ಜೂನಿಯರ್‌ ಇಂಜಿನಿಯರ್‌ ಕಪಾಳಕ್ಕೆ ಬಾರಿಸಿದ ಬಿಜೆಪಿ ಬೆಂಬಲಿತ ಶಾಸಕಿ

Date:

Advertisements

ಅಕ್ರಮ ಕಟ್ಟಡಗಳ ತೆರವು ಕಾರ್ಯಾಚರಣೆ ವೇಳೆ ಶಾಸಕಿಯೊಬ್ಬರು ಜೂನಿಯರ್‌ ಇಂಜಿನಿಯರ್‌ ಕಪಾಳಕ್ಕೆ ಬಾರಿಸಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದ್ದು, ಶಾಸಕಿಯ ನಡೆ ಭಾರೀ ವಿವಾದಕ್ಕೆ ಕಾರಣವಾಗಿದೆ.

ಮಹಾರಾಷ್ಟ್ರದ ಮೀರಾ ಭಯಂದರ್ ಮುನ್ಸಿಪಲ್ ಕಾರ್ಪೊರೇಷನ್ (ಎಂಬಿಎಂಸಿ) ವ್ಯಾಪ್ತಿಯ ವಾರ್ಡ್ ಸಂಖ್ಯೆ 6ರಲ್ಲಿ ಮಂಗಳವಾರ, ಜೂನಿಯರ್ ಇಂಜಿನಿಯರ್ ಶುಭಂ ಪಾಟೀಲ್ ನೇತೃತ್ವದಲ್ಲಿ ಅಕ್ರಮ ಕಟ್ಟಡಗಳ ತೆರವು ಕಾರ್ಯಾಚರಣೆ ಕೈಗೊಳ್ಳಲಾಗಿತ್ತು. ಈ ವೇಳೆ ಸ್ಥಳಕ್ಕೆ ಬಂದ ಮೀರಾ-ಭಯಂದರ್ ಶಾಸಕಿ ಗೀತಾ ಜೈನ್ ಅವರು ಕಾರ್ಯಾಚಾರಣೆ ಕುರಿತು ಮಾಹಿತಿ ಪಡೆದಿದ್ದಾರೆ. ಆದರೆ ಇಂಜಿನಿಯರ್‌ ಬಳಿ ಮಾತನಾಡುತ್ತಿರುವಾಗಲೇ ಏಕಾಏಕಿ ಕೋಪಗೊಂಡ ಶಾಸಕಿ, ಶುಭಂ ಪಾಟೀಲ್‌ರನ್ನು ದೂಡಿದ ಬಳಿಕ ಕಪಾಳಕ್ಕೆ ಬಾರಿಸಿದ್ದಾರೆ.

ಅಕ್ರಮ ಕಟ್ಟಡ ನೆಲಸಮ ಕಾರ್ಯಾಚರಣೆ ವೇಳೆ ಆರು ತಿಂಗಳ ಪುಟ್ಟ ಮಗುವನ್ನು ಹೊಂದಿದ್ದ ಕುಟುಂಬವೊಂದು ವಾಸವಾಗಿದ್ದ ಜೋಪಡಿಯನ್ನು ತೆರವುಗೊಳಿಸಲಾಗಿತ್ತು. ಇದೇ ವೇಳೆ ಅನೇಕ ವಯಸ್ಸಾದವರು ಸೇರಿದಂತೆ ನಿವಾಸಿಗಳನ್ನು ಬಲವಂತವಾಗಿ ಹೊರಹಾಕಲಾಗಿತ್ತು ಎಂದು ಆರೋಪಿಸಲಾಗಿದೆ. ಈ ರೀತಿಯ ಅಮಾನವೀಯ ವರ್ತನೆಯಿಂದ ಕೋಪಗೊಂಡ ಗೀತಾ ಜೈನ್, ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದರು.

Advertisements

ಮಳೆಗಾಲದಲ್ಲಿ ವಸತಿ ಕಟ್ಟಡಗಳನ್ನು ಕೆಡವುದರ ವಿರುದ್ಧ ಸರ್ಕಾರ ನಿರ್ಣಯ ಅಂಗೀಕರಿಸಿದ್ದರೂ ಸಹ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ ಎಂದು ಶಾಸಕಿ ಆರೋಪಿಸಿದ್ದಾರೆ. ಶಾಸಕಿಯ ಕೋಪಕ್ಕೆ ತುತ್ತಾದ ಜೂನಿಯರ್ ಇಂಜಿನಿಯರ್ ಶುಭಂ ಪಾಟೀಲ್, ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ..

ಪಶ್ಚಾತ್ತಾಪವಿಲ್ಲ ಎಂದ ಶಾಸಕಿ ಗೀತಾ ಜೈನ್

ಘಟನೆಯು ವಿವಾದವಾಗುತ್ತಲೇ ಸ್ಪಷ್ಟನೆ ನೀಡಿರುವ ಶಾಸಕಿ, ʻಮಾಹಿತಿ ಕೇಳಿದ ವೇಳೆ ಜೂನಿಯರ್‌ ಇಂಜಿನಿಯರ್‌ ನಗುತ್ತಿದ್ದರು. ಹೀಗಾಗಿ  ಕಪಾಳಮೋಕ್ಷ ಮಾಡಿದ್ದೇನೆ. ಈ ಕುರಿತು ‘ನನಗೆ ಯಾವುದೇ ವಿಷಾದವಿಲ್ಲ’ ಎಂದು ಬಿಜೆಪಿಗೆ ಬೆಂಬಲ ನೀಡಿರುವ ಸ್ವತಂತ್ರ ಶಾಸಕಿ ಗೀತಾ ಜೈನ್ ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X