ನರೋಡಾ ಗಾಮ್ ಹತ್ಯಾಕಾಂಡ ಪ್ರಕರಣ: ಬಿಜೆಪಿ ಮಾಜಿ ಸಚಿವೆ ಸೇರಿ 68 ಆರೋಪಿಗಳ ಖುಲಾಸೆಗೊಳಿಸಿದ ಕೋರ್ಟ್

Date:

Advertisements
  • ಫೆಬ್ರವರಿ 28, 2002 ರಂದು, ಅಹಮದಾಬಾದ್ ನರೋಡಾ ಗಾಮದಲ್ಲಿ ನಡೆದ ಹತ್ಯಾಕಾಂಡ
  • ಕುಂಭರ್ ವಾಸ್ ಪ್ರದೇಶದ ಮನೆಗಳಿಗೆ ಬೆಂಕಿ ಹಚ್ಚಿ 11 ಮುಸ್ಲಿಮರನ್ನು ಸುಟ್ಟು ಹಾಕಲಾಗಿತ್ತು

2002ರ ನರೋಡಾ ಗಾಮ್ ಹತ್ಯಾಕಾಂಡ ಕೋಮು ಗಲಭೆ ಪ್ರಕರಣದಲ್ಲಿ 11 ಮಂದಿ ಮುಸ್ಲಿಂ ಸಮುದಾಯದವರನ್ನು ಹತ್ಯೆಗೈದ ಪ್ರಕರಣದಲ್ಲಿ ಬಿಜೆಪಿಯ ಮಾಜಿ ಶಾಸಕಿ ಮಾಯಾ ಕೊಡ್ನಾನಿ, ಮಾಜಿ ಬಜರಂಗದಳ ನಾಯಕ ಬಾಬು ಬಜರಂಗಿ ಮತ್ತು ವಿಶ್ವ ಹಿಂದೂ ಪರಿಷತ್ ಮುಖಂಡ ಜಯದೀಪ್ ಪಟೇಲ್ ಸೇರಿದಂತೆ 69 ಆರೋಪಿಗಳನ್ನು ಅಹಮದಾಬಾದ್‌ನ ವಿಶೇಷ ನ್ಯಾಯಾಲಯ ಗುರುವಾರ ಖುಲಾಸೆಗೊಳಿಸಿದೆ.

2002ರ ಗುಜರಾತ್ ಗಲಭೆ ಪ್ರಕರಣಗಳ ತ್ವರಿತ ವಿಚಾರಣೆಗಾಗಿ ರಚಿಸಲಾಗಿದ್ದ ನ್ಯಾಯಾಧೀಶರಾದ ಶುಭದಾ ಕೃಷ್ಣಕಾಂತ್ ಬಕ್ಷಿ ಅವರ ವಿಶೇಷ ನಿಯೋಜಿತ ನ್ಯಾಯಾಲಯವು ಏಪ್ರಿಲ್ 5 ರಂದು ವಿಚಾರಣೆಯನ್ನು ಮುಕ್ತಾಯಗೊಳಿಸಿತ್ತು. ಪ್ರಕರಣದ 86 ಆರೋಪಿಗಳ ಪೈಕಿ 17 ಮಂದಿ ಈಗಾಗಲೇ ಮೃತಪಟ್ಟಿದ್ದರೆ, ಒಬ್ಬ ಆರೋಪಿ ಬಿಡುಗಡೆಗೊಂಡಿದ್ದ. ಉಳಿದ ಆರೋಪಿಗಳು ಜಾಮೀನಿನ ಮೇಲೆ ಹೊರಗಿದ್ದರು. ಪ್ರಕರಣದಲ್ಲಿ ಸುಮಾರು 182 ಪ್ರಾಸಿಕ್ಯೂಷನ್ ಸಾಕ್ಷಿಗಳನ್ನು ವಿಚಾರಣೆ ನಡೆಸಲಾಗಿತ್ತು.

ಈ ಸುದ್ದಿ ಓದಿದ್ದೀರಾ? ಜಮ್ಮು ಕಾಶ್ಮೀರ | ಸೇನಾ ವಾಹನ ಹೊತ್ತಿ ಉರಿದು ನಾಲ್ವರು ಸೈನಿಕರು ಸಜೀವ ದಹನ

Advertisements

ವಿಚಾರಣಾ ನ್ಯಾಯಾಲಯವು ನರೋಡಾ ಪಾಟಿಯಾ ಪ್ರಕರಣದಲ್ಲಿ ಕೊಡ್ನಾನಿ ಮತ್ತು ಬಜರಂಗಿ ಇಬ್ಬರನ್ನೂ ದೋಷಿಗಳೆಂದು ಘೋಷಿಸಿ ಜೀವಾವಧಿ ಶಿಕ್ಷೆ ವಿಧಿಸಿತ್ತು. ಆದಾಗ್ಯೂ, ಗುಜರಾತ್ ಹೈಕೋರ್ಟ್ ಕೊಡ್ನಾನಿ ಅವರ ಶಿಕ್ಷೆಯನ್ನು ರದ್ದುಗೊಳಿಸಿ ಅವರನ್ನು ಖುಲಾಸೆಗೊಳಿಸಿತು. 2018 ರಲ್ಲಿ ನರೋಡಾ ಪಾಟಿಯಾ ಪ್ರಕರಣದಲ್ಲಿ ಬಜರಂಗಿ ಅವರ ಶಿಕ್ಷೆಯನ್ನು ಎತ್ತಿಹಿಡಿದಿತ್ತು.

ಫೆಬ್ರವರಿ 27, 2002 ರಂದು ಗೋಧ್ರಾದಲ್ಲಿ ಸಾಬರಮತಿ ಎಕ್ಸ್‌ಪ್ರೆಸ್ ಅನ್ನು ಸುಟ್ಟುಹಾಕಿದ ನಂತರ ಗುಜರಾತ್‌ನಲ್ಲಿ ನಡೆದ ಒಂಬತ್ತು ಪ್ರಮುಖ ಗಲಭೆಗಳಲ್ಲಿ ನರೋಡಾ ಗಾಮ್ ಪ್ರಕರಣವೂ ಸೇರಿದೆ. ಪ್ರಕರಣದ ತ್ವರಿತ ವಿಚಾರಣೆಗೆ ಆದೇಶಿಸಲಾಯಿತು. ವಿಚಾರಣೆಗಳು ಗೊತ್ತುಪಡಿಸಿದ ನ್ಯಾಯಾಲಯಗಳಿಗೆ ಬದ್ಧವಾಗಿದ್ದು, ಸುಪ್ರೀಂ ಕೋರ್ಟ್‌ನಿಂದ ಮೇಲ್ವಿಚಾರಣೆ ಮಾಡಲ್ಪಟ್ಟಿದೆ. ಆದರೂ ನರೋಡಾ ಗಾಮ್ ಪ್ರಕರಣದ ತೀರ್ಪು ಪ್ರಕಟವಾಗಲು 21 ವರ್ಷಗಳನ್ನು ತೆಗೆದುಕೊಳ್ಳಲಾಗಿದೆ.

ಫೆಬ್ರವರಿ 28, 2002 ರಂದು, ಅಹಮದಾಬಾದ್‌ನ ನರೋಡಾ ಗಾಮ ಪ್ರದೇಶದ ಮುಸ್ಲಿಂ ಮಹೋಲ್ಲಾ, ಕುಂಭರ್ ವಾಸ್ ಎಂಬ ಪ್ರದೇಶದಲ್ಲಿದ್ದ ಮನೆಗಳಿಗೆ ಬೆಂಕಿ ಹಚ್ಚಿದ ನಂತರ 11 ಮುಸ್ಲಿಂ ಸಮುದಾಯದವರನ್ನು ಸುಟ್ಟುಹಾಕಲಾಗಿತ್ತು. ಪ್ರಕರಣ ಸಂಬಂಧ ನರೋಡಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

Download Eedina App Android / iOS

X