- ಸುಳ್ಳು ಸುದ್ದಿ ಲಕ್ಷಾಂತರ ಜನರ ದಾರಿತಪ್ಪಿಸಬಲ್ಲದು
- ಪ್ರಜಾಪ್ರಭುತ್ವದ ಮೂಲ ಆಶಯಗಳಿಗೆ ವ್ಯತಿರಿಕ್ತವಾಗಿದೆ
ಎಲೆಕ್ಟ್ರಾನಿಕ್ ಮಾಧ್ಯಮಕ್ಕೆ ಸ್ವಯಂ ನಿಯಂತ್ರಣ ಹಾಕಲು ಸಾಧ್ಯವಿಲ್ಲ. ಅದಕ್ಕಾಗಿ ಇ-ಮಾಧ್ಯಮ ನಿಯಂತ್ರಣ ಸಂಸ್ಥೆ (ರೆಗ್ಯೂಲೇಟರಿ ಬಾಡಿ)ಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಬಿ ವಿ ನಾಗರತ್ನ ಪ್ರತಿಪಾದಿಸಿದ್ದಾರೆ.
ನವದೆಹಲಿಯಲ್ಲಿ ಆಯೋಜಿಸಿದ್ದ ಬಿಸಿನೆಸ್ ಸ್ಟ್ಯಾಂಡರ್ಡ್ ಸೀಮಾ ನಜರೆತ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ‘ಮುಕ್ತ ಮತ್ತು ಸಮತೋಲಿತ ಮಾಧ್ಯಮ – ಪ್ರಜಾಪ್ರಭುತ್ವದ ಕಾವಲುಗಾರ’ ವಿಷಯದ ಕುರಿತು ಅವರು ಮಾತನಾಡಿದರು. “ಪತ್ರಿಕಾ ಸ್ವಾತಂತ್ರ್ಯವನ್ನು ಕಾಪಾಡಿಕೊಂಡೇ ಮಾಧ್ಯಮಗಳ ವಿರುದ್ಧದ ದೂರನ್ನು ನಿರ್ವಹಿಸುವ ವ್ಯವಸ್ಥೆ ಜಾರಿಗೆ ಬರಬೇಕಾಗಿದೆ” ಎಂದು ಹೇಳಿದ್ದಾರೆ.
ಸುಳ್ಳು ಸುದ್ದಿ, ಪೀತ ಪತ್ರಿಕೋದ್ಯಮ ಹಾಗೂ ಮಾಧ್ಯಮಗಳಿಂದ ಭೀತಿ ಉಂಟಾಗುವ ಸಾಧ್ಯತೆ ಇದೆ. ಸುಳ್ಳು ಸುದ್ದಿ ಲಕ್ಷಾಂತರ ಜನರನ್ನು ಒಂದು ಕ್ಷಣಕ್ಕೆ ದಾರಿತಪ್ಪಿಸಬಲ್ಲದು. ಇದು ನಮ್ಮ ಅಸ್ತಿತ್ವಕ್ಕೆ ಬುನಾದಿ ಹಾಕುವ ಪ್ರಜಾಪ್ರಭುತ್ವದ ಮೂಲ ಆಶಯಗಳಿಗೆ ವ್ಯತಿರಿಕ್ತವಾಗಿದೆ ಎಂಬುದನ್ನು ಮರೆಯಬಾರದು ಎಂದು ಜಸ್ಟಿಸ್ ನಾಗರತ್ನ ಕಳವಳ ವ್ಯಕ್ತಪಡಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ದೆಹಲಿ | ಜಂತರ್ಮಂತರ್ನಲ್ಲಿ ಪ್ರತಿಭಟನಾನಿರತ ಕುಸ್ತಿಪಟುಗಳು ಹಾಗೂ ಪೊಲೀಸರ ನಡುವೆ ತಿಕ್ಕಾಟ
ಒಂದು ದೇಶ ಪ್ರಜಾಸತ್ತಾತ್ಮಕವಾಗಿ ಉಳಿಯಬೇಕಾದರೆ, ಮಾಧ್ಯಮಗಳು ನಿಜವಾದ ಅರ್ಥದಲ್ಲಿ ಮುಕ್ತ ಮತ್ತು ನಿರ್ಭೀತವಾಗಿರಬೇಕು, ಪಾರದರ್ಶಕವಾಗಿರಬೇಕು ಎಂದು ಅವರು ಹೇಳಿದ್ದಾರೆ.