ಶರದ್ ಪವಾರ್ ರಾಜೀನಾಮೆ ತಿರಸ್ಕರಿಸಿದ ಎನ್‌ಸಿಪಿ ಸಮಿತಿ

Date:

Advertisements
  • ಮೇ 2ರಂದು ಹುದ್ದೆ ತೊರೆದಿದ್ದ ಶರದ್ ಪವಾರ್
  • ನೂತನ ಅಧ್ಯಕ್ಷರ ಆಯ್ಕೆಗೆ 18 ಜನರ ಸಮಿತಿ ರಚನೆ

ಶರದ್ ಪವಾರ್ ಅವರು ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ (ಎನ್‌ಸಿಪಿ) ಅಧ್ಯಕ್ಷ ಸ್ಥಾನಕ್ಕೆ ನೀಡಿದ ರಾಜೀನಾಮೆಯನ್ನು ಪಕ್ಷದ ನೂತನ ಅಧ್ಯಕ್ಷರ ಆಯ್ಕೆ ಸಂಬಂಧ ರಚಿಸಿದ್ದ ಎನ್‌ಸಿಪಿ ಸಮಿತಿ ಶುಕ್ರವಾರ (ಮೇ 5) ತಿರಸ್ಕರಿಸಿದೆ.

ನೂತನ ಅಧ್ಯಕ್ಷರ ಆಯ್ಕೆ ಸಂಬಂಧ 18 ಜನರ ಸಮಿತಿಯನ್ನು ಪಕ್ಷದ ಹಿರಿಯ ನಾಯಕ ಪ್ರಫುಲ್‌ ಪಟೇಲ್ ಅವರ ನೇತೃತ್ವದಲ್ಲಿ ರಚಿಸಲಾಗಿತ್ತು.

ಅಜಿತ್ ಪವಾರ್, ಸುಪ್ರಿಯಾ ಸುಳೆ, ಮಾಜಿ ಕೇಂದ್ರ ಸಚಿವ ಪ್ರಪುಲ್‌ ಪಟೇಲ್ ಮತ್ತು ಛಗನ್ ಭುಜಬಲ್ ಅವರ ಆಯ್ಕೆ ಸಮಿತಿಯನ್ನು ಪವಾರ್ ರಚನೆ ಮಾಡಿದ್ದರು.

Advertisements

ಬೆಳಿಗ್ಗೆಯಿಂದಲೇ ಎನ್‌ಸಿಪಿ ಕಚೇರಿ ಮುಂದೆ ಜಮಾಯಿಸಿರುವ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು, ಶರದ್ ಪವಾರ್ ಅವರು ಹುದ್ದೆ ತೊರೆಯಬಾರದು ಎಂದು ಆಗ್ರಹಿಸಿದ್ದರು.

ಸಭೆಯ ಬಳಿಕ ಸಮಿತಿಯ ಉಪಾಧ್ಯಕ್ಷ ಪ್ರಫುಲ್‌ ಪಟೇಲ್ ಅವರು ಮಾಹಿತಿ ನೀಡಿದ್ದು, “ಪವಾರ್ ಅವರೇ ಅಧ್ಯಕ್ಷರಾಗಿ ಮುಂದುವರಿಯಬೇಕು ಎಂಬುದು ನಮ್ಮ ನಿಲುವು. ಪವಾರ್ ಅವರನ್ನು ಇಂದು ಭೇಟಿಯಾಗಿ ವಿಷಯವನ್ನು ಅವರ ಮುಂದಿಡುತ್ತೇವೆ” ಎಂದು ಹೇಳಿದರು.

“ಸಮಿತಿಯು ಸರ್ವಾನುಮತದಿಂದ ಪವಾರ್ ಅವರ ರಾಜೀನಾಮೆ ತಿರಸ್ಕರಿಸಿ ನಿರ್ಣಯ ಅಂಗೀಕರಿಸಿದೆ. ಅವರು ಪಕ್ಷದ ಅಧ್ಯಕ್ಷರಾಗಿ ಮುಂದುವರಿಯುವಂತೆ ಒತ್ತಾಯಿಸುತ್ತದೆ” ಎಂದು ಸಮಿತಿಯ ಸಭೆಯ ನಂತರ ಪ್ರಪುಲ್ ಪಟೇಲ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಎನ್‌ಸಿಪಿ ಅಧ್ಯಕ್ಷ ಸ್ಥಾನಕ್ಕೆ ಪವಾರ್ ಅವರು ಮೇ 2ರಂದು ರಾಜೀನಾಮೆ ಘೋಷಿಸಿದ್ದರು. ಎರಡು ದಿನಗಳ ಬಳಿಕ ಅವರ ಉತ್ತರಾಧಿಕಾರಿ ಸ್ಥಾನವನ್ನು ಅಜಿತ್ ಪವಾರ್ ಅಥವಾ ಸುಪ್ರಿಯಾ ಸುಳೆ ಇಲ್ಲವೇ ಕುಟುಂಬದ ಹೊರಗಿನವರು ವಹಿಸಿಕೊಳ್ಳಬಹುದಾ? ಎಂಬ ಕುತೂಹಲ ಉಂಟಾಗಿತ್ತು. ಆದರೆ ಸಮಿತಿ ನಿರ್ಧಾರದ ನಂತರ ಪವಾರ್ ಮುಂದಿನ ನಡೆ ಕುತೂಹಲ ಕೆರಳಿಸಿದೆ.

ಈ ಸುದ್ದಿ ಓದಿದ್ದೀರಾ? ನನ್ನ ರಾಜ್ಯ ಹೊತ್ತಿ ಉರಿಯುತ್ತಿದೆ, ದಯವಿಟ್ಟು ಸಹಾಯ ಮಾಡಿ; ಮೇರಿ ಕೋಮ್‌ ಮನವಿ

ಪವಾರ್ ಅವರು ಮಹಾರಾಷ್ಟ್ರ ರಾಜಕಾರಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ತಮ್ಮ ರಾಜೀನಾಮೆ ಘೋಷಣೆಯ ನಂತರ ಹೊಸ ಅಧ್ಯಕ್ಷರ ಅಯ್ಕೆಗೆ ಸಮಿತಿ ರಚಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X