿ ನಿರಾಕರಣೆಯನ್ನು ನ್ಯಾಯಾಲಯಕ್ಕೆ ತಿಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

2021ರಲ್ಲಿ ಮೋನ್ ಜಿಲ್ಲೆಯ ತಿರು-ಓಟಿಂಗ್ ಪ್ರದೇಶದಲ್ಲಿ ಆರು ಸ್ಥಳೀಯ ಕಲ್ಲಿದ್ದಲು ಗಣಿಗಾರರನ್ನು ಭಾರತೀಯ ಸೇನೆಯ 21 ಅರೆ ವಿಶೇಷ ಪಡೆಗಳ ಸೈನಿಕರು ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿದ್ದರು. ಗಣಿಗಾರರನ್ನು ಹೊತ್ತೊಯ್ಯುತ್ತಿದ್ದ ಟ್ರಕ್ ಮೇಲೆ ಸೇನೆ ಗುಂಡು ಹಾರಿಸಿತ್ತು. ಇದು ತಪ್ಪಾದ ಗುರುತಿನ ಪ್ರಕರಣ ಎಂದು ಸೇನೆ ಹೇಳಿಕೊಂಡಿದೆ.

ಘಟನೆಯ ನಂತರ, ಕೋಪಗೊಂಡ ನಾಗಾಲ್ಯಾಂಡ್ ಗ್ರಾಮದ ಜನರು ಎರಡು ಭದ್ರತಾ ವಾಹನಗಳನ್ನು ಸುಟ್ಟು ಹಾಕಿದರು. ಸೇನಾ ಪಡೆಗಳಿಂದ ಮತ್ತೊಂದು ಸುತ್ತಿನ ಗುಂಡಿನ ದಾಳಿ ನಡೆಯಿತು. ಇದರಲ್ಲಿ ಕನಿಷ್ಠ ಏಳು ಗ್ರಾಮಸ್ಥರು ಮತ್ತು ಒಬ್ಬ ಭದ್ರತಾ ಸಿಬ್ಬಂದಿ ಮೃತಪಟ್ಟಿದ್ದರು. ಮಾರನೇ ದಿನ ಸೋಮ ಪಟ್ಟಣದಲ್ಲಿ ಭದ್ರತಾ ಪಡೆಗಳು ನಡೆಸಿದ ಗುಂಡಿನ ದಾಳಿಯಲ್ಲಿ ಮತ್ತೊಬ್ಬ ನಾಗಾ ಯುವಕನನ್ನು ಹತ್ಯೆ ಮಾಡಲಾಯಿತು.

ರಾಜ್ಯದ ಪೊಲೀಸ್ ಮುಖ್ಯಸ್ಥರ ನೇತೃತ್ವದ ವಿಶೇಷ ತನಿಖಾ ತಂಡ ಘಟನೆಯ ಬಗ್ಗೆ ತನಿಖೆ ನಡೆಸಿ ದೋಷಾರೋಪಪಟ್ಟಿ ಸಲ್ಲಿಸಿತು. 2022ರ ಮಾರ್ಚ್ 24ರಂದು ಆರೋಪಿತ 30 ಸೇನಾ ಯೋಧರನ್ನು ವಿಚಾರಣೆಗೆ ಒಳಪಡಿಸಲು ಕೇಂದ್ರ ರಕ್ಷಣಾ ಸಚಿವಾಲಯದ ಅನುಮತಿ ಕೋರಿತು.

2022ರ ಮೇ 30ರಂದು 21 ಅರೆ ವಿಶೇಷ ಪಡೆಗಳ 30 ಸಿಬ್ಬಂದಿ ಹೆಸರನ್ನು ಎಸ್ಐಟಿ ನ್ಯಾಯಾಲಯಕ್ಕೆ ತನ್ನ ದೋಷಾರೋಪ ಪಟ್ಟಿಯಲ್ಲಿ ಸಲ್ಲಿಸಿತು. ಗಣಿಗಾರರನ್ನು ಕೊಲ್ಲುವ ಸ್ಪಷ್ಟ ಉದ್ದೇಶದಿಂದ ಗುಂಡು ಹಾರಿಸಲಾಗಿದೆ ಎಂದು ಎಸ್ಐಟಿ ದೂರಿತ್ತು.

ಈ ಸುದ್ದಿ ಓದಿದ್ದೀರಾ? ಲಲಿತ್ ಮೋದಿ ನ್ಯಾಯಾಂಗ ನಿಂದನೆ ಪ್ರಕರಣ; ಸುಪ್ರೀಂ ಕೋರ್ಟ್‌ ಛೀಮಾರಿ

ಸೇನೆಯು ಘಟನೆಯ ಬಗ್ಗೆ ತೀರ್ಮಾನಿಸಲು ಸ್ವತಂತ್ರ ನ್ಯಾಯಾಲಯ ಸ್ಥಾಪಿಸಿತು. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿತು. ಆದರೆ, ಪ್ರಕರಣ ಸುಪ್ರೀಂ ಕೋರ್ಟ್‌ನಲ್ಲಿ ಇರುವುದರಿಂದ ಯಾವುದೇ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ ಎಂದು ಸೇನೆ ಹೇಳಿದೆ.

ನಾಗಾಲ್ಯಾಂಡ್ ಪೊಲೀಸ್ ಎಫ್ಐಆರ್ ಮತ್ತು ಎಸ್ಐಟಿಯ ವರದಿ ರದ್ದುಗೊಳಿಸುವಂತೆ ಆರೋಪಿ ಭದ್ರತಾ ಪಡೆ ಸಿಬ್ಬಂದಿಯ ಪತ್ನಿಯರು ಮನವಿ ಮಾಡಿದ ನಂತರ ಸುಪ್ರೀಂ ಕೋರ್ಟ್ ಕಳೆದ ವರ್ಷ ಜುಲೈ 19ರಂದು ಪ್ರಕರಣಕ್ಕೆ ತಡೆ ನೀಡಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X