ಗುಜರಾತ್ | ಉದ್ಘಾಟನೆಗೂ ಮುನ್ನವೇ ಮುರಿದು ಬಿತ್ತು ಸೇತುವೆ

Date:

Advertisements

ಹೊಸದಾಗಿ ನಿರ್ಮಾಣವಾಗಿದ್ದ ಸೇತುವೆ ಉದ್ಘಾಟನೆಗೂ ಮುನ್ನವೇ ಕುಸಿದು ಬಿದ್ದಿರುವ ಘಟನೆ ಗುಜರಾತ್‌ ರಾಜ್ಯದ ತಾಪಿ ಜಿಲ್ಲೆಯಲ್ಲಿ ಬುಧವಾರ ನಡೆದಿದೆ.

ಮಿಂಡೋಲಾ ನದಿಯ ಮೇಲೆ ನಿರ್ಮಿಸಲಾಗಿದ್ದ ಸೇತುವೆಯು ಇನ್ನೂ ಉದ್ಘಾಟನೆಯಾಗಿರಲಿಲ್ಲ. ವಾಲೋಡ್ ತಾಲ್ಲೂಕಿನ ಮಾಯ್‌ಪುರ್ ಗ್ರಾಮ ಹಾಗೂ ವ್ಯಾರಾ ತಾಲ್ಲೂಕಿನ ದೇಹ್‌ಗಮಾ ಗ್ರಾಮಗಳ ನಡುವಿನ ಕೊಂಡಿಯಾಗಿದ್ದ ಸೇತುವೆಯು ಮಧ್ಯಭಾಗವು ಮಿಂಡೋಲಾ ನದಿಯೊಳಗೆ ಮುರಿದು ಬಿದ್ದಿದೆ.

ತಾಪಿ ಜಿಲ್ಲಾಧಿಕಾರಿ ವಿಪಿನ್ ಗಾರ್ಗ್ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, “ಸೇತುವೆಯು ಇನ್ನೂ ಉದ್ಘಾಟನೆಯಾಗದ ಕಾರಣ ಸಂಚಾರಕ್ಕೆ ಮುಕ್ತಗೊಳಿಸಿರಲಿಲ್ಲ. ಸೇತುವೆಯ ಕೆಲವು ಭಾಗಗಳು ಕುಸಿದುಬಿದ್ದಿವೆ. ಈ ಘಟನೆಯ ತನಿಖೆಗೆ ಆದೇಶ ನೀಡಲಾಗಿದ್ದು, ಅದರ ನಿರ್ಮಾಣಕ್ಕೆ ಬಳಸಿದ್ದ ವಸ್ತುಗಳ ಗುಣಮಟ್ಟದ ಬಗ್ಗೆಯೂ ಪರಿಶೀಲನೆ ನಡೆಸಲು ಸೂಚಿಸಲಾಗಿದೆ” ಎಂದು ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ಗೆ ತಿಳಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ: ಈ ದಿನ ಸಂಪಾದಕೀಯ | ಅಕಾಡೆಮಿ, ಪ್ರಾಧಿಕಾರಗಳ ಅಧ್ಯಕ್ಷಗಿರಿ; ಸರ್ಕಾರಕ್ಕೆ ಇರಲಿ ಎಚ್ಚರ

ಸ್ಥಳೀಯರು ಹೇಳುವ ಪ್ರಕಾರ, ಇದೇ ಜಾಗದಲ್ಲಿ ಹಿಂದೆಯೂ ಸೇತುವೆಯೊಂದು ಇತ್ತು. ಆದರೆ, ಅದು ಮಳೆಗಾಲದಲ್ಲಿ ನೀರಿನಲ್ಲಿ ಮುಳುಗಡೆಯಾಗುತ್ತಿತ್ತು. ಅದರಿಂದ ಜನ ತೊಂದರೆ ಅನುಭವಿಸುತ್ತಿದ್ದರು. ಈ ಬಗ್ಗೆ ಜನಪ್ರತಿನಿಧಿಗಳಿಗೆ ಹಾಗೂ ಸರ್ಕಾರಕ್ಕೆ ಹಲವು ಬಾರಿ ಜನ ದೂರು ನೀಡಿದ ಮೇಲೆ, 2021ರಲ್ಲಿ ಹೊಸ ಸೇತುವೆಯ ನಿರ್ಮಾಣ ಕಾರ್ಯ ಆರಂಭವಾಗಿತ್ತು. ಸೇತುವೆ ನಿರ್ಮಾಣ ಕಾರ್ಯ ಸಂಪೂರ್ಣಗೊಂಡಿದ್ದು, ಉದ್ಘಾಟನೆ ನಂತರ ಸಂಚಾರಕ್ಕೆ ಅನುವು ಮಾಡಿಕೊಡಲು ತೀರ್ಮಾನಿಸಲಾಗಿತ್ತು. ಅಷ್ಟರಲ್ಲಿಯೇ ಅನಾಹುತ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೊರ್ಬಿ ದುರಂತ

ಗುಜರಾತ್ ರಾಜ್ಯದ ಮೊರ್ಬಿ ಜಿಲ್ಲೆಯಲ್ಲಿ 2022ರ ಅಕ್ಟೋಬರ್ 30ರಂದು ತೂಗುಸೇತುವೆ ಕುಸಿದು 135ಕ್ಕೂ ಹೆಚ್ಚು ಜನ ಮೃತಪಟ್ಟಿದ್ದರು. ಸೇತುವೆಯ ದುರಸ್ತಿ ಮತ್ತು ನಿರ್ವಹಣೆಯನ್ನು ಖಾಸಗಿ ಸಂಸ್ಥೆಗೆ ನೀಡಲಾಗಿತ್ತು. ಸರ್ಕಾರ ಮತ್ತು ಖಾಸಗಿ ಸಂಸ್ಥೆಯ ತಪ್ಪಿನಿಂದ ದುರಂತ ಸಂಭವಿಸಿದೆ ಎನ್ನುವ ಆರೋಪಗಳು ವ್ಯಕ್ತವಾಗಿದ್ದವು.

ಇದೀಗ ಹೊಸದಾಗಿ ನಿರ್ಮಿಸಲಾಗಿದ್ದ ಸೇತುವೆಯು ಉದ್ಘಾಟನೆಗೂ ಮುನ್ನವೇ ಮುರಿದು ಬಿದ್ದಿರುವುದು ‘ಗುಜರಾತ್ ಮಾಡೆಲ್‌’ನ ಫಲ ಎಂದು ನೆಟ್ಟಿಗರು ವ್ಯಂಗ್ಯ ಮಾಡುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X