ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್‌ ಮುಂಬೈ ನಿವಾಸದ ಮೇಲೆ ಪೊಲೀಸರ ದಾಳಿ

Date:

Advertisements

ದೆಹಲಿಯ ನ್ಯೂಸ್‌ಕ್ಲಿಕ್ ವೆಬ್‌ ಪೋರ್ಟಲ್‌ ಕಚೇರಿಯಲ್ಲಿ ಶೋಧ ಕಾರ್ಯಾಚರಣೆ ನಡೆಯುತ್ತಿದ್ದು, ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್‌ ಅವರ ಮುಂಬೈ ನಿವಾಸದಲ್ಲೂ ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ.

ತೀಸ್ತಾ ಸೆಟಲ್ವಾಡ್‌ ಅವರು ಟ್ರಿಕಾಂಟಿನೆಂಟಲ್ ಇನ್‌ಸ್ಟಿಟ್ಯೂಟ್ ಫಾರ್ ಸೋಶಿಯಲ್ ರಿಸರ್ಚ್‌ನ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಸಂಸ್ಥೆಯ ಮೂಲಕ ನ್ಯೂಸ್‌ಕ್ಲಿಕ್‌ಗೆ ತೀಸ್ತಾ ಅವರು ಲೇಖನಗಳನ್ನು ಬರೆದಿದ್ದಾರೆ. ಈ ಹಿನ್ನೆಲೆಯಲ್ಲಿ ಶೋಧ ಕಾರ್ಯ ನಡೆಸಲಾಗುತ್ತಿದೆ ಎನ್ನಲಾಗಿದೆ.

‘ನ್ಯೂಸ್ ಕ್ಲಿಕ್’ ಪೋರ್ಟಲ್ ಚೀನಾದ ಅಜೆಂಡಾವನ್ನು ಪ್ರಚಾರ ಮಾಡುವ ನೆಟ್‌ವರ್ಕ್‌ನಿಂದ ಹಣವನ್ನು ಪಡೆದಿದೆ ಎನ್ನುವ ನ್ಯೂಯಾರ್ಕ್‌ ಟೈಮ್ಸ್‌ ವರದಿ ಆಧರಿಸಿ ದೆಹಲಿ ಪೊಲೀಸರು ಆಗಸ್ಟ್ 17ರಂದು ಎಫ್ಐಆರ್ ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ನ್ಯೂಸ್‌ಕ್ಲಿಕ್‌ ಸುದ್ದಿ ಪೋರ್ಟಲ್‌ಗೆ ಸೇರಿದ ಹಲವಾರು ಪತ್ರಕರ್ತರ ಮನೆಗಳಿಗೆ ದಿಲ್ಲಿ ಪೊಲೀಸರು ದಾಳಿ ನಡೆಸಿ ಶೋಧ ಕಾರ್ಯ ನಡೆಸಿದ್ದಾರೆ.

Advertisements

ವೆಬ್‌ಸೈಟ್‌ನ ಸಂಪಾದಕ ಪ್ರಬೀರ್ ಪುರ್ಕಾಯಸ್ಥ, ಪತ್ರಕರ್ತರಾದ ಅಭಿಸರ್ ಶರ್ಮಾ, ಔನಿಂದ್ಯೋ ಚಕ್ರವರ್ತಿ ಮತ್ತು ಭಾಷಾ ಸಿಂಗ್ ಮತ್ತು ವಿಡಂಬನಕಾರ ಸಂಜಯ್ ರಾಜೌರಾ ಸೇರಿದಂತೆ ನ್ಯೂಸ್‌ಕ್ಲಿಕ್‌ಗೆ ಸಂಬಂಧಿಸಿದ ಹಲವಾರು ವ್ಯಕ್ತಿಗಳ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಫೋನ್‌ಗಳು ಮತ್ತು ಲ್ಯಾಪ್‌ಟಾಪ್‌ಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ‘ನ್ಯೂಸ್ ಕ್ಲಿಕ್’ ವೆಬ್ ಪೋರ್ಟಲ್ ಕಚೇರಿ-ಪತ್ರಕರ್ತರ ಮನೆಗಳ ಮೇಲೆ ದೆಹಲಿ ಪೊಲೀಸ್ ದಾಳಿ

ಇಲ್ಲಿಯವರೆಗೆ ಯಾರನ್ನೂ ಬಂಧಿಸಲಾಗಿಲ್ಲ. ಆದರೆ, ಕೆಲವು ಪತ್ರಕರ್ತರನ್ನು ವಿಚಾರಣೆಗಾಗಿ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ.

ಪತ್ರಕರ್ತರಾದ ಅಭಿಸರ್ ಶರ್ಮಾ ಅವರು ಟ್ವಿಟರ್‌ ಮೂಲಕ ಪೊಲೀಸ್‌ ದಾಳಿಯ ಬೆಳವಣಿಗೆಗಳನ್ನು ದೃಢಪಡಿಸಿದ್ದಾರೆ. ಅಲ್ಲದೆ ತಮ್ಮ ಫೋನ್ ಮತ್ತು ಲ್ಯಾಪ್‌ಟಾಪ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಈ ದಾಳಿಯಲ್ಲಿ ದೆಹಲಿ ಪೊಲೀಸ್ ವಿಶೇಷ ಸೆಲ್‌ನ ಎಲ್ಲ ಶ್ರೇಣಿಗಳ ತಂಡಗಳನ್ನು ನಿಯೋಜಿಸಲಾಗಿದೆ. ಸುಮಾರು 500 ಪೊಲೀಸರು ದಾಳಿಯಲ್ಲಿ ಭಾಗಿಯಾಗಿದ್ದರು.

ದೆಹಲಿ, ನೋಯ್ಡಾ, ಗಾಜಿಯಾಬಾದ್, ಗುರುಗ್ರಾಮ್ ಮತ್ತು ಮುಂಬೈನ 100 ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಂದು ಬೆಳಿಗ್ಗೆ 6 ಗಂಟೆಯಿಂದ ದಾಳಿ ಪ್ರಾರಂಭವಾಯಿತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X